ಸಾವರ್ಕರ್‌ ಹೆಸರಿನ ದುರ್ಬಳಕೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Date:

ವಿನಾಯಕ ದಾಮೋದರ್ ಸಾವರ್ಕರ್ ಅವರ ಹೆಸರನ್ನು ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950ರ ಅಡಿಯಲ್ಲಿ ಪಟ್ಟಿ ಮಾಡಲು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜೊತೆಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತನ್ನ ಮೂಲಭೂತ ಕರ್ತವ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂಬುದನ್ನೂ ಸುಪ್ರೀಂ ನಿರಾಕರಿಸಿದೆ.

ವೃತ್ತಿಪರ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಲಾಂಛನಗಳು ಮತ್ತು ಹೆಸರುಗಳ ಅನುಚಿತ ಬಳಕೆಯನ್ನು ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950 ತಡೆಯುತ್ತದೆ. ಇದರಡಿಯಲ್ಲಿ ಸಾವರ್ಕರ್ ಹೆಸರು ಸೇರಿಸಬೇಕು ಎಂಬುದು ಅರ್ಜಿದಾದ ಸಂಶೋಧನಕಾರ ಡಾ. ಪಂಕಜ್ ಕುಮುದ್‌ ಚಂದ್ರ ಫಡ್ನಿಸ್ ಮನವಿ.

ಇದನ್ನು ಓದಿದ್ದೀರಾ? ರಾಹುಲ್ ಗಾಂಧಿ ಸಂಸತ್ತಿನಿಂದ ಅನರ್ಹ | ಹತ್ತು ಗಂಭೀರ ಪ್ರಶ್ನೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೊತೆಗೆ ಸಾವರ್ಕರ್ ವಿರುದ್ಧ ಆರೋಪ ಹೊರಿಸುವ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿಯವರು ತಮ್ಮ ಮೂಲಭೂತ ಕರ್ತವ್ಯಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದೂ ಫಡ್ನಿಸ್ ಆರೋಪಿಸಿದ್ದಾರೆ.

“ಕಳೆದ 30 ವರ್ಷಗಳಿಂದ ನಾನು ಸಾವರ್ಕರ್ ಬಗ್ಗೆ ಸಂಶೋಧನೆ ಮಾಡುತ್ತಿದ್ದೇನೆ. ಆದ್ದರಿಂದ ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆ, 1950ರ ಅಡಿಯಲ್ಲಿ ಸಾವರ್ಕರ್ ಹೆಸರು ಪಟ್ಟಿ ಮಾಡಬೇಕು” ಎಂದು ಕೋರಿದ್ದಾರೆ.

ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ನೇತೃತ್ವದ ದ್ವಿಸದಸ್ಯ ಪೀಠವು ಯಾವುದೇ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿಲ್ಲ. ಈ ರೀತಿಯ ರಿಟ್‌ಗಳ ವಿಚಾರಣೆ ಮಾಡಲ್ಲ ಎಂದು ಹೇಳಿದೆ.

“ಈ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸಬೇಕಾದ ಯಾವುದೇ ಕಾರಣ ನಮಗೆ ಕಂಡುಬರುತ್ತಿಲ್ಲ. ಅರ್ಜಿದಾರರ ಯಾವುದೇ ಮೂಲಭೂತ ಹಕ್ಕಿನ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಹೇಳಿ ಸುಪ್ರೀಂ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ.

ಇದನ್ನು ಓದಿದ್ದೀರಾ? ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ | ಪೂರ್ಣೇಶ್‌ ಮೋದಿಗೆ ಸುಪ್ರೀಂ ಕೋರ್ಟ್‌ ನೋಟಿಸ್

ಇನ್ನು ಅರ್ಜಿದಾರರು ರಾಹುಲ್ ಗಾಂಧಿ ಅವರು ಸಾವರ್ಕರ್ ವಿರುದ್ಧ ಮಾಡಿರುವ ಆರೋಪಗಳಿಗೆ ಶಿಕ್ಷೆಯಾಗಿ ಸಮುದಾಯ ಸೇವೆ ಮಾಡಲು ನಿರ್ದೇಶಿಸಬೇಕು ಎಂದೂ ಕೋರಿದ್ದರು.

“ಸಾವರ್ಕರ್ ಅವರು ಬ್ರಿಟಿಷರ ಸಹಯೋಗಿಯಾಗಿದ್ದು, ಬ್ರಿಟಿಷರಿಂದ ಪಿಂಚಣಿ ಪಡೆದಿದ್ದರು” ಎಂದು ಇತ್ತೀಚೆಗೆ ರಾಹುಲ್ ಗಾಂಧಿ ಹೇಳಿದ್ದರು. ಇದಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತ್ತು. ಈ ರೀತ ಹೇಳಿಕೆ ನೀಡಿದರೆ ಸ್ವಯಂಪ್ರೇರಿತ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಮನಮೋಹನ್ ಅವರಿದ್ದ ಪೀಠ ಹೇಳಿತ್ತು. ಆದರೆ ಅವರ ವಿರುದ್ಧ ಹೂಡಲಾದ ಕ್ರಿಮಿನಲ್ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಸಮನ್ಸ್‌ಗೆ ಪೀಠವು ತಡೆ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...