ಟೈಮ್ಸ್‌ ಆಫ್‌ ಇಂಡಿಯಾ ಮೇಲಿನ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

Date:

ಟೈಮ್ಸ್‌ ಆಫ್‌ ಇಂಡಿಯಾದ ಓದುಗರಿಗೆ ಪತ್ರಿಕೆಯ ಎಲ್ಲಾ ಪುರವಣಿಗಳು ಹಾಗೂ ಭಾನುವಾರದ ನಿಯತಕಾಲಿಕೆಗಳು ಸಂಪೂರ್ಣವಾಗಿ ಸಿಗುವಂತಾಗಬೇಕು ಎಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

“ನ್ಯಾಯಾಲಯವು ಟೈಮ್ಸ್‌ ಆಫ್‌ ಇಂಡಿಯಾ ವಿರುದ್ಧ ರಿಟ್‌ ಅರ್ಜಿ ಸ್ವೀಕರಿಸಲು, ಅದೊಂದು ರಾಜ್ಯವೇ” ಎಂದು ಪ್ರಶ್ನಿಸಿದ ನ್ಯಾಯಮೂರ್ತಿ ವಿಕ್ರಂ ನಾಥ್‌ ಹಾಗೂ ಸಂದೀಪ್‌ ಮೆಹ್ತಾ ಒಳಗೊಂಡ ಪೀಠವು, “ಅರ್ಜಿದಾರರು ಇದನ್ನು ತಮ್ಮ ಸ್ಥಳೀಯ ಪತ್ರಿಕೆ ವಿತರಕರ ಬಳಿ ಮಾತನಾಡಿ, ಬಗೆಹರಿಸಿಕೊಳ್ಳಬೇಕು” ಎಂದು ಸಲಹೆ ನೀಡಿದೆ.

ಪತ್ರಿಕೆಗಳನ್ನು ಸರಿಯಾಗಿ ಪೂರೈಸದಿರುವುದು ಪತ್ರಿಕೆಯ ಎಲ್ಲಾ ಪುಟಗಳು ಲಭ್ಯವಾಗದಿರುವುದರ ಕುರಿತು ಕಾಳಜಿ ಹೊಂದಿದ ಅರ್ಜಿದಾರರು ಓದುಗರನ್ನು ಈ ರೀತಿ ವಂಚಿಸುವುದನ್ನು ತಡೆಯಲು ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದ್ದರು. ಜೊತೆಗೆ ಪ್ರಾಣಿ ಆಶ್ರಯತಾಣಗಳಿಗೆ ಇತರೆ ಸಮಾಜಮುಖಿ ಕಾರ್ಯಗಳಿಗೆ ರೂ.10 ಕೋಟಿ ದೇಣಿಗೆ ನೀಡುವಂತೆ ನಿರ್ದೇಶಿಸುವುದು ಅರ್ಜಿದಾರರ ಇನ್ನೊಂದು ಕೋರಿಕೆಯಾಗಿತ್ತು. ಅರ್ಜಿದಾರರಾದ ರಾಥೋಡ್‌ ಇಂದು ನಿಯತಕಾಲಿಕೆಗಳು ಹಾಗೂ ಪುರವಣಿಗಳನ್ನು ಪೂರೈಕೆ ಮಾಡುವಲ್ಲಿ ಪತ್ರಿಕೆಯು ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದರು. ನ್ಯಾಯಾಲಯವು ಈ ವಾದವನ್ನು ತಳ್ಳಿಹಾಕಿದ್ದು, ಈ ದೂರು ಸಾರ್ವಜನಿಕ ಅಥವಾ ಗ್ರಾಹಕರ ಖಾಸಗಿ ದೂರಾಗಿದೆ. ಸಾಂವಿಧಾನಿಕವಾಗಿ ಪರಿಹರಿಸುವ ಬದಲು ಸ್ಥಳೀಯವಾಗಿ ಪರಿಹರಿಸಿಕೊಳ್ಳುವಂತೆ ಪೀಠ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಯಾಗಿ ಅರ್ಜಿದಾರರು, “ಸಾರ್ವಜನಿಕರು ಇದರಿಂದ ತೊಂದರೆಗೆ ಒಳಗಾಗಿದ್ದಾರೆ. ಇದು ಹಲವು ಓದುಗರ ಆರೋಪವಾಗಿದ್ದು ಈ ಕುರಿತು ಪತ್ರಿಕೆಗೆ ಪತ್ರ ಬರೆದಿದ್ದೇನೆ” ಎಂದು ಪೀಠಕ್ಕೆ ತಿಳಿಸಿದರು.

“ನೀವು ಈ ಕುರಿತು ಒಂದು ಸಾಮಾಜಿಕ ಅಭಿಯಾನವನ್ನು ಆರಂಭಿಸಿ. ಆಗ ಪತ್ರಿಕೆಯವರೇ ನಿಮ್ಮ ಮನೆಗೆ ಓಡಿ ಬರುತ್ತಾರೆ. ಆದರೆ, ಪ್ರಸ್ತುತ ಪತ್ರಿಕೆಗಳೇ ಸಾಕಷ್ಟು ಸಂಕಷ್ಟ ಅನುಭವಿಸುತ್ತಿವೆ” ಎಂದು ಪೀಠ ಉತ್ತರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...