EVMನಲ್ಲಿ ಬಿಜೆಪಿಗೆ ಹೆಚ್ಚು ಮತ: ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

Date:

ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ನಡೆಸುವ ಸಂದರ್ಭದಲ್ಲಿ ಬಿಜೆಪಿಗೆ ಹೆಚ್ಚು ಮತ ಲಭಿಸಿದ ಹಿನ್ನೆಲೆ ಸುಪ್ರೀಂ ಕೋರ್ಟ್ ಆರೋಪ ಪರಿಶೀಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಇವಿಎಂ-ವಿವಿಪ್ಯಾಟ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತ ಅವರ ಪೀಠ ಮೌಖಿಕ ನಿರ್ದೇಶನ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಯಂಸೇವಾ ಸಂಸ್ಥೆ ಎಡಿಆರ್ ಪರವಾಗಿ ಹಾಜರಾಗಿದ್ದ ನ್ಯಾಯವಾದಿ ಪ್ರಶಾಂತ್ ಭೂಷಣ್, ಕೇರಳದ ಕಾಸರಗೋಡು ಕ್ಷೇತ್ರದಲ್ಲಿಇವಿಎಂ ಮೂಲಕ ಅಣಕು ಮತದಾನ ಮಾಡುವ ಸಂದರ್ಭದಲ್ಲಿ ಬಿಜೆಪಿಗೆ ಒಂದು ಹೆಚ್ಚು ಮತ ದಾಖಲಾಗಿದ್ದನ್ನು ಮಾಧ್ಯಮವೊಂದು ಪ್ರಕಟಿಸಿದ್ದ ವರದಿಯನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಇದನ್ನು ಗಮನಿಸಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಚುನಾವಣಾ ಆಯೋಗದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಮಣಿಂದರ್‌ ಸಿಂಗ್‌ ಅವರಿಗೆ ಪರಿಶೀಲನೆಗೊಳಪಡಿಸುವಂತೆ ನಿರ್ದೇಶನ ನೀಡಿದರು.

ಬಿಜೆಪಿಗೆ ಹೆಚ್ಚುವರಿ ಮತ ದಾಖಲಾದ ಈ ವರದಿಯನ್ನು ಆಧರಿಸಿ ಕೇರಳದ ಆಡಳಿತ ಪಕ್ಷ ಎಲ್‌ಡಿಎಫ್ ಹಾಗೂ ವಿಪಕ್ಷ ಯುಡಿಎಫ್ 4 ಇವಿಎಂಗಳ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿತ್ತು.

ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನ ನಡೆಸಲು ಚುನಾವಣೆ ಪ್ರಕ್ರಿಯೆ ಪಾವಿತ್ರತೆ ಹೊಂದಿರಬೇಕು ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

“ಇದೊಂದು ಚುನಾವಣಾ ಪ್ರಕ್ರಿಯೆ. ಇಲ್ಲಿ ಪಾವಿತ್ರ್ಯತೆ ಇರಬೇಕು. ಇಲ್ಲಿ ಏನೋ ನಡೆಯುತ್ತಿದೆ ಎಂಬ ಆತಂಕ ಯಾರೊಬ್ಬರಿಗೂ ಅನಿಸಬಾರದು” ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್‌ ದತ್ತಾ ನೇತೃತ್ವದ ಪೀಠ ಚುನಾವಣಾ ಆಯೋಗಕ್ಕೆ ತಿಳಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...