ಅದಾನಿ ಸಮೂಹಕ್ಕೆ ಕ್ಲೀನ್‌ಚಿಟ್‌ ನೀಡಿದ ಸುಪ್ರೀಂ ಕೋರ್ಟ್ ಸಮಿತಿ

Date:

ಹಿಂಡನ್‌ಬರ್ಗ್ ಆರೋಪಗಳ ನಂತರ ಅದಾನಿ ಸಮೂಹದ ಷೇರುಗಳು ಕುಸಿತ ಕಂಡ ಬಗ್ಗೆ ತನಿಖೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯು ಮೇಲ್ನೋಟಕ್ಕೆ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ಅದಾನಿ ಸಮೂಹಕ್ಕೆ ಕ್ಲೀನ್ ಚಿಟ್ ನೀಡಿದೆ. ಅಲ್ಲದೆ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಕಡೆಯಿಂದಲೂ ಯಾವುದೇ ನಿಯಂತ್ರಣ ವೈಫಲ್ಯವೂ ಕಂಡುಬಂದಿಲ್ಲ ಎಂದು ಸಮಿತಿ ತಿಳಿಸಿದೆ.

ಅದಾನಿ ಸಮೂಹವು ಯಾವುದೇ ರೀತಿಯಲ್ಲೂ ಷೇರುಗಳ ಬೆಲೆಗಳನ್ನು ತಿರುಚಿಲ್ಲ. ಹಾಗೂ ಚಿಲ್ಲರೆ ಹೂಡಿಕೆದಾರರ ಹಿತ ಕಾಪಾಡಲು ಸಂಘಟಿತ ಸಂಸ್ಥೆಯು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ವಿವಿಧ ವಲಯಗಳ ತಜ್ಞರ ಸುಪ್ರೀಂ ಕೋರ್ಟ್ ಸಮಿತಿ ಹೇಳಿದೆ.

ಷೇರುಗಳು ಈಗ ಸ್ಥಿರವಾಗಿದ್ದು, ಕಂಪನಿಯು ತೆಗೆದುಕೊಂಡ ಕ್ರಮಗಳು ಷೇರಿನ ವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡಿದೆ ಎಂದೂ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನಿಷ್ಠ ಸಾರ್ವಜನಿಕ ಷೇರು ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಯಾವುದೇ ನಿಯಂತ್ರಕ ವೈಫಲ್ಯ ಕಂಡುಬಂದಿಲ್ಲ ಹಾಗೂ ಅನುಸರಣೆಗಳ ಉಲ್ಲಂಘನೆಯೂ ಆಗಿಲ್ಲ. ತನ್ನ ಅನುಮಾನವನ್ನು, ಕಾನೂನು ಉಲ್ಲಂಘನೆಯ ಆರೋಪವಾಗಿ ವಿಚಾರಣೆಗೆ ಒಳಪಡಿಸುವ ದೃಢವಾದ ಪ್ರಕರಣವಾಗಿ ಬದಲಾಯಿಸಬಹುದು ಎಂಬುದನ್ನು ಸಾಬೀತುಪಡಿಸಲು ನಿಯಂತ್ರಕರಿಗೆ ಸಾಧ್ಯವಾಗಲಿಲ್ಲ. ಅದಾನಿ ಸಮೂಹದ ಷೇರುಗಳಲ್ಲಿನ ವಿದೇಶಿ ಬಂಡವಾಳ ಹೂಡಿಕೆದಾರರು ಸೆಬಿಯ ನಿಯಮಗಳಿಗೆ ಬದ್ಧರಾಗಿದ್ದಾರೆ ಎಂಬುದಾಗಿಯೂ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಜ್ಞಾನವಾಪಿ ಮಸೀದಿ ಪ್ರಕರಣ; ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್ ವರದಿಯ ಹಿನ್ನೆಲೆ ಅದಾನಿ ಷೇರುಗಳಲ್ಲಿನ ಬೆಲೆ ತಿರುಚುವಿಕೆಯ ಬಗ್ಗೆ ಪರಿಶೀಲಿಸಲು ಸೆಬಿಗೆ ಸೂಚಿಸಲಾಗಿತ್ತು. ಇದರ ಬಗ್ಗೆ ಸೆಬಿ ತನಿಖೆ ನಡೆಸುತ್ತಿದ್ದು, ಸಮಿತಿಯು ಈ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದೆ.

ಅಲ್ಲದೆ, ಸಮಿತಿಯ ವರದಿಯು ಶಾಸಕಾಂಗದ ಭಾಗದ ನಿಯಂತ್ರಕ ವೈಫಲ್ಯದ ಪತ್ತೆಗೆ ಬರುವುದು ಕಷ್ಟ. ಆದರೆ ಪರಿಣಾಮಕಾರಿ ಜಾರಿ ನೀತಿಯ ಅವಶ್ಯಕತೆ ಇದೆ. ಆದ್ದರಿಂದ, ಜಾರಿ ನೀತಿಯು ಸೆಬಿ ಅಳವಡಿಸಿಕೊಂಡ ಶಾಸಕಾಂಗ ನೀತಿಗೆ ಅನುಗುಣವಾಗಿರಬೇಕು ಎಂದು ಸುಪ್ರೀಂ ಕೋರ್ಟ್‌ ಸಮಿತಿಯ ವರದಿ ಸಲಹೆ ನೀಡಿದೆ.

ಕೆಲವು ದಿನಗಳ ಹಿಂದೆ, ಅದಾನಿ ಸಮೂಹದ ವಿರುದ್ಧ ಅಮೆರಿಕದ ಶಾರ್ಟ್‌ ಸೆಲ್ಲರ್ಸ್‌ ಸಂಸ್ಥೆ ಹಿಂಡನ್‌ಬರ್ಗ್ ರಿಸರ್ಚ್ ಮಾಡಿದ ಕಂಪನಿಗಳು ಷೇರು ಬೆಲೆಗಳನ್ನು ತಿರುಚುತ್ತಿದೆ ಎಂಬ ಕುರಿತ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್, ಮಾರುಕಟ್ಟೆ ನಿಯಂತ್ರಕ ಸೆಬಿಗೆ ಆಗಸ್ಟ್ 14, 2023 ರವರೆಗೆ ಮೂರು ತಿಂಗಳ ಸಮಯ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...