ರಾಜಸ್ಥಾನ ವಿದ್ಯುತ್ ನಿಗಮದಿಂದ ಹೆಚ್ಚುವರಿ 1300 ಕೋಟಿ ರೂ ಶುಲ್ಕ ಕೇಳಿದ್ದ ಅದಾನಿ ಸಂಸ್ಥೆಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Date:

ರಾಜಸ್ಥಾನದ ಜೈಪುರ ವಿದ್ಯುತ್‌ ವಿತ್ರನ್ ನಿಗಮ ನಿಯಮಿತ ಕಂಪನಿಯಿಂದ ಹೆಚ್ಚುವರಿ 1300 ಕೋಟಿ ರೂ. ವಿಳಂಬ ಶುಲ್ಕ ಕೇಳಿದ್ದ ಅದಾನಿ ವಿದ್ಯುತ್ ರಾಜಸ್ಥಾನ ಸಂಸ್ಥೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಇತರ ಅರ್ಜಿಗಳ ವಿಚಾರಣೆ ನಡೆಸಿದ ಅನಿರುದ್ಧ ಬೋಸ್‌ ಮತ್ತು ಪಿ ವಿ ಸಂಜಯ್ ಕುಮಾರ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ವಿಳಂಬ ಹೆಚ್ಚುವರಿ ಶುಲ್ಕ ವಿಧಿಸುವುದಕ್ಕೆ ಅದಾನಿ ಸಂಸ್ಥೆಯು ಸರಿಯಾದ ಕಾನೂನು ನೆರವನ್ನು ಪಡೆದುಕೊಂಡಿಲ್ಲ ಎಂದು ಹೆಚ್ಚುವರಿ ಶುಲ್ಕದ ಅರ್ಜಿಯನ್ನು ವಜಾಗೊಳಿಸಿತು.

“ಈ ರೀತಿಯ ಪರಿಹಾರವನ್ನು ಇತರ ಅರ್ಜಿಯಲ್ಲಿ ಕೇಳುವಂತಿಲ್ಲ. ಇದನ್ನು ವಿಚಾರಣೆಯ ಸಂದರ್ಭದಲ್ಲಿ ಸ್ಪಷ್ಟೀಕರಣದ ಅರ್ಜಿ ಎಂದು ವಿವರಿಸಲಾಗಿದೆ” ಎಂದು ಪೀಠ ಹೇಳಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಕೋರ್ಟ್‌ನ ಕಾನೂನು ನೆರವು ಸಮಿತಿಗೆ ಅದಾನಿ ವಿದ್ಯುತ್ ರಾಜಸ್ಥಾನ ಲಿಮಿಟೆಡ್‌ಗೆ ವಿಧಿಸಲಾಗಿರುವ 50 ಸಾವಿರ ರೂ ಮೊತ್ತವನ್ನು ಠೇವಣಿಯಿಡಬೇಕು ಎಂದು ತೀರ್ಪಿನ ಉಳಿದ ಭಾಗವನ್ನು ಓದುವಾಗ ಪೀಠ ತಿಳಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ಜನವರಿ 24ರಂದು ವಾದಿ ಪ್ರತಿವಾದಿಗಳ ವಾದವನ್ನು ಆಲಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.

ಜೈಪುರದ ವಿದ್ಯುತ್‌ ನಿಗಮದ ಪರವಾಗಿ ಹಾಜರಾಗಿದ್ದ ದುಷ್ಯಂತ್ ದಾವೆ ಅದಾನಿ ಸಂಸ್ಥೆ ಕೇಳಿದ್ದ ಹೆಚ್ಚುವರಿ ವಿಳಂಬ ಶುಲ್ಕ 1300 ಕೋಟಿ ರೂ. ಹಣವನ್ನು ಸ್ಪಷ್ಟವಾಗಿ ವಿರೋಧಿಸಿದರು.

ಅದಾನಿ ಕಂಪನಿಯ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಸಿಂಘ್ವಿ ಹಾಜರಾಗಿದ್ದರು.

ವಿದ್ಯುತ್‌ ಖರೀದಿಯ ಒಪ್ಪಂದಕ್ಕಾಗಿ 2022ರ ಜೂನ್‌ 30ರಂದು ರಾಜಸ್ಥಾನ ಸರ್ಕಾರ ಹಾಗೂ ಅದಾನಿ ಸಂಸ್ಥೆ ನಡುವೆ ಒಪ್ಪಂದ ಏರ್ಪಟ್ಟಿತ್ತು. ಅದಾನಿ ಸಂಸ್ಥೆ ಬಾಕಿ ಹಣ ಉಳಿಸಿಕೊಂಡಿದ್ದಕ್ಕಾಗಿ 1376.35 ಕೋಟಿ ರೂ. ಹೆಚ್ಚುವರಿ ವಿಳಂಬ ಶುಲ್ಕ ಬಾಕಿ ನೀಡಬೇಕೆಂದು ಮನವಿ ಸಲ್ಲಿಸಿದೆ.

ಇದನ್ನು ವಿರೋಧಿಸಿರುವ ಜೈಪುರ ವಿದ್ಯುತ್ ಸಂಸ್ಥೆ ಪ್ರಕರಣವನ್ನು ಸುಪ್ರೀಂ ಕೋರ್ಟ್ 2020ರಲ್ಲಿಯೇ ಬಗೆಹರಿಸಿದೆ ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...