ಒಂದು ಕೈಯಲ್ಲಿ ಚಪ್ಪಾಳೆ ತಟ್ಟಲಾಗದು: ಅತ್ಯಾಚಾರ ಪ್ರಕರಣದ ಆರೋಪಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

Date:

ಸುಮಾರು 40 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ 23 ವರ್ಷದ ಆರೋಪಿಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ನೀಡಿದೆ. “ಆರೋಪಿ ಒಂಬತ್ತು ತಿಂಗಳಿನಿಂದ ಜೈಲಿನಲ್ಲಿದ್ದರೂ ಸರಿಯಾಗಿ ಆರೋಪ ಹೊರಿಸಲಾಗಿಲ್ಲ. ಅಷ್ಟಕ್ಕೂ ಮಹಿಳೆ ಮಗುವಲ್ಲ. ಒಂಟಿ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಜಾಮೀನು ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಆರೋಪಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ ಮಾಡಿದೆ. ಮಹಿಳೆ ತನ್ನ ಇಚ್ಚೆಯಂತೆಯೇ ಆರೋಪಿ ಜೊತೆಗೆ ಹೋಗಿದ್ದಾಗ ದೆಹಲಿ ಪೊಲೀಸರು ಆ ವ್ಯಕ್ತಿಯ ಮೇಲೆ ಹೇಗೆ ಅತ್ಯಾಚಾರ ಪ್ರಕರಣ ದಾಖಲಿಸಬಹುದು ಎಂದು ಪ್ರಶ್ನಿಸಿದೆ.

ಇದನ್ನು ಓದಿದ್ದೀರಾ? ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಕೈಯಲ್ಲಿ ಚಪ್ಪಾಳೆ ತಟ್ಟಲಾಗದು. ನೀವು ಯಾವ ಆಧಾರದ ಮೇಲೆ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೀರಿ? ಆಕೆ ಮಗುವಲ್ಲ. ಮಹಿಳೆಗೆ 40 ವರ್ಷ. ಅವರು ಜೊತೆಯಾಗಿ ತಮ್ಮ ಇಚ್ಚೆಯಂತೆ ಜಮ್ಮುವಿಗೆ ಹೋಗಿದ್ದಾರೆ. ಹಾಗಿರುವಾಗ ನೀವು 376 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ಹೇಗೆ? ಈ ಮಹಿಳೆ ಜಮ್ಮುವಿಗೆ ಏಳು ಬಾರಿ ಹೋಗಿದ್ದು ಆ ವಿಚಾರದಲ್ಲಿ ಆಕೆಯ ಪತಿಗೆ ಯಾವುದೇ ತೊಂದರೆಯಿಲ್ಲ” ಎಂದು ಪೀಠ ಹೇಳಿದೆ.

“ಆರೋಪಿಯನ್ನು ವಿಚಾರಣಾ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು. ನಿಯಮ, ಷರತ್ತು ಅನ್ವಯಿಸಿ ಮಧ್ಯಂತರ ಜಾಮೀನು ನೀಡಬೇಕು. ಆತ ತನ್ನ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಬಾರದು. ಮಹಿಳೆಯನ್ನು ಸಂಪರ್ಕಿಸಲು ಪ್ರಯತ್ನಿಸಬಾರದು” ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಇದು ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶವಾದರೂ ಸದ್ಯ ಚರ್ಚೆಗೆ ಗ್ರಾಸವಾಗುತ್ತಿದೆ.

ಏನಿದು ಪ್ರಕರಣ?

ಮಹಿಳೆ ಮೊದಲು 2021ರಲ್ಲಿ ತನ್ನ ಬಟ್ಟೆ ಬ್ರ್ಯಾಂಡ್ ಅನ್ನು ಪ್ರಚಾರ ಮಾಡುವ ಸಲುವಾಗಿ ಸಾಮಾಜಿಕ ಮಾಧ್ಯಮದಲ್ಲಿ ಆರೋಪಿಯ ಸಂಪರ್ಕ ಮಾಡಿದ್ದಾರೆ. ಆರಂಭದಲ್ಲಿ ಆರೋಪಿ ಬ್ರ್ಯಾಂಡ್ ಪ್ರಚಾರಕ್ಕಾಗಿ ಐಪೋನ್ ನೀಡುವಂತೆ ಮಹಿಳೆ ಬಳಿ ವಿನಂತಿಸಿದ್ದು ಮಹಿಳೆ ಜಮ್ಮುವಿನ ಅಧಿಕೃತ ಆಪಲ್ ಸ್ಟೋರ್ ಮೂಲಕ ಖರೀದಿಸಿಕೊಟ್ಟಿದ್ದಾರೆ.

ಆದರೆ ಆರೋಪಿ ಈ ಫೋನ್ ಅನ್ನು ಮರು ಮಾರಾಟ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೊನೆಗೆ ಮಾರಾಟಗಾರ ಮಹಿಳೆಯ ಖಾತೆಗೆ ಹಣ ಜಮೆ ಮಾಡಿದ್ದಾನೆ, ಆದರೆ ಸುಮಾರು 20 ಸಾವಿರ ರೂಪಾಯಿ ಕಡಿತಗೊಳಿಸಿದ್ದಾನೆ. ಆತ ಹಣವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದರೂ ಆಕೆ ಆತನೊಂದಿಗೆ ಎಲ್ಲಾ ಸಂಬಂಧವನ್ನು ಕೊನೆಗೊಳಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಕರಣ: ಮಧ್ಯಂತರ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

2021ರ ಡಿಸೆಂಬರ್‌ನಲ್ಲಿ ಆರೋಪಿ ನೋಯ್ಡಾದಲ್ಲಿರುವ ಮಹಿಳೆಯ ಮನೆಗೆ 20 ಸಾವಿರ ರೂಪಾಯಿಗಳನ್ನು ಹಿಂದಿರುಗಿಸಿ ಕ್ಷಮೆ ಕೇಳಲೆಂದು ಭೇಟಿ ನೀಡಿದ್ದಾರೆ. ಹಾಗೆಯೇ ಬ್ರ್ಯಾಂಡ್ ಪ್ರಚಾರದ ಚಿತ್ರೀಕರಣಕ್ಕೆ ತೆರಳುವಂತೆ ಮನವೊಲಿಸಿದ್ದಾನೆ. ಪ್ರಯಾಣದ ವೇಳೆ ಆರೋಪಿ ಮಾದಕ ದ್ರವ್ಯವಿದ್ದ ಸಿಹಿತಿಂಡಿ ತಿನಿಸಿ ಆಕೆ ಪ್ರಜ್ಞೆ ಕಳೆದುಕೊಳ್ಳುತ್ತಿದ್ದಾಗ ಆಸ್ಪತ್ರೆಗೆ ಕರೆದೊಯ್ಯುವುದಾಗಿ ಹೇಳಿ ಆಸ್ಪತ್ರೆಯ ಹಿಂದಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ಆಕೆಯ ಪರ್ಸ್‌ನಿಂದ ಹಣವನ್ನು ಕದ್ದಿರುವುದಾಗಿ, ನಗ್ನ ಛಾಯಾಚಿತ್ರಗಳನ್ನು ಸೆರೆಹಿಡಿದಿರುವುದಾಗಿ ಆರೋಪಿಸಲಾಗಿದೆ.

ನಂತರ ಜಮ್ಮುವಿಗೆ ಪ್ರಯಾಣಿಸುವಂತೆ ಮಹಿಳೆಯ ಮನವೊಲಿಸಿ ಅಲ್ಲಿ ಎರಡೂವರೆ ವರ್ಷಗಳ ಕಾಲ ನಿರಂತರ ಲೈಂಗಿಕ ದೌರ್ಜನ್ಯ, ಸುಲಿಗೆ ಮಾಡಿರುವುದಾಗಿ ಮತ್ತು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(ಅತ್ಯಾಚಾರ), 354(ಮಹಿಳೆಯ ಮೇಲೆ ಹಲ್ಲೆ), 323(ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506(ಕ್ರಿಮಿನಲ್ ಬೆದರಿಕೆ), 509 (ಮಹಿಳೆಯ ಘನತೆಗೆ ಧಕ್ಕೆ) ಮತ್ತು 34ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...