ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

Date:

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಂಗವಿಕಲರ ಕುರಿತು ಹಾಸ್ಯ ಮಾಡಿದ್ದಕ್ಕೆ ಸಮಯ್ ರೈನಾ ಸೇರಿದಂತೆ ಅನೇಕ ಕಾಮಿಡಿಯನ್‌ಗಳನ್ನು ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ ಮಾಲ್ಯಾ ಬಗ್ಚಿ ಅವರ ಪೀಠವು “ಕ್ಯೂರ್ ಎಸ್ಎಂಎ ಫೌಂಡೇಶನ್ ಆಫ್ ಇಂಡಿಯಾ” ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ನಡೆಸಿದೆ. ಈ ಸಂಸ್ಥೆಯು ಬೆನ್ನುಮೂಳೆಯ ಸ್ನಾಯು ಕ್ಷೀಣತೆ(ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ ಕಾಯಿಲೆ) ಯಿಂದ ಬಳಲುತ್ತಿರುವ ರೋಗಿಗಳಿಗೆ ಮತ್ತು ಕುಟುಂಬಗಳಿಗೆ ಸಹಾಯ ಮಾಡುತ್ತದೆ.

ಅಂಗವಿಕಲರ ಹಾಸ್ಯ ಕುರಿತ ಮನವಿಯನ್ನು ʼಇಂಡಿಯಾಸ್ ಗಾಟ್ ಲೇಟೆಂಟ್ʼ ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳ ಜೊತೆ ಸೇರಿಸಲಾಗಿದೆ. ಈ ಪ್ರಕರಣದಲ್ಲಿ ಯೂಟ್ಯೂಬರ್ ರಣವೀರ್ ಅಲಹಾಬಾದಿಯ ವಿರುದ್ಧ ದೂರು ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೌಂಡೇಶನ್ ಪರವಾಗಿ ಹಿರಿಯ ವಕೀಲ ಅಪರಾಜಿತಾ ಸಿಂಗ್ ಹಾಜರಾಗಿ, “ಎಲ್ಲ ಕಾಮಿಡಿಯನ್‌ಗಳು ಈಗಾಗಲೇ ಕ್ಷಮೆ ಕೇಳಿದ್ದಾರೆ, ಇದು ಒಳ್ಳೆಯ ಬೆಳವಣಿಗೆ” ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ, ಕಾಮಿಡಿಯನ್‌ಗಳು ಮತ್ತು ಇನ್ಫ್ಲುವೆನ್ಸರ್‌ಗಳಿಗಾಗಿ ಮಾರ್ಗಸೂಚಿಗಳನ್ನು ರೂಪಿಸಲು ಇನ್ನೂ ಸ್ವಲ್ಪ ಸಮಯ ಬೇಕು. ಆದರೆ ಸಂಪೂರ್ಣ ನಿಷೇಧವೇರಲು ಸಾಧ್ಯವಿಲ್ಲ ಎಂದು ಹೇಳಿದರು.

ನ್ಯಾಯಪೀಠವು ಮಾರ್ಗಸೂಚಿಗಳು ಕೇವಲ ಒಂದು ಘಟನೆಗೆ ಪ್ರತಿಕ್ರಿಯೆಯಾಗಿರಬಾರದು ಎಂದು ತಿಳಿಸಿದೆ. “ಭವಿಷ್ಯದ ಸವಾಲುಗಳನ್ನೂ ಗಮನದಲ್ಲಿಟ್ಟುಕೊಂಡು, ಸಮಗ್ರ ರೀತಿಯಲ್ಲಿ ಮಾರ್ಗಸೂಚಿಗಳನ್ನು ರೂಪಿಸಬೇಕು. ಈ ಬಗ್ಗೆ ತಜ್ಞರ ಅಭಿಪ್ರಾಯವೂ ಅಗತ್ಯ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದರು.

“ಹಾಸ್ಯವು ಜೀವನದ ಒಂದು ಭಾಗ ಮತ್ತು ನಾವು ಹಾಸ್ಯ ಮಾಡಬಹುದು. ಆದರೆ ನೀವು ಇತರರನ್ನು ಗೇಲಿ ಮಾಡಲು ಪ್ರಾರಂಭಿಸಿದಾಗ, ಸೂಕ್ಷ್ಮತೆಯ ಉಲ್ಲಂಘನೆಯಾಗುತ್ತದೆ. ಭಾರತವು ವೈವಿಧ್ಯಮಯ ದೇಶವಾಗಿದೆ ಮತ್ತು ಇಂದಿನ ಕಾಮಿಡಿಯನ್‌ಗಳು ಮತ್ತು ಇನ್ಫ್ಲುವೆನ್ಸರ್ ಗಳು ಎಂದು ಕರೆಯಲ್ಪಡುವವರು ಭಾಷಣವನ್ನು ವಾಣಿಜ್ಯೀಕರಣಗೊಳಿಸುವಾಗ, ಒಂದು ಸಮುದಾಯವನ್ನು ಬಳಸಿಕೊಂಡು ಅವರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಬಾಗ್ಚಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...