ನ್ಯೂಸ್‌ಕ್ಲಿಕ್‌ ಸಂಪಾದಕರ ಬಂಧನಕ್ಕೆ ಅಷ್ಟು ಆತುರವೇನಿತ್ತು: ದೆಹಲಿ ಪೊಲೀಸರಿಗೆ ಸುಪ್ರೀಂ ತರಾಟೆ

Date:

ನ್ಯೂಸ್‌ಕ್ಲಿಕ್‌ ಸಂಪಾದಕರಾದ ಪ್ರಭೀರ್ ಪುರ್‌ಕಾಯಸ್ಥ ಅವರನ್ನು ಬಂಧಿಸಿ ಅವರ ವಕೀಲರಿಗೂ ಮಾಹಿತಿ ನೀಡದೆ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಲು ಅಷ್ಟು ಆತುರವೇನಿತ್ತು ಎಂದು ದೆಹಲಿ ಪೊಲೀಸ್ ವಿಶೇಷ ಘಟಕವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಹಾಗೂ ಸಂದೀಪ್ ಮೆಹ್ತಾ ಒಳಗೊಂಡ ಪೀಠ ದೆಹಲಿ ಪೊಲೀಸರನ್ನು ಪ್ರಶ್ನಿಸಿತು. “ ನೀವು ಏಕೆ ಸಂಪಾದಕರ ವಕೀಲರಿಗೆ ಮುಂಚಿತವಾಗಿ ತಿಳಿಸಲಿಲ್ಲ? ನೀವು ಹಿಂದಿನ ದಿನದ ಸಂಜೆ ಬಂಧಿಸಿದ್ದೀರಿ. ನೀವು ಒಂದು ದಿನ ಪೂರ್ತಿ ವಕೀಲರಿಗೆ ಮಾಹಿತಿ ನೀಡಿಲ್ಲ. ಮರುದಿನ ಬೆಳಿಗ್ಗೆ 6 ಗಂಟೆಗೆ ಕೋರ್ಟಿಗೆ ಹಾಜರುಪಡಿಸಲು ಅಷ್ಟು ಆತುರವೇನಿತ್ತು” ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು.

“ನೀವು ಬೆಳಿಗ್ಗೆ 10 ಗಂಟೆಗೆ ಹಾಜರುಪಡಿಸಬಹುದಿತ್ತು. ನ್ಯಾಯದ ಸಾಮಾನ್ಯ ತತ್ವದ ಅಗತ್ಯತೆಗಳ ಅನುಸಾರ ಬೆಳಿಗ್ಗೆ 10 ರಿಂದ 11 ಗಂಟೆಯೊಳಗೆ ಹಾಜರುಪಡಿಸಿ, ಅವರ ವಕೀಲರಿಗೂ ಮುಂಚಿತವಾಗಿ ತಿಳಿಸಬಹುದಾಗಿತ್ತು” ಎಂದು ಪೀಠವು ಹೇಳಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಭೀರ್ ಪುರ್‌ಕಾಯಸ್ಥ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಮುನ್ನ ಅವರ ವಕೀಲರಿಗೆ ತಿಳಿಸದಿರುವುದಕ್ಕೆ ಸುಪ್ರೀಂ ಕೋರ್ಟ್ ಪೀಠ ಆಶ್ಚರ್ಯ ವ್ಯಕ್ತಪಡಿಸಿತು.

ಬಂಧನದ ಸಮಯದಲ್ಲಿ ತನಿಖಾ ಸಂಸ್ಥೆಯ ನಡವಳಿಕೆಯನ್ನು ಕೋರ್ಟ್ ಪ್ರಶ್ನೆ ಮಾಡಿತು.” ಅನ್ಯಾಯ ಮಾತ್ರ ಆಗಬಾರದು, ಆದರೆ ಇಲ್ಲಿ ಅದು ತೋರುತ್ತದೆ” ಎಂದು ನ್ಯಾಯಾಧೀಶರು ದೆಹಲಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಕಕ್ಷಿದಾರ ನ್ಯೂಸ್‌ಕ್ಲಿಕ್‌ ಸಂಪಾದಕ ಪ್ರಭೀರ್ ಪುರ್‌ಕಾಯಸ್ಥ ಅವರನ್ನು ಬಂಧಿಸಿರುವುದು ಅಕ್ರಮ. ಅವರಿಗೆ ಬಂಧನದ ಯಾವುದೇ ಮಾನದಂಡಗಳನ್ನು ಅನುಸರಿಸಲಾಗಿಲ್ಲ ಎಂದು ಹಿರಿಯ ವಕೀಲ ಕಪಿಲ್ ಸಿಬಾಲ್ ಕೋರ್ಟ್‌ಗೆ ಮನವರಿಕೆ ಮಾಡಿದರು.

“ಕಳೆದ 180 ದಿನಗಳಿಂದ ಸರಿಯಾದ ಅನುಮೋದನೆಗಳೊಂದಿಗೆ ನೀವು ಸಮರ್ಪಕವಾದ ಆರೋಪಪಟ್ಟಿಯನ್ನು ಸಲ್ಲಿಸಿಲ್ಲ” ಎಂದು ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.

ಚೀನಾ ನೆರವಿನೊಂದಿಗೆ ನ್ಯೂಸ್‌ ಕ್ಲಿಕ್ ವೇದಿಕೆಯ ಮೂಲಕ ದೇಶ ವಿರೋಧಿ ಪ್ರಚಾರ ನಡೆಸುತ್ತಿರುವ ಆರೋಪದಲ್ಲಿ ಕಳೆದ ವರ್ಷ 2023ರ ಅಕ್ಟೋಬರ್‌ 3 ರಂದು ಪುರ್‌ಕಾಯಸ್ಥ ಅವರನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...