ಯೂಸುಫ್ ಮಲಿಕ್‌ ವಿರುದ್ಧದ ಎನ್‌ಎಸ್‌ಎ ಆರೋಪಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

Date:

  • ಜನವರಿಯಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಯೂಸುಫ್‌ ಮಲಿಕ್
  • ಯೂಸುಫ್‌ ಅವರನ್ನು ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಆದೇಶ

ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಯೂಸುಫ್ ಮಲಿಕ್‌ ಅವರ ವಿರುದ್ಧದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಉಲ್ಲಂಘನೆ ಆರೋಪಗಳನ್ನು ಸುಪ್ರೀಂ ಕೋರ್ಟ್‌ ಮಂಗಳವಾರ (ಏಪ್ರಿಲ್‌ 11) ರದ್ದುಗೊಳಿಸಿದೆ.

ಯಾವುದೇ ಆಧಾರವಿಲ್ಲದೆ ಪಾಲಿಕೆ ತೆರಿಗೆ ವಸೂಲಾತಿ ಪ್ರಕರಣದಲ್ಲಿ ಎನ್‌ಎಸ್‌ಎ ಜಾರಿಗೊಳಿಸುವುದು ಸೇಡಿನ ರಾಜಕಾರಣಕ್ಕೆ ಕಾರಣವಾಗಬಹುದು ಎಂದು ನ್ಯಾಯಾಲಯ ಉತ್ತರ ಪ್ರದೇಶ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ನೇತೃತ್ವದ ಪೀಠ ವಿಚಾರಣೆ ನಡೆಸಿ, ರಾಮ್‌ಪುರ ಜೈಲಿನಿಂದ ಯೂಸುಫ್‌ ಮಲಿಕ್‌ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಎನ್‌ಎಸ್‌ಎ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಯೂಸುಫ್‌ ಮಲಿಕ್‌ ಅರ್ಜಿ ಸಲ್ಲಿಸಿದ್ದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದಾಯ ಬಾಕಿಗಳ ಮರುಪಡೆಯುವಿಕೆಗಾಗಿ ಎನ್‌ಎಸ್‌ಎ ವಿಧಿಸಿರುವುದು ನಮಗೆ ಆಶ್ಚರ್ಯವಾಗಿದೆ. ಪ್ರಕರಣದಲ್ಲಿ ಯಾವುದೇ ಆಧಾರವಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ ಎನ್‌ಎಸ್‌ಎ ರದ್ದುಗೊಳಿಸಲಾಗುತ್ತಿದೆ. ಅರ್ಜಿದಾರರಾಗಿರುವ ಯೂಸುಫ್ ಮಲಿಕ್‌ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶಿಸುತ್ತೇವೆ” ಎಂದು ಪೀಠ ಹೇಳಿದೆ.

ಯೂಸುಫ್‌ ಮಲಿಕ್‌ ಅವರನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ತಡಮಾಡದೆ ರಾಮ್‌ಪುರ ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ರವಾನಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠ ಸೂಚಿಸಿತು.

ಹಿಂದಿನ ವಿಚಾರಣೆಗಳಲ್ಲಿ ನ್ಯಾಯಾಲಯದ ಸಲಹೆಯ ಹೊರತಾಗಿಯೂ ಯೂಸುಫ್‌ ವಿರುದ್ಧದ ಎನ್‌ಎಸ್‌ಎ ಆರೋಪಗಳನ್ನು ಹಿಂತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರಾಸಕ್ತಿ ವಹಿಸಿದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

ನ್ಯಾಯಾಲಯದ ಆದೇಶವನ್ನು ತಕ್ಷಣವೇ ರವಾನಿಸುವಂತೆ ಯೂಸುಫ್‌ ಮಲಿಕ್‌ ಅವರ ಪರ ಹಿರಿಯ ವಕೀಲ ಎಸ್‌ಡಬ್ಲ್ಯುಎ ಖಾದ್ರಿ ಪೀಠಕ್ಕೆ ಮನವಿ ಮಾಡಿದರು. ಪೀಠ ಅವರ ಮನವಿಯನ್ನು ಪುರಸ್ಕರಿಸಿತು.

ಈ ಸುದ್ದಿ ಓದಿದ್ದೀರಾ? ಸಚಿನ್‌ ಪೈಲಟ್‌ ಸತ್ಯಾಗ್ರಹ; ಕಾಂಗ್ರೆಸ್‌ ವರಿಷ್ಠರೊಂದಿಗೆ ಮಾತುಕತೆ ಸಾಧ್ಯತೆ

ತಮ್ಮ ವಿರುದ್ಧ ಎನ್‌ಎಸ್‌ಎ ಜಾರಿಗೊಳಿಸಿರುವ ಉತ್ತರಪ್ರದೇಶ ಸರ್ಕಾರದ ವಿರುದ್ಧ ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್ ವಿಚಾರಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಎಸ್‌ಪಿ ನಾಯಕ ಅಜಂ ಖಾನ್ ಅವರ ಆಪ್ತ ಸಹಾಯಕ ಯೂಸುಫ್‌ ಅವರು ಜನವರಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...