ಸಂಸದರು, ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ವಿಚಾರಣೆಗಳಿಗೆ ವಿಶೇಷ ಪೀಠ ರಚಿಸಿ: ಸುಪ್ರೀಂ ನಿರ್ದೇಶನ

Date:

ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಲೇವಾರಿಗಾಗಿ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನಗಳನ್ನು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಸಂಸದರು/ಶಾಸಕರ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ಹಾಗೂ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಲು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಶೇಷ ಪೀಠ ಸ್ಥಾಪಿಸಬೇಕು ಎಂದು ಆದೇಶಿಸಿದೆ.

ಅಂತಹ ವಿಶೇಷ ಪೀಠವನ್ನು ಮುಖ್ಯ ನ್ಯಾಯಮೂರ್ತಿ ಅವರೇ ನೇತೃತ್ವ ವಹಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸದರು/ಶಾಸಕರ ವಿರುದ್ಧ ಮರಣದಂಡನೆ ವಿಧಿಸಬಹುದಾದ ಪ್ರಕರಣಗಳಿಗೆ ಇತರ ಪ್ರಕರಣಗಳಿಗಿಂತ ಆದ್ಯತೆ ನೀಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ಸಂಬಂಧಪಟ್ಟ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ಅಂತಹ ಪ್ರಕರಣಗಳ ವಿಚಾರಣೆಗೆ ಸಾಕಷ್ಟು ಮೂಲಸೌಕರ್ಯ ಸೌಲಭ್ಯಗಳು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳಲ್ಲಿ ತಿಳಿಸಿದೆ.

ಪ್ರಸ್ತುತ ಆರು ವರ್ಷಗಳ ನಿಷೇಧಕ್ಕೆ ವಿರುದ್ಧವಾಗಿ ಹಾಲಿ ಶಾಸಕರು ಸೇರಿದಂತೆ ಅಪರಾಧ ಹಿನ್ನಲೆ ಹೊಂದಿರುವ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಜೀವಮಾನದ ನಿಷೇಧವನ್ನು ಕೋರಿದ ಮನವಿಯಲ್ಲಿ ಈ ತೀರ್ಪು ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಮಳೆ: ಜನರಿಗೆ ನರಕದಿಂದ ಮುಕ್ತಿ ಸಿಗುವುದೆಂದು?

ಅಜೀವ ನಿಷೇಧದ ಕುರಿತ ಮನವಿಯನ್ನು ನಂತರ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿತು.

ಜನಪ್ರತಿನಿಧಿಗಳು ಸಾರ್ವಜನಿಕರ ಸೇವಕರು ಮತ್ತು ನ್ಯಾಯಾಂಗ ಸದಸ್ಯರಿಗೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ಒಂದು ವರ್ಷದೊಳಗೆ ತೀರ್ಮಾನಿಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಸಾಕಷ್ಟು ಮೂಲಸೌಕರ್ಯಗಳನ್ನು ಒದಗಿಸುವ ಕುರಿತು ಮನವಿ ಮಾಡಲಾಗಿತ್ತು.

ಕ್ರಿಮಿನಲ್ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿರುವ ಸಾರ್ವಜನಿಕ ಪ್ರತಿನಿಧಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧದ ಬಗ್ಗೆ ಹೆಚ್ಚಿನ ತನಿಖೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಆಜೀವ ನಿಷೇಧದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪೀಠ ಹೇಳಿದೆ.

ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವೆಬ್ ಸೈಟ್ ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ವೆಬ್ ಸೈಟ್ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಗಂಭೀರ ಅಪರಾಧದ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಅಶ್ವಿನ್ ಕುಮಾರ್ ಉಪಾಧ್ಯಾಯ ಅವರು ಪ್ರಜಾಪ್ರತಿನಿಧಿ ಕಾಯ್ದೆ, 1951 (ಆರ್‌ಪಿ ಕಾಯ್ದೆ) ಸೆಕ್ಷನ್ 8(3) ಅಡಿಯಲ್ಲಿ ಆರು ವರ್ಷಗಳ ನಿಷೇಧವನ್ನು ತೆರವುಗೊಳಿಸಲು ಮತ್ತು ಜೀವಮಾನದ ನಿಷೇಧದೊಂದಿಗೆ ಅದನ್ನು ಬದಲಿಸಲು ಮನವಿ ಸಲ್ಲಿಸಿದ್ದಾರೆ.

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 8(3) ಅನ್ವಯ, “ಯಾವುದೇ ಅಪರಾಧ ಮಾಡಿರುವ ಹಾಗೂ ಎರಡು ವರ್ಷಗಳಿಗಿಂತ ಕಡಿಮೆಯಿಲ್ಲದಂತೆ ಜೈಲು ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಯನ್ನು ಅಪರಾಧದ ದಿನಾಂಕದಿಂದ ಅನರ್ಹಗೊಳಿಸಲಾಗುತ್ತದೆ ಮತ್ತು ಆತ ಬಿಡುಗಡೆಯಾದ ನಂತರ ಇನ್ನು ಆರು ವರ್ಷಗಳ ಅವಧಿಯವರೆಗೂ ಅನರ್ಹನಾಗಿರುತ್ತಾನೆ.”

ಅಶ್ವಿನ್ ಕುಮಾರ್ ಉಪಾಧ್ಯಾಯ ಅವರ ಮನವಿಯನ್ನು ಭಾರತದ ಚುನಾವಣಾ ಆಯೋಗವು ಬೆಂಬಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...