ವಾಂಗ್‌ಚುಕ್ ಆರೋಗ್ಯ ಚೆನ್ನಾಗಿಲ್ಲ, ಬಂಧನದ ಬಗ್ಗೆ ಮರುಪರಿಶೀಲಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

Date:

ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಚೆನ್ನಾಗಿಲ್ಲ. ಆದ ಕಾರಣದಿಂದಾಗಿ ಅವರ ಬಂಧನದ ಬಗ್ಗೆ ಮರುಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ, ಶಿಕ್ಷಣತಜ್ಞ ವಾಂಗ್‌ಚುಕ್ ಅವರನ್ನು ಸೆಪ್ಟೆಂಬರ್‌ನಲ್ಲಿ ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ. ನಾಲ್ವರ ಸಾವಿಗೆ ಕಾರಣವಾದ ಲಡಾಖ್ ಹಿಂಸಾಚಾರಕ್ಕೆ ವಾಂಗ್‌ಚುಕ್ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಹೇಳಿ ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ? ಸೋನಮ್ ವಾಂಗ್‌ಚುಕ್ ಜೈಲು ಸೇರಿ 100 ದಿನ: ಲಡಾಖ್ ಜನರಿಗಾಗಿ ಧ್ವನಿಯೆತ್ತಿ ಮೋದಿ ಶತ್ರುವಾದರೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂದು ನಿರಂತರವಾಗಿ ಹೋರಾಡುತ್ತಾ ಬಂದವರು ಸೋನಮ್. ಸದ್ಯ 100ಕ್ಕೂ ಅಧಿಕ ದಿನಗಳಿಂದ ಜೋಧಪುರ ಜೈಲಿನಲ್ಲಿದ್ದು, ಅವರ ಆರೋಗ್ಯ ನಿರಂತರವಾಗಿ ಹದಗೆಡುತ್ತಿದೆ.

ವಾಂಗ್‌ಚುಕ್ ಅವರ ವೈದ್ಯಕೀಯ ವರದಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ ಬಿ ವರಾಲೆ ಅವರ ಪೀಠವು, “ನ್ಯಾಯಾಲಯದ ಅಧಿಕಾರಿಯಾಗಿ ಈ ಬಗ್ಗೆ ಒಮ್ಮೆ ಯೋಚಿಸಿ. ಬಂಧನ ಆದೇಶವು ಸುಮಾರು ಐದು ತಿಂಗಳು ಹಳೆಯದು. ಬಂಧಿತನ ಆರೋಗ್ಯ ಸ್ಥಿತಿಯನ್ನು ನೋಡಿದರೆ, ಖಂಡಿತವಾಗಿಯೂ ಉತ್ತಮವಾಗಿಲ್ಲ. ಆದ್ದರಿಂದಾಗಿ ಬಂಧನ ಆದೇಶವನ್ನು ಮತ್ತೆ ಪರಿಶೀಲಿಸಬೇಕಾಗುತ್ತದೆ” ಎಂದು ಹೇಳಿದೆ.

ಇನ್ನು ಈಗಾಗಲೇ ವಾಂಗ್‌ಚುಕ್ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಈ ವೇಳೆಯೇ ವೈದ್ಯಕೀಯ ವರದಿ ಪರಿಶೀಲಿಸಿದೆ. ಕೇಂದ್ರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಎಂ ನಟರಾಜ್ ಅವರನ್ನು ಉದ್ದೇಶಿಸಿ ಮಾತನಾಡಿದ ಪೀಠ, “ಸರ್ಕಾರವು ಪುನರ್ವಿಮರ್ಶಿಸಲು, ಮರುಪರಿಶೀಲಿಸಲು ಸಾಧ್ಯತೆ ಇದೆಯೇ” ಎಂದು ಪ್ರಶ್ನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...