370ನೇ ವಿಧಿ ರದ್ದು ವಿರುದ್ಧ ವಾದಿಸಲು ನ್ಯಾಯಾಲಯಕ್ಕೆ ಹಾಜರಾಗಿದ್ದ ಉಪನ್ಯಾಸಕರ ಅಮಾನತು; ವಿವರಣೆ ಕೇಳಿದ ಸುಪ್ರೀಂ

Date:

370 ನೇ ವಿಧಿ ರದ್ದತಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಉಪನ್ಯಾಸಕ ಜಹೂರ್ ಅಹ್ಮದ್ ಭಟ್ ಅವರನ್ನು ಅಮಾನತುಗೊಳಿಸಿದ ಹಿಂದಿನ ಕಾರಣವನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರವನ್ನು ಕೇಳಿದೆ.

ಇದರೊಂದಿಗೆ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡುವಂತೆ ಕೇಂದ್ರದ ಉನ್ನತ ಕಾನೂನು ಅಧಿಕಾರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಅಮಾನತುಗೊಳಿಸುವಿಕೆಗೂ ನ್ಯಾಯಾಲಯದ ಮುಂದೆ ಉಪನ್ಯಾಸಕರು ಹಾಜರಾಗಿದ್ದಕ್ಕೂ ಸಂಬಂಧವಿದೆಯೇ ಎಂದು ತಿಳಿದುಕೊಳ್ಳಲು ನ್ಯಾಯಾಲಯ ಬಯಸಿತು ಹಾಗೂ ಇದನ್ನು ‘ಪ್ರತೀಕಾರ’ ಎಂದು ಪರಿಗಣಿಸಬಹುದು ಎಂದು ಐವರು ನ್ಯಾಯಾಧೀಶರ ಸಂವಿಧಾನ ಪೀಠ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಬುಧವಾರ ಹಿರಿಯ ರಾಜ್ಯಶಾಸ್ತ್ರ ಉಪನ್ಯಾಸಕ ಝಹೂರ್ ಅಹ್ಮದ್ ಭಟ್ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಮುಂದೆ ಹಾಜರಾಗಿದ್ದರು.

ಎರಡು ದಿನಗಳ ನಂತರ, ಶುಕ್ರವಾರ, ಜಮ್ಮು ಮತ್ತು ಕಾಶ್ಮೀರ ನಾಗರಿಕ ಸೇವಾ ನಿಯಮಗಳು, ಜಮ್ಮು ಮತ್ತು ಕಾಶ್ಮೀರ ಸರಕಾರಿ ನೌಕರರ ನಡವಳಿಕೆ ನಿಯಮಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ರಜೆ ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ತಕ್ಷಣವೇ ಜಾರಿಗೆ ಬರುವಂತೆ ಭಟ್ ಅವರನ್ನು ಅಮಾನತುಗೊಳಿಸಿ ಜಮ್ಮು ಕಾಶ್ಮೀರ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಯುಪಿ ಬಾಲಕನ ಕಪಾಳ ಮೋಕ್ಷ ಪ್ರಕರಣ: ಆಲ್ಟ್‌ ನ್ಯೂಸ್‌ ಸಹ-ಸ್ಥಾಪಕ ಮೊಹಮ್ಮದ್‌ ಝುಬೇರ್ ವಿರುದ್ಧ ಎಫ್‌ಐಆರ್‌

ಅಮಾನತು ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿರುವ ಹಿರಿಯ ವಕೀಲ ಕಪಿಲ್ ಸಿಬಲ್, “ಈ ನ್ಯಾಯಾಲಯದ ಮುಂದೆ ಹಾಜರಾದ ಕೂಡಲೇ ಅವರನ್ನು ಅಮಾನತುಗೊಳಿಸಲಾಗಿದೆ. ಎರಡು ದಿನ ರಜೆ ಪಡೆದು ವಾಪಸ್ ಹೋಗಿದ್ದ ಅವರನ್ನು ಅಮಾನತು ಮಾಡಲಾಗಿದೆ. ಇದು ನ್ಯಾಯಸಮ್ಮತವಲ್ಲ. ಇದು ನಮ್ಮ ರೀತಿ ಅಲ್ಲ. ಸರ್ಕಾರ ಪ್ರಜಾಪ್ರಭುತ್ವದ ರೀತಿ ಕಾರ್ಯನಿರ್ವಹಿಸಬೇಕು” ಎಂದರು.

ಅಮಾನತು ಇತರ ವಿಷಯಗಳಿಗೆ ಸಂಬಂಧಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಆಗಸ್ಟ್ 24 ರಂದು, ಜಹೂರ್ ಅಹ್ಮದ್ ಭಟ್ ಅವರು ಸುಪ್ರೀಂ ಕೋರ್ಟ್ ಮುಂದೆ ಖುದ್ದಾಗಿ ಹಾಜರಾಗಿದ್ದರು ಮತ್ತು 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರದ ವಿರುದ್ಧ ಆಗಸ್ಟ್ 5, 2019 ರಂದು ವಾದಿಸಿದ್ದರು.

ನಂತರ ಜಹೂರ್ ಅಹ್ಮದ್ ಭಟ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಆಡಳಿತವು ಆಗಸ್ಟ್ 25,2019 ರಂದು ಅಮಾನತುಗೊಳಿಸಿತ್ತು.

ಭಟ್ ಅವರನ್ನು ಶ್ರೀನಗರದಲ್ಲಿ ನಿಯೋಜಿಸಲಾಗಿದ್ದ ಸ್ಥಳದಿಂದ ಅಮಾನತುಗೊಳಿಸಲಾಗಿತ್ತು ಮತ್ತು ಜಮ್ಮುವಿನ ಶಾಲಾ ಶಿಕ್ಷಣ ನಿರ್ದೇಶಕರ ಕಚೇರಿಗೆ ಆದೇಶವನ್ನು ಲಗತ್ತಿಸಲಾಗಿತ್ತು. ಆದರೆ ಅವರ ನಡವಳಿಕೆಯ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಲು ಹಿರಿಯ ಅಧಿಕಾರಿಯನ್ನು ವಿಚಾರಣಾ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಸಂವಿದಾನದ 370ನೇ ವಿಧಿಯನ್ನು ರದ್ದುಗೊಳಿಸಿ ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರವನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...