ಇದು ಮುಕ್ತ ಮಾರುಕಟ್ಟೆ: ಇಂಟರ್‌ನೆಟ್ ಬೆಲೆ ನಿಯಂತ್ರಿಸಲು ಕೋರಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

Date:

ಇಂಟರ್‌ನೆಟ್ ಬೆಲೆ ನಿಯಂತ್ರಿಸಲು ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, “ಇದು ಮುಕ್ತ ಮಾರುಕಟ್ಟೆ” ಎಂದು ಹೇಳಿದೆ. ಸದ್ಯ ದೇಶದಲ್ಲಿ ಬಹುತೇಕ ಎಲ್ಲಾ ಸಂಸ್ಥೆಗಳು ಇಂಟರ್‌ನೆಟ್ ಬೆಲೆಯನ್ನು ಏರಿಸಿವೆ. ಈ ಬೆಲೆಯನ್ನು ನಿಯಂತ್ರಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್‌ ಅವರ ದ್ವಿಸದಸ್ಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಹಲವು ಸಂಸ್ಥೆಗಳ ಇಂಟರ್‌ನೆಟ್ ಸೇವೆಯನ್ನು ಬಳಸುತ್ತಿರುವ ಗ್ರಾಹಕರಾದ ರಜತ್ ಎಂಬವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ಇದನ್ನು ಓದಿದ್ದೀರಾ? ವಾಟ್ಸಾಪ್‌ನಲ್ಲಿ ಇಂಟರ್‌ನೆಟ್ ಇಲ್ಲದೆ ಫೈಲ್‌ಗಳು, ಇಮೇಜ್‌ಗಳ ಶೇರಿಂಗ್ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಮುಕ್ತ ಮಾರುಕಟ್ಟೆಯಾಗಿದೆ. ಇಂಟರ್‌ನೆಟ್ ಬಳಸಲು ಹಲವು ಆಯ್ಕೆಗಳಿವೆ. ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಕೂಡಾ ಇಂಟರ್‌ನೆಟ್ ಸೇವೆಯನ್ನು ನೀಡುತ್ತದೆ” ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

ಆದರೆ ಇಂಟರ್‌ನೆಟ್ ಮಾರುಕಟ್ಟೆಯಲ್ಲಿ ಬಹುತೇಕ ಷೇರುಗಳನ್ನು ಜಿಯೋ ಮತ್ತು ರಿಲಯನ್ಸ್ ನಿಯಂತ್ರಿಸುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್ ಪೀಠವು, “ನೀವು ಕೇಂದ್ರೀಕರಣದ ಬಗ್ಗೆ ಆರೋಪ ಮಾಡುವುದಾದರೆ, ಭಾರತದ ಸ್ಪರ್ಧಾ ಆಯೋಗಕ್ಕೆ ಅರ್ಜಿ ಸಲ್ಲಿಸಿ” ಎಂದು ಪೀಠವು ಸಲಹೆ ನೀಡಿದೆ.

ದೇಶದಲ್ಲಿ ರಿಲಯನ್ಸ್ ಜಿಯೋ ಇಂಟರ್‌ನೆಟ್ ಮಾರುಕಟ್ಟೆಯನ್ನು ತನ್ನ ಹತೋಟಿಗೆ ಪಡೆದುಕೊಂಡಿದೆ. ಆರಂಭದಲ್ಲಿ ಉಚಿತ ಸಿಮ್, ಉಚಿತ ಇಂಟರ್‌ನೆಟ್ ನೀಡುವ ಮೂಲಕ ಜನರು ಇತರೆ ಇಂಟರ್‌ನೆಟ್ ತೊರೆದು ಜಿಯೋ ಇಂಟರ್‌ನೆಟ್‌ ಅನ್ನು ಬಳಸುವಂತೆ ಮಾಡಿದ ರಿಲಯನ್ಸ್ ಬಳಿಕ ಇಂಡಸ್ಟ್ರಿಯನ್ನು ಆವರಿಸಿಕೊಂಡಿದೆ. ಬಿಎಸ್‌ಎನ್‌ಎಲ್ ಸೇವೆಗೆ ಪ್ರಾಧಾನ್ಯತೆ ನೀಡಬೇಕಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ರಿಲಯನ್ಸ್ ಸಂಸ್ಥೆಗೆ ಸಹಾಯ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...