ತನ್ನ ವಿರುದ್ಧ ಮತ ಚಲಾಯಿಸಿದಕ್ಕೆ ಇಬ್ಬರ ಕೊಲೆ; ಆರ್‌ಜೆಡಿ ಮಾಜಿ ಸಂಸದನಿಗೆ ಸುಪ್ರೀಂನಿಂದ ಜೀವಾವಧಿ ಶಿಕ್ಷೆ

Date:

ತನ್ನ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ 1995ರಲ್ಲಿ ಇಬ್ಬರನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಆರ್‌ಜೆಡಿ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರಿಗೆ ಶುಕ್ರವಾರ(ಸೆ.01) ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ಈ ಪ್ರಕರಣವು ನಮ್ಮ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಅಸಾಧಾರಣ ದುಃಖದ ಘಟನೆಯಾಗಿದೆ ಎಂದು ಹೇಳಿದ ನ್ಯಾಯಾಧೀಶರು ಹೈಕೋರ್ಟ್‌ನಿಂದ ಖುಲಾಸೆಗೊಂಡಿರುವುದನ್ನು ರದ್ದುಗೊಳಿಸುವ ಮೂಲಕ ಮಾಜಿ ಸಂಸದರನ್ನು ಆಗಸ್ಟ್ 18 ರಂದು ದೋಷಿ ಎಂದು ತೀರ್ಪು ನೀಡಿತ್ತು.

ಈ ಪ್ರಕರಣವನ್ನು ಶಿಕ್ಷೆಯ ಹಂತದಲ್ಲಿ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಭಯ್ ಎಸ್ ಓಕಾ ಮತ್ತು ವಿಕ್ರಮ್ ನಾಥ್ ಅವರ ಪೀಠ, “ಈ ರೀತಿಯ ಪ್ರಕರಣವನ್ನು ನಾವು ಹಿಂದೆಂದೂ ನೋಡಿಲ್ಲ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂಗ್ ಪರವಾಗಿ ಹಿರಿಯ ವಕೀಲರಾದ ಎಎಂ ಸಿಂಘ್ವಿ ಮತ್ತು ಆರ್ ಬಸಂತ್ ಮತ್ತು ಸಂತ್ರಸ್ತ ಹರೇಂದ್ರ ರೈ ಪರ ವಕೀಲರನ್ನು ಆಲಿಸಿದ ಪೀಠವು, “ಜೀವಾವಧಿ ಅಥವಾ ಮರಣದಂಡನೆ ಎರಡು ಆಯ್ಕೆಗಳಿವೆ” ಎಂದು ಹೇಳಿತು.

ಈ ಸುದ್ದಿ ಓದಿದ್ದೀರಾ? ಲಖನೌ | ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ

ಜೀವಾವಧಿ ಶಿಕ್ಷೆ ವಿಧಿಸಲು ನಿರ್ಧರಿಸಿದ ನ್ಯಾಯಾಲಯವು ಮೃತರಾದ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ಮತ್ತು ಗಾಯಗೊಂಡ ಸಾಕ್ಷಿಗೆ 5 ಲಕ್ಷ ರೂ.ನೀಡಬೇಕೆಂದು ಆರೋಪಿಗೆ ತಿಳಿಸಿತು.

ಡಿಸೆಂಬರ್ 2008 ರಲ್ಲಿ ವಿಚಾರಣಾ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಪ್ರಭುನಾಥ್ ಸಿಂಗ್ ಅವರನ್ನು ಖುಲಾಸೆಗೊಳಿಸಿತು. ಪಾಟ್ನಾ ಹೈಕೋರ್ಟ್ ಕೂಡ 2012 ರಲ್ಲಿ ಖುಲಾಸೆಯನ್ನು ಎತ್ತಿಹಿಡಿದಿತ್ತು ಖುಲಾಸೆಗೊಳಿಸಿರುವುದನ್ನು ಮೃತ ರಾಜೇಂದ್ರ ರೈ ಅವರ ಸಹೋದರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದರು.

1995, ಮಾರ್ಚ್‌ನಲ್ಲಿ ಬಿಹಾರದ ಸರನ್ ಜಿಲ್ಲೆಯ ಚಪ್ರಾ ಮತಗಟ್ಟೆಯ ಬಳಿ ತನಗೆ ವಿರುದ್ಧವಾಗಿ ಮತ ಚಲಾಯಿಸಿದ ಕಾರಣ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರ ಸಲಹೆಯಂತೆ ಇಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...