ಪೊಲೀಸ್ ಠಾಣೆಗಳ ಅಧಿಕಾರ ವ್ಯಾಪ್ತಿ ಕೊರತೆ ಆಧಾರದಲ್ಲಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹಲವು ಎಫ್ಐಆರ್ಗಳನ್ನು ರದ್ದುಗೊಳಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್ ಆದೇಶವು ‘ನ್ಯಾಯದ ಅಣಕವಲ್ಲದೆ ಬೇರೇನೂ ಅಲ್ಲ’ ಎಂದು ಸುಪ್ರೀಂ ಬಣ್ಣಿಸಿದೆ.
ಆಂಧ್ರ ಎಸಿಬಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಎಂ ಸುಂದ್ರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು, ‘ಭ್ರಷ್ಟಾಚಾರ ತಡೆ ಕಾಯ್ದೆ-1988’ರ ಅಡಿಯಲ್ಲಿ ದಾಖಲಾಗಿದ್ದ ಎಫ್ಐಆರ್ಗಳನ್ನು ಹೈಪರ್-ಟೆಕ್ನಿಕಲ್ ವಿಧಾನದ ಮೂಲಕ ಹೈಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್ನ ಈ ಆದೇಶವು ಕೆಲವು ಪ್ರಕರಣಗಳಲ್ಲಿ ತನಿಖೆಗಳು ಆರಂಭವಾಗುವಾಗಲೇ ತನಿಖೆಯನ್ನು ಸ್ಥಗಿತಗೊಳಿಸಿತ್ತು. ಆದರೆ, ಇತರ ಪ್ರಕರಣಗಳಲ್ಲಿ ಕ್ರಿಮಿನಲ್ ವಿಚಾರಣೆಗಳು ಕೊನೆಗೊಂಡಿವೆ ಎಂಬುದನ್ನು ಗಮನಿಸಿದೆ.
“ಎಫ್ಐಆರ್ಗಳನ್ನು ರದ್ದುಗೊಳಿಸಲು ಆಂಧ್ರಪ್ರದೇಶ ಹೈಕೋರ್ಟ್ ಅನಗತ್ಯ ಪ್ರಯತ್ನಗಳನ್ನು ಮತ್ತು ಕ್ರಮಗಳನ್ನು ತೆಗೆದುಕೊಂಡಿದೆ. ಇನ್ನು ಮುಂದೆ, ಹೈಕೋರ್ಟ್ ಎಫ್ಐಆರ್ಗಳಿಗೆ ಸಂಬಂಧಿಸಿದಂತೆ ಯಾವುದೇ ಸವಾಲನ್ನು ಸ್ವೀಕರಿಸುವುದಿಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇವೆ” ಎಂದು ನ್ಯಾಯಪೀಠವು ಹೇಳಿದೆ.
ಈ ಲೇಖನ ಓದಿದ್ದೀರಾ?: ದೇವರಾಜ ಅರಸು-ಸಿದ್ದರಾಮಯ್ಯ | ಸಾಮಾಜಿಕ ನ್ಯಾಯದ ನಿಜ ಹರಿಕಾರ ಯಾರು?
“ಎಸಿಬಿಯ ಕೇಂದ್ರ ತನಿಖಾ ಘಟಕವನ್ನು ಹೈದರಾಬಾದ್ನಿಂದ ವಿಜಯವಾಡಕ್ಕೆ ಸ್ಥಳಾಂತರಿಸುವುದರಿಂದ ಅದರ ಅಧಿಕಾರ ವ್ಯಾಪ್ತಿಯಿಂದ ಕಡಿತಗೊಳ್ಳುವುದಿಲ್ಲ. ಒಂದು ವೇಳೆ, ಹೈಪರ್-ಟೆಕ್ನಿಕಲ್ ಆಧಾರದ ಮೇಲೆ, ಎಫ್ಐಆರ್ಗಳನ್ನು ರದ್ದುಗೊಳಿಸಿದರೆ, ಅಸ್ತಿತ್ವದಲ್ಲಿರುವ ನ್ಯಾಯವ್ಯಾಪ್ತಿಗೆ ಸಂಬಂಧಿಸಿದಂತೆ ಕಾನೂನನ್ನು ರೂಪಿಸಲು ಹೈಕೋರ್ಟ್ ಬದ್ಧವಾಗಿರುತ್ತದೆ” ಎಂದು ಪೀಠ ಹೇಳಿದೆ.
2016 ಮತ್ತು 2020ರ ನಡುವೆ ದಾಖಲಾದ ಎಫ್ಐಆರ್ಗಳನ್ನು ಪೀಠವು ಮರುಸ್ಥಾಪಿಸಿದೆ. ಎಸಿಬಿ ತನಿಖೆಯನ್ನು ಮುಂದುವರಿಸಲು ಅನುಮತಿ ನೀಡಿದೆ. ತನಿಖೆ ಬಾಕಿ ಇರುವಾಗ ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದೂ ಸೂಚಿಸಿದೆ.




