ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಕಾರ: ಸುಪ್ರೀಂ ಕೋರ್ಟ್ ವಕೀಲರ ತಕರಾರು

Date:

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದ್ದು, ಕೋರ್ಟ್‌ನ ಈ ನಿರ್ಧಾರದ ಬಗ್ಗೆ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಸಂಜಯ್ ಆರ್. ಹೆಗ್ಡೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಿಲ್ಲ. ಪ್ರಕರಣದ ಇತರ ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಇದನ್ನು ಓದಿದ್ದೀರಾ? ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಮರ್ ಮತ್ತು ಇಮಾಮ್‌ಗೆ ಜಾಮೀನು ನೀಡದ ಸುಪ್ರೀಂ, “ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯೇ ಹೆಚ್ಚು ಮುಖ್ಯವಾದುದು. ಇತರ ಆರೋಪಿಗಳಿಗೆ ಹೋಲಿಸಿದರೆ ಇವರಿಬ್ಬರ ಪಾತ್ರ ಭಿನ್ನವಾದುದ್ದು” ಎಂದು ಹೇಳಿದೆ.

ಸುಪ್ರೀಂನ ಈ ಆದೇಶದ ಬಗ್ಗೆ ತಕರಾರು ವ್ಯಕ್ತಪಡಿಸಿರುವ ವಕೀಲ ಸಂಜಯ್ ಆರ್. ಹೆಗ್ಡೆ, “ನಾನು ಭಿನ್ನಾಭಿಪ್ರಾಯ ಹೊಂದಿದ್ದೇನೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆಯೇ “ಅಂತಿಮ ಹಂತದ ನ್ಯಾಯಾಲಯದಲ್ಲಿನ ಭಿನ್ನಾಭಿಪ್ರಾಯವು ಕಾನೂನಿನ ಆಳವಾದ ಚೇತನಕ್ಕೆ ಮತ್ತು ಭವಿಷ್ಯದ ಬುದ್ಧಿವಂತಿಕೆಗೆ ಮಾಡುವ ಮನವಿಯಾಗಿದೆ. ಆ ಭವಿಷ್ಯದ ದಿನದಂದು ಕಾನೂನಿನ ತಪ್ಪುಗಳನ್ನು ತಿದ್ದುವ ಸಾಧ್ಯತೆ ಇರುತ್ತದೆ ಎಂದು ನ್ಯಾಯಾಧೀಶರು ನಂಬುತ್ತಾರೆ; ಯಾವ ತಪ್ಪುಗಳಿಗೆ ನ್ಯಾಯಾಲಯವು ಬಲಿಯಾಗಿದೆ ಎಂದು ಭಿನ್ನಾಭಿಪ್ರಾಯ ಹೊಂದಿರುವ ನ್ಯಾಯಾಧೀಶರು ಭಾವಿಸುತ್ತಾರೋ, ಅವುಗಳನ್ನು ಸರಿಪಡಿಸುವ ಆಶಯವದು” ಎಂಬ ಅಮೆರಿಕದ ಪ್ರಮುಖ ರಾಜಕೀಯ ಮುತ್ಸದ್ದಿ ಮತ್ತು ನ್ಯಾಯಶಾಸ್ತ್ರಜ್ಞ, ನ್ಯಾಯಮೂರ್ತಿ ಚಾರ್ಲ್ಸ್ ಇವಾನ್ಸ್ ಹ್ಯೂಸ್ ಹೇಳಿಕೆಯನ್ನೂ ಉಲ್ಲೇಖಿಸಿದ್ದಾರೆ.

ಚಾರ್ಲ್ಸ್ ಇವಾನ್ಸ್ ಹ್ಯೂಸ್ ಅವರು ನ್ಯಾಯಾಲಯದ ತೀರ್ಪಿಗೆ ಭಿನ್ನಾಭಿಪ್ರಾಯ ವ್ಯಕ್ತವಾಗುವ ಬಗ್ಗೆ ಹೇಳಿಕೆ ನೀಡುತ್ತಾ, “ಇಂದಿನ ಬಹುಮತದ ತೀರ್ಪು ತಪ್ಪಾಗಿರಬಹುದು ಮತ್ತು ಭವಿಷ್ಯದ ಪೀಳಿಗೆಯು ಅದನ್ನು ಸರಿಪಡಿಸಬಹುದು” ಎಂಬ ಆಶಯದೊಂದಿಗೆ “ಭವಿಷ್ಯದ ಬುದ್ಧಿವಂತಿಕೆಗೆ ಮಾಡುವ ಮನವಿ” (ಭವಿಷ್ಯದ ಬುದ್ಧಿವಂತರು ಸರಿಪಡಿಸಲು ಮನವಿ) ಎಂಬ ವಾಕ್ಯ ಬಳಸಿದ್ದರು. ಇದೀಗ ಈ ಹೇಳಿಕೆ ಉಲ್ಲೇಖಿಸುವ ಮೂಲಕ ಇಂದಿನ ತಪ್ಪಾದ ತೀರ್ಪನ್ನು ಮುಂದಿನ ಪೀಳಿಗೆ ಸರಿಪಡಿಸಬಹುದು ಎಂಬ ಭರವಸೆಯನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಸಂಜಯ್ ಆರ್. ಹೆಗ್ಡೆ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...