ದೆಹಲಿ ಅಬಕಾರಿ ಹಗರಣ: ಮನೀಶ್‌ ಸಿಸೋಡಿಯಾಗೆ ಸುಪ್ರೀಂ ಜಾಮೀನು

Date:

ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಯ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸಿಸೋಡಿಯಾ ಅವರನ್ನು 2023ರ ಮಾರ್ಚ್‌ನಲ್ಲಿ ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿತ್ತು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಈ ಮಹತ್ವದ ಘಟನೆಗಳು ಜುಲೈ 2022 ರಲ್ಲಿ ಪ್ರಾರಂಭವಾಯಿತು. 2022ರ ಜುಲೈ 22ರಂದು, ಎಲ್‌ಜಿ ವಿಕೆ ಸಕ್ಸೇನಾ ಅವರು ಹೊಸ ಅಬಕಾರಿ ನೀತಿಯ ಅನುಷ್ಠಾನದಲ್ಲಿ ಆಪಾದಿತ ನಿಯಮ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದರು. ಮದ್ಯದ ಪರವಾನಗಿದಾರರಿಗೆ ಅನಗತ್ಯ ಪ್ರಯೋಜನಗಳನ್ನು ನೀಡಲಾಗಿದೆ ಎಂದು ದೆಹಲಿಯ ಮುಖ್ಯ ಕಾರ್ಯದರ್ಶಿಯ ವರದಿ ಹೇಳಿತ್ತು. ಆಪಾದಿತ ಅಕ್ರಮಗಳಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಎಲ್‌ಜಿ ದೆಹಲಿಯ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದರು. ಚಿಲ್ಲರೆ ಮದ್ಯದ ಪರವಾನಗಿಗಾಗಿ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ‘ಕಾರ್ಟೆಲೈಸೇಶನ್’ ಬಗ್ಗೆ ದೂರು ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿನೇಶ್ ಫೋಗಟ್ ವಿದಾಯ ಮತ್ತು ದೇಶಭಕ್ತರ ದ್ವೇಷ

ದೆಹಲಿಯ ಅಬಕಾರಿ ನೀತಿ 2021-2022ಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಎಫ್‌ಐಆರ್‌ನಲ್ಲಿ 15 ವ್ಯಕ್ತಿಗಳನ್ನು ಹೆಸರನ್ನು ಉಲ್ಲೇಖಿಸಿದ್ದು, ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಸಿಸೋಡಿಯಾ ಹೆಸರು ಕೇಳಿ ಬಂದಿತ್ತು. ಎಲ್-ಜಿ ಕಚೇರಿಯಿಂದ ನೀಡಲಾದ ಜ್ಞಾಪಕ ಪತ್ರದಲ್ಲಿ ಆರೋಪಗಳನ್ನು ಉಲ್ಲೇಖಿಸಿ ಎಫ್‌ಐಆರ್‌ನಲ್ಲಿ ಸಿಸೋಡಿಯಾ ಸೇರಿ ವಿಜಯ್ ನಾಯರ್, ಮನರಂಜನಾ ಮತ್ತು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಮಾಜಿ ಸಿಇಒ, ಓನ್ಲಿ ಮಚ್ ಲೌಡರ್, ಮನೋಜ್ ರೈ, ವೈನ್ ಮತ್ತು ಸ್ಪಿರಿಟ್ಸ್ ದೈತ್ಯ ಪೆರ್ನಾಡ್ ರಿಕಾರ್ಡ್‌ನ ಮಾಜಿ ಉದ್ಯೋಗಿ ಅಮನ್‌ದೀಪ್ ಧಾಲ್, ಬ್ರಿಂಡ್ಕೊ ಸ್ಪಿರಿಟ್ಸ್‌ನ ಮಾಲೀಕ ಮತ್ತು ಇಂಡೋಸ್ಪಿರಿಟ್‌ನ ಮಾಲೀಕ ಸಮೀರ್ ಮಹೇಂದ್ರು ಅವರು ಹೆಸರು ಇದೆ. ಆಗಸ್ಟ್ 2022 ರಲ್ಲೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿತ್ತು.

ಜುಲೈ 31ರಂದು ಹೊಸ ಅಬಕಾರಿ ನೀತಿ ರದ್ದು ಆಮ್ ಆದ್ಮಿ ಪಕ್ಷದ (ಎಎಪಿ) ಮಹತ್ವಾಕಾಂಕ್ಷೆಯ ದೆಹಲಿ ಅಬಕಾರಿ ನೀತಿಯನ್ನು 31 ಜುಲೈ 2022 ರಂದು ರದ್ದುಗೊಳಿಸಲಾಗಿತ್ತು. ಹೊಸ ನೀತಿಯನ್ನು ರದ್ದುಗೊಳಿಸಿದ ನಂತರ, ದೆಹಲಿ ಸರ್ಕಾರವು ನವೆಂಬರ್ 17, 2020 ರ ಮೊದಲು ಜಾರಿಗೆ ತಂದ ಹಳೆಯ ಅಬಕಾರಿ ಆಡಳಿತವನ್ನು ಮರಳಿ ತರಲು ನಿರ್ಧರಿಸಿತ್ತು. ಖಾಸಗಿಯವರಿಗೆ ಅನುಕೂಲ ಮಾಡಿಕೊಡುವ ಈ ನೀತಿಯಲ್ಲಿ ಸಾವಿರಾರು ಕೋಟಿ ರೂ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿದೆ. ಇದರಲ್ಲಿ ದೆಹಲಿ ಸರ್ಕಾರದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಮಾತ್ರವಲ್ಲದೆ, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮಗಳು ಕೆ ಕವಿತಾ ಮತ್ತು ಅವರ ಆಪ್ತರ ಹೆಸರು ಕೂಡ ಇದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಹಾಗೂ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಇ.ಡಿ ಹಾಗೂ ಸಿಬಿಐ ಬಂಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...