‘ಸ್ತನ ಮುಟ್ಟುವುದು ಅತ್ಯಾಚಾರವಲ್ಲ’ವೆಂಬ ಅಲಹಾಬಾದ್‌ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ತಡೆ

Date:

ಮಹಿಳೆಯ ಸ್ತನಗಳನ್ನು ಮುಟ್ಟುವುದು, ಪೈಜಾಮಾ ಲಾಡಿ ಎಳೆಯುವುದು ಅಥವಾ ಮುಟ್ಟುವುದು ಅತ್ಯಾಚಾರ ಯತ್ನವಲ್ಲ ಎಂದು ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ತೀರ್ಪಿಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಇವುಗಳು ಅತ್ಯಾಚಾರ ಯತ್ನ ಅಥವಾ ಅತ್ಯಚಾರವಲ್ಲ ಎಂದಾದರೆ, ಬೇರೆ ಯಾವ ಕ್ರಿಯೆ ಅತ್ಯಾಚಾರ ಯತ್ನವಾಗುತ್ತದೆ ಎಂದು ನೆಟ್ಟಿಗರು ಪ್ರಶ್ನಿಸಿದ್ದರು. ಈ ತೀರ್ಪಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕು ಎಂಬ ಆಗ್ರಹ ಕೇಳಿಬಂದಿತ್ತು.

ಇದನ್ನು ಓದಿದ್ದೀರಾ? ಸ್ತನ ಮುಟ್ಟುವುದು – ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ; ಹೈಕೋರ್ಟ್‌ ತೀರ್ಪಿನ ವಿರುದ್ಧ ವ್ಯಾಪಕ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2021ರಲ್ಲಿ ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪವನ್ ಮತ್ತು ಆಕಾಶ್ ಎಂಬ ಇಬ್ಬರು ಪುರುಷರು ಅತ್ಯಾಚಾರಕ್ಕೆ ಯತ್ನ ನಡೆಸಿದ್ದರು. ಆಕೆಯ ಸ್ತನವನ್ನು ಮುಟ್ಟಿ, ಆಕೆಯ ಪೈಜಾಮಾದ ಲಾಡಿವನ್ನು ಎಳೆದು, ತುಂಡರಿಸಿದ್ದರು. ಆಕೆಯನ್ನು ಕಾಲುವೆಯೆಡೆ ಎಳೆದೊಯ್ಯಲು ಕೂಡಾ ಯತ್ನಿಸಿದ್ದರು. ಈ ಪ್ರಕರಣದ ಆದೇಶ ನೀಡಿದ ಅಲಹಾಬಾದ್‌ ಹೈಕೋರ್ಟ್‌ “ಇದು ಅತ್ಯಾಚಾರವಲ್ಲ, ಇದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಯತ್ನ” ಎಂದು ಹೇಳಿದೆ.

ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ (ಸುವೋ ಮೋಟೋ) ವಿಚಾರಣೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ರಾಮ ಮನೋಹರ್ ನಾರಾಯಣ ಮಿಶ್ರಾ ನೀಡಿದ ತೀರ್ಪಿಗೆ ತಡೆ ನೀಡಿದೆ.

“ತೀರ್ಪು ಬರೆದವರಲ್ಲಿ ಸಂಪೂರ್ಣವಾಗಿ ಸೂಕ್ಷ್ಮತೆಯ ಕೊರತೆ ಎದ್ದು ಕಾಣುತ್ತದೆ ಎಂದು ಹೇಳಲು ನಮಗೆ ಕಷ್ಟವಾಗುತ್ತಿದೆ. ತೀರ್ಪು ಆ ಕ್ಷಣದಲ್ಲಿ ಬಂದಿಲ್ಲ. ತೀರ್ಪನ್ನು ಕಾಯ್ದಿರಿಸಿದ ನಾಲ್ಕು ತಿಂಗಳ ನಂತರ ನೀಡಲಾಗಿರುವುದರಿಂದ ಮನಸ್ಸಿಗೆ ಬಂದಂತೆ ತೀರ್ಪು ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠ ಹೇಳಿದೆ.

“ನಾವು ಸಾಮಾನ್ಯವಾಗಿ ಈ ಹಂತದಲ್ಲಿ ತಡೆ ನೀಡಲು ಹಿಂಜರಿಯುತ್ತೇವೆ. ಆದರೆ ಅಮಾನವೀಯವಾಗಿ ಕಾಣುವುದರಿಂದಾಗಿ ನಾವು ಈ ತೀರ್ಪನ್ನು ತಡೆಹಿಡಿಯುತ್ತೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹಾಗೆಯೇ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರದ ಪ್ರತಿಕ್ರಿಯೆ ಕೋರಿ ನೋಟಿಸ್ ಕಳುಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...