ಮಹಿಳಾ ಉದ್ಯೋಗಿಗಳಿಂದ ಮುಟ್ಟಿನ ಪುರಾವೆ ಕೇಳಿದ ಹರಿಯಾಣ ವಿಶ್ವವಿದ್ಯಾನಿಲಯ; ಸುಪ್ರೀಂ ನೋಟಿಸ್

Date:

ಮಹಿಳಾ ಉದ್ಯೋಗಿಗಳು ಮುಟ್ಟಾಗಿದ್ದಾರೆ ಎಂಬುದಕ್ಕೆ ಪುರಾವೆ ಕೇಳಿದ ಹರಿಯಾಣ ವಿಶ್ವವಿದ್ಯಾನಿಲಯಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಹರಿಯಾಣದ ಮಹಾರಾಶಿ ದಯಾನಂದ ವಿಶ್ವವಿದ್ಯಾಲಯದವು ಮಹಿಳಾ ಪೌರ ಕಾರ್ಮಿಕರು ಮುಟ್ಟಾದಾಗ ಕೆಲಸ ಮಾಡಲು ಕಷ್ಟವಾಗುತ್ತಿದೆ ಎಂದಿದ್ದರೆ ಪುರಾವೆಯಾಗಿ ತಮ್ಮ ಖಾಸಗಿ ಅಂಗಗಳ ಚಿತ್ರಗಳನ್ನು ನೀಡಲು ತಿಳಿಸಿದೆ ಎಂದು ಆರೋಪಿಸಲಾಗಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠವು ಕೇಂದ್ರ ಸರ್ಕಾರಕ್ಕೂ ನೋಟಿಸ್ ನೀಡಿದೆ. ಹಾಗೆಯೇ “ಇದು ಜನರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದಲ್ಲಿ ಮುಟ್ಟಿನ ರಜೆಯನ್ನು ನೀಡುತ್ತಿದ್ದಾರೆ. ನನಗೆ ಹರಿಯಾಣ ವಿಶ್ವವಿದ್ಯಾನಿಲಯದ ಘಟನೆ ನೋಡಿದಾಗ ಕರ್ನಾಟಕದಲ್ಲಿಯೂ ರಜೆ ನೀಡಲು ಪುರಾವೆ ಕೇಳುತ್ತಾರೆಯೇ ಎಂಬ ಯೋಚನೆ ಬಂದಿತ್ತು” ಎಂದು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ನ್ಯಾ. ಹೇಮಾ ಸಮಿತಿ ವರದಿ ಬಹಿರಂಗಪಡಿಸಿದ್ದು ಮಲಯಾಳಂ ಚಿತ್ರರಂಗದ ಹುಳುಕನ್ನಷ್ಟೇ ಅಲ್ಲ…

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಜನರ ಮನಸ್ಥಿತಿಯನ್ನು ತೋರಿಸುತ್ತದೆ. ಮಹಿಳೆಯರು ಮುಟ್ಟಿನ ರಜೆ ಪಡೆದಾಗ ಅವರ ಅನುಪಸ್ಥಿತಿಯಿಂದಾಗಿ ಕೆಲವು ಕೆಲಸವನ್ನು ಮಾಡಲು ಸಾಧ್ಯವಾಗದಿದ್ದರೆ ಬೇರೆಯವರನ್ನು ನಿಯೋಜಿಸಬಹುದಿತ್ತು. ಈ ಅರ್ಜಿಯಿಂದಾಗಿ ಮುಟ್ಟಿನ ರಜೆ ವಿಚಾರದಲ್ಲಿ ಏನಾದರೂ ಉತ್ತಮ ಬೆಳವಣಿಗೆ ಸಂಭವಿಸಬಹುದು ಎಂದು ನಾನು ಭಾವಿಸುತ್ತೇನೆ” ಎಂದೂ ನ್ಯಾಯಾಮೂರ್ತಿಗಳು ಅಭಿಪ್ರಾಯಿಸಿದ್ದಾರೆ.

ಇನ್ನು ವಿಚಾರಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(SCBA) ಅಧ್ಯಕ್ಷ ಮತ್ತು ಹಿರಿಯ ವಕೀಲ ವಿಕಾಸ್ ಸಿಂಗ್, “ಇದು ಒಂದು ಗಂಭೀರ ಕ್ರಿಮಿನಲ್ ಪ್ರಕರಣ ಮತ್ತು ಇದು ಗಮನ ಹರಿಸಬೇಕಾದ ವಿಷಯವಾಗಿದೆ” ಎಂದು ಹೇಳಿದರು.

ಇನ್ನು ಈ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಕೇಂದ್ರ ಮತ್ತು ಹರಿಯಾಣಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಮಹಿಳೆಯರು ಮತ್ತು ಹುಡುಗಿಯರ ಘನತೆ, ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಬಾರ್ ಅಸೋಸಿಯೇಷನ್ ​​ಮಾರ್ಗಸೂಚಿಗಳನ್ನು ಕೋರಿದೆ. ಅರ್ಜಿಯ ಮುಂದಿನ ವಿಚಾರಣೆ ಡಿಸೆಂಬರ್ 15ರಂದು ನಡೆಯಲಿದೆ.

ಏನಿದು ಮುಟ್ಟಿನ ಪುರಾವೆ ಕೇಳಿದ ಪ್ರಕರಣ?

ಮಹಿಳಾ ಪೌರ ಕಾರ್ಮಿಕರು ಮುಟ್ಟಾಗಿದ್ದಾಗ ಕೆಲಸ ಮಾಡುವುದು ನಿಧಾನವಾಗಿದ್ದಕ್ಕೆ ಮುಟ್ಟಾಗಿದೆ ಎಂಬುದನ್ನು ಖಾಸಗಿ ಭಾಗಗಳ ಚಿತ್ರಗಳನ್ನು ತೋರಿಸುವ ಮೂಲಕ ಸಾಬೀತುಪಡಿಸುವಂತೆ ಹೇಳಿದ್ದಕ್ಕೆ ಹರಿಯಾಣದ ಮಹಾರಾಶಿ ದಯಾನಂದ ವಿಶ್ವವಿದ್ಯಾಲಯದ ಮೂವರ ಮೇಲೆ ಅಕ್ಟೋಬರ್ 31ರಂದು ಲೈಂಗಿಕ ಕಿರುಕುಳದ ಆರೋಪದಲ್ಲಿ ದೂರು ದಾಖಲಿಸಲಾಗಿದೆ.

“ನಾವು ಮುಟ್ಟಾದ ಕಾರಣದಿಂದಾಗಿ ಅಸ್ವಸ್ಥರಾಗಿದ್ದೆವು. ವೇಗವಾಗಿ ಕೆಲಸ ಮಾಡುವಷ್ಟು ಶಕ್ತಿ ಇರಲಿಲ್ಲ. ಈ ಬಗ್ಗೆ ನಾವು ಮಾಹಿತಿ ನೀಡಿದೆವು. ಆದರೆ ನಾವು ಮುಟ್ಟಾಗಿದ್ದಾಗಿ ಸಾಬೀತುಪಡಿಸಲು ನಮ್ಮ ಖಾಸಗಿ ಭಾಗಗಳ ಫೋಟೋಗಳನ್ನು ಕ್ಲಿಕ್ ಮಾಡುವಂತೆ ಅವರು ಒತ್ತಾಯಿಸಿದರು. ನಾವು ನಿರಾಕರಿಸಿದಾಗ ನಮ್ಮನ್ನು ನಿಂದಿಸಲಾಗಿದೆ ಮತ್ತು ವಜಾಗೊಳಿಸುವ ಬೆದರಿಕೆ ಹಾಕಲಾಗಿದೆ” ಮೂವರು ಮಹಿಳಾ ಪೌರ ಕಾರ್ಮಿಕರು ದೂರಿದ್ದಾರೆ.

ಈ ಘಟನೆಯ ಬಳಿಕ ಹರಿಯಾಣ ಕೌಶಲ್ ರೋಜ್‌ಗಾರ್ ನಿಗಮ್ ಲಿಮಿಟೆಡ್ ಮೂಲಕ ಗುತ್ತಿಗೆಯ ಮೇಲೆ ನೇಮಕಗೊಂಡಿದ್ದ ಇಬ್ಬರು ಮೇಲ್ವಿಚಾರಕರನ್ನು ಅಮಾನತುಗೊಳಿಸಲಾಗಿದೆ. ಹಾಗೆಯೇ ಘಟನೆಯ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಹೇಳಿಕೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...