ನಿಠಾರಿ ಸರಣಿ ಹತ್ಯೆ ಪ್ರಕರಣ: ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್‌

Date:

ಉತ್ತರ ಪ್ರದೇಶದ ನೋಯ್ಡಾದಲ್ಲಿ 2005-2006ರ ಅವಧಿಯಲ್ಲಿ ನಡೆದ ನಿಠಾರಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಕೊನೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿದೆ. ಕೋಲಿ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ನ್ಯಾಯಾಲಯ ಒಪ್ಪಿದೆ.

ಸಾಕ್ಷ್ಮಾಧಾರಗಳ ಕೊರತೆಯಿಂದಾಗಿ ಆರೋಪಿಗಳು ಖುಲಾಸೆಗೊಂಡಿದ್ದರೂ, ಈ ಪ್ರಕರಣವು ದೇಶದ ಅಪರಾಧ ಇತಿಹಾಸದಲ್ಲಿ ಅತ್ಯಂತ ಘೋರ ಮತ್ತು ರಹಸ್ಯಮಯ ಘಟನೆಗಳಲ್ಲಿ ಒಂದಾಗಿ ಉಳಿದಿದೆ.

2006ರ ಡಿಸೆಂಬರ್‌ನಲ್ಲಿ ನೋಯ್ಡಾದ ನಿಠಾರಿ ಗ್ರಾಮದ ಮನೆಯೊಂದರ ಚರಂಡಿಯಲ್ಲಿ ಹಲವು ಮಕ್ಕಳು, ಯುವತಿಯರ ಅಸ್ಥಿಪಂಜರಗಳು ಪತ್ತೆಯಾದಾಗ ಈ ಹತ್ಯಾಕಾಂಡವು ಬೆಳಕಿಗೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2004 ಮತ್ತು 2006ರ ನಡುವೆ ನಿಠಾರಿ ಹತ್ಯಾಕಾಂಡ ಸಂಭವಿಸಿದೆ ಎನ್ನಲಾಗಿದ್ದು ದೇಶವನ್ನೇ ಬೆಚ್ಚಿ ಬೀಳಿಸಿದ ಪ್ರಕರಣ ಇದಾಗಿದೆ. ಬಂಗಲೆಯ ಮಾಲೀಕ ಮಣಿಂದರ್ ಸಿಂಗ್ ಪಂದೇರ್ ಮತ್ತು ಆತನ ಮನೆ ಕೆಲಸಗಾರ ಸುರೇಂದ್ರ ಕೋಲಿ ಮಕ್ಕಳನ್ನು, ಯುವತಿಯನ್ನು ಬಂಗಲೆಗೆ ಕರೆತಂದು ಅತ್ಯಾಚಾರ ಎಸಗಿ, ಕೊಂದು ದೇಹಗಳನ್ನು ಛಿದ್ರಗೊಳಿಸಿ ಚರಂಡಿಯಲ್ಲಿ ಎಸೆಯುತ್ತಿದ್ದರು ಎಂದು ಆರೋಪಿಸಲಾಗಿತ್ತು.

15 ವರ್ಷದ ಬಾಲಕಿಯ ಹತ್ಯೆಗೆ ಸಂಬಂಧಿಸಿದಂತೆ ಕೋಲಿಗೆ ವಿಧಿಸಿದ ಶಿಕ್ಷೆಯನ್ನು 2011ರಲ್ಲಿ ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಆದರೆ ಅಲಹಾಬಾದ್ ಹೈಕೋರ್ಟ್ ಕೋಲಿ ವಿರುದ್ಧದ ಉಳಿದ 12 ಪ್ರಕರಣಗಳಲ್ಲಿ ಕೋಲಿಯನ್ನು ಖುಲಾಸೆಗೊಳಿಸಿತ್ತು. ಇದಾದ ಬಳಿಕ ಮರುಪರಿಶೀಲನಾ ಅರ್ಜಿಯನ್ನು ವಜಾ ಮಾಡಿದ ನಂತರ ಸಲ್ಲಿಸಲಾಗುವ ಕ್ಯುರೇಟಿವ್ ಅರ್ಜಿಯನ್ನು ಕೋಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ.

ಇದನ್ನು ಓದಿದ್ದೀರಾ? ನಿತಾರಿ ಹತ್ಯಾಕಾಂಡ: ಹೈಕೋರ್ಟ್‌ನಿಂದ ಸುರೇಂದ್ರ ಕೋಲಿ ಬಿಡುಗಡೆ ಪ್ರಶ್ನಿಸಿದ ಸಿಬಿಐ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರ ಪೀಠವು ಇಂದು ಕೋಲಿಯನ್ನು ಖುಲಾಸೆಗೊಳಿಸಿದ್ದು, ಕೊನೆಯ ಪ್ರಕರಣದಲ್ಲಿ ಶಿಕ್ಷೆಯನ್ನು ರದ್ದುಗೊಳಿಸಿದೆ.

“ಅರ್ಜಿದಾರರನ್ನು ಆರೋಪಗಳಿಂದ ಮುಕ್ತಗೊಳಿಸಲಾಗಿದೆ. ಅರ್ಜಿದಾರರನ್ನು ತಕ್ಷಣವೇ ಬಿಡುಗಡೆ ಮಾಡಲಾಗುತ್ತದೆ” ಎಂದು ತೀರ್ಪು ನೀಡುವಾಗ ನ್ಯಾಯಮೂರ್ತಿ ನಾಥ್ ಹೇಳಿದ್ದಾರೆ.

ಅಕ್ಟೋಬರ್ 7ರಂದು ಕೋಲಿಯ ಕ್ಯುರೇಟಿವ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಹೇಳಿಕೆ ಮತ್ತು ಅಡುಗೆಗೆ ಬಳಸಿದ ಚಾಕುವನ್ನು ವಶಪಡಿಸಿಕೊಂಡ ಆಧಾರದ ಮೇಲೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಲಯವು ಹೇಳಿತ್ತು. ಹಾಗೆಯೇ ಉಳಿದ ಪ್ರಕರಣಗಳಲ್ಲಿ ಖುಲಾಸೆಯಾಗಿರುವುದರಿಂದ ಈ ಅಸಂಗತ ಪರಿಸ್ಥಿತಿ ಉದ್ಭವಿಸಿದೆ ಎಂದೂ ಹೇಳಿತ್ತು.

ಒಟ್ಟು 19 ಪ್ರಕರಣಗಳನ್ನು ಆರೋಪಿಗಳ ವಿರುದ್ಧ ದಾಖಲಿಸಲಾಗಿತ್ತು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಬಿಐ ಮೂರು ಪ್ರಕರಣಗಳನ್ನು ಕೊನೆಗೊಳಿಸಿತ್ತು. ಅದಾದ ಬಳಿಕ ಕೆಳ ನ್ಯಾಯಾಲಯಗಳು ಒಟ್ಟು 12 ಪ್ರಕರಣಗಳಲ್ಲಿ ಕೋಲಿಯನ್ನು ಮತ್ತು ಕೆಲವು ಪ್ರಕರಣಗಳಲ್ಲಿ ಪಂಧೇರ್‌ನನ್ನು ತಪ್ಪಿತಸ್ಥರೆಂದು ಪರಿಗಣಿಸಿ ಮರಣದಂಡನೆ ವಿಧಿಸಿತ್ತು.

ಆದರೆ 2023ರ ಅಕ್ಟೋಬರ್‌ನಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಎಲ್ಲಾ ಪ್ರಕರಣಗಳಲ್ಲಿ ಸುರೇಂದ್ರ ಕೋಲಿ ಮತ್ತು ಪಂಧೇರ್‌ನನ್ನು ಅಲಹಾಬಾದ್ ಕೋರ್ಟ್ ಖುಲಾಸೆಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, 2025ರ ಜುಲೈನಲ್ಲಿ ಉನ್ನತ ನ್ಯಾಯಾಲಯ ಹೈಕೋರ್ಟ್ ತೀರ್ಪು ಎತ್ತಿಹಿಡಿದು ಮೇಲ್ಮನವಿಗಳನ್ನು ವಜಾಗೊಳಿಸಿತ್ತು. ಇದೀಗ ಕೊನೆಯ ಒಂದು ಪ್ರಕರಣದಲ್ಲೂ ಸಾಕ್ಷ್ಯಾಧಾರ ಕೊರತೆಯಿಂದ ಕೋಲಿಯನ್ನು ಖುಲಾಸೆಗೊಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...