ಡಿಜಿಟಲ್ ಅರೆಸ್ಟ್ ಪ್ರಕರಣಗಳ ಎಫ್‌ಐಆರ್‌ ಮಾಹಿತಿ ಸಿಬಿಐಗೆ ನೀಡಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

Date:

ಪೊಲೀಸ್ ಅಧಿಕಾರಿಗಳು, ನ್ಯಾಯಾಧೀಶರು ಎಂದು ಹೇಳಿಕೊಂಡು ದೇಶದಲ್ಲಿ ನಡೆದ ಎಲ್ಲಾ ಡಿಜಿಟಲ್ ಅರೆಸ್ಟ್ ಪ್ರಕರಣಗಳಿಗೆ ಸಂಬಂಧಿಸಿದ ಎಫ್‌ಐಆರ್ ಮಾಹಿತಿಗಳನ್ನು ಕೇಂದ್ರ ತನಿಖಾ ದಳಕ್ಕೆ(ಸಿಬಿಐ) ನೀಡುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಸೆಪ್ಟೆಂಬರ್ 1ರಿಂದ 16ರ ನಡುವೆ ಅಂಬಾಲಾದ ಹಿರಿಯ ನಾಗರಿಕ ದಂಪತಿಗಳು ಡಿಜಿಟಲ್ ಬಂಧನಕ್ಕೆ ಒಳಗಾಗಿ ತಮ್ಮ ಜೀವಮಾನದ ಉಳಿತಾಯವೆಲ್ಲವನ್ನೂ ಕಳೆದುಕೊಂಡಿದ್ದಾರೆ.ಈ ಸಂಬಂಧ ದಂಪತಿ ಸೆಪ್ಟೆಂಬರ್ 16ರಂದು ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಇದನ್ನು ಓದಿದ್ದೀರಾ? ಡಿಜಿಟಲ್ ಅರೆಸ್ಟ್ ಪ್ರಕರಣಗಳ ಹೆಚ್ಚಳ: ಸಿಬಿಐ, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯಮಾಲಾ ಬಾಗ್ಚಿ ಅವರ ದ್ವಿಸದಸ್ಯ ಪೀಠವು ಕೇಂದ್ರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ. ಸುಪ್ರೀಂ ಕೋರ್ಟ್ ಹರಿಯಾಣ ಸರ್ಕಾರ ಹಾಗೂ ಅಂಬಾಲಾದ ಸೈಬರ್ ಅಪರಾಧ ಘಟಕಕ್ಕೂ ನೋಟಿಸ್ ನೀಡಿದೆ. ಇದೀಗ ಅದೇ ಪೀಠ ಸೋಮವಾರ ವಿಚಾರಣೆ ಮುಂದುವರಿಸಿದ್ದು ಎಫ್‌ಐಆರ್ ಮಾಹಿತಿಗಳನ್ನು ನೀಡುವಂತೆ ಸೂಚಿಸಿದೆ.

“ದೇಶದ ವಿವಿಧ ಭಾಗಗಳಲ್ಲಿ ಒಂದಕ್ಕಿಂತ ಅಧಿಕ ಇಂತಹ ಪ್ರಕರಣಗಳು ನಡೆದಿವೆ. ಇದು ದೇಶದಾದ್ಯಂತ ಮತ್ತು ದೇಶದ ಎಲ್ಲೆ ಮೀರಿ ನಡೆದಿರುವ/ ನಡೆಯುತ್ತಿರುವ ಅಪರಾಧ ಪ್ರಕರಣವಾದ ಕಾರಣ ದೇಶದಾದ್ಯಂತ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸುವಂತೆ ನಾವು ಸಿಬಿಐಗೆ ಸೂಚನೆ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಅಟಾರ್ನಿ ಜನರಲ್ ಆರ್‌ ವೆಂಕಟರಮಣಿ, “ಈ ಹಗರಣಗಳ ರುವಾರಿಗಳು ದೇಶದ ಹೊರಭಾಗದಲ್ಲಿದ್ದಾರೆ. ಮೈಯನ್ಮಾರ್, ಥೈಲ್ಯಾಂಡ್ ಸೇರಿದಂತೆ ಏಷ್ಯಾದ ಹಲವು ಭಾಗಗಳಲ್ಲಿ ಈ ತಂಡವಿದೆ” ಎಂದರು.

ಇನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾಲ್‌ ಸೆಂಟರ್ ಕಚೇರಿ ತೆರೆದು ಅದರಲ್ಲೇ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಅಮೆರಿಕ, ಕೆನಡಾದ ಪ್ರಜೆಗಳನ್ನು ವಂಚಿಸುತ್ತಿದ್ದ ವಿವಿಧ ರಾಜ್ಯಗಳ 16 ಮಂದಿಯನ್ನು ಎಚ್‌ಎಸ್‌ಆರ್ ಲೇಔಟ್‌ನ ಪೊಲೀಸರು ಬಂಧಿಸಿದ್ದಾರೆ. ‘ಸಿಬಿಟ್ಸ್ ಸಲ್ಯೂಷನ್ಸ್‌ ಪ್ರೈವೇಟ್ ಲಿಮಿಟೆಡ್’ ಎಂಬ ಹೆಸರಲ್ಲಿ ಕಂಪನಿಯನ್ನು ನಡೆಸಲಾಗುತ್ತಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...