ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆ: ‘ಫ್ಯಾಕ್ಟ್‌ ಚೆಕ್ ಘಟಕ’ ಸ್ಥಾಪನೆಗೆ ತಡೆ

Date:

ನಕಲಿ ಸುದ್ದಿಗಳ ಸವಾಲನ್ನು ಎದುರಿಸಲು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರೆಸ್‌ ಇನ್‌ಫಾರ್ಮೇಶನ್‌ ಬ್ಯೂರೋ ಸತ್ಯ ಶೋಧನಾ ಘಟಕ ಆರಂಭ ಕುರಿತಂತೆ ಕೇಂದ್ರ ಸರ್ಕಾರದ ಅಧಿಸೂಚನೆಗೆ ಸುಪ್ರೀಂ ಕೋರ್ಟ್‌ ಇಂದು(ಗುರುವಾರ) ತಡೆಯಾಜ್ಞೆ ವಿಧಿಸಿದೆ.

ಫ್ಯಾಕ್ಟ್‌ ಚೆಕ್‌ ಘಟಕದ ಕುರಿತು ಬುಧವಾರವಷ್ಟೇ (ಮಾರ್ಚ್‌ 20) ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಸರ್ಕಾರಕ್ಕೆ ಇದರಿಂದ ಹಿನ್ನಡೆಯಾಗಿದೆ.

ಫ್ಯಾಕ್ಟ್‌ ಚೆಕ್‌ ಘಟಕದ ಸ್ಥಾಪನೆ ಪ್ರಶ್ನಿಸಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್‌ ಕಮ್ರಾ ಹಾಗೂ ಎಡಿಟರ್ಸ್‌ ಗಿಲ್ಡ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು, ಫ್ಯಾಕ್ಟ್‌ಚೆಕ್‌ ಘಟಕಕ್ಕೆ ತಡೆಯಾಜ್ಞೆ ನೀಡಿತು. “ಫ್ಯಾಕ್ಟ್‌ಚೆಕ್‌ ಘಟಕದಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ. ಹಾಗಾಗಿ, ಘಟಕಕ್ಕೆ ತಡೆಯಾಜ್ಞೆ ನೀಡಲಾಗುತ್ತಿದೆ” ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈ ವಿಚಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲ ಮತ್ತು ಮನೋಜ್‌ ಮಿಶ್ರಾ ಆವರ ಪೀಠ ಈ ತಡೆಯಾಜ್ಞೆ ನೀಡಿತು.

pib fact chek

ಫ್ಯಾಕ್ಟ್‌ ಚೆಕ್‌ ಘಟಕದ ಸ್ಥಾಪನೆ ಪ್ರಶ್ನಿಸಿ ಕುನಾಲ್‌ ಕಮ್ರಾ ಹಾಗೂ ಎಡಿಟರ್ಸ್‌ ಗಿಲ್ಡ್‌ ಆಫ್‌ ಇಂಡಿಯಾ ಸಲ್ಲಿಸಿದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿತ್ತು. ಕೇಂದ್ರ ಸರ್ಕಾರವು ಫ್ಯಾಕ್ಟ್‌ ಚೆಕ್‌ ಘಟಕ ಸ್ಥಾಪನೆಗೆ ತಡೆ ನೀಡಬೇಕು ಎಂದು ಮೊದಲೇ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಫ್ಯಾಕ್ಟ್‌ ಚೆಕ್‌ ಘಟಕ ಸ್ಥಾಪನೆಗೆ ಬಾಂಬೆ ಹೈಕೋರ್ಟ್‌ ತಡೆಯಾಜ್ಞೆ ನೀಡಿರಲಿಲ್ಲ. ಈಗ ಬಾಂಬೆ ಹೈಕೋರ್ಟ್‌ ತೀರ್ಪನ್ನು ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ.

ಇದನ್ನು ಓದಿದ್ದೀರಾ? ವಾಟ್ಸಾಪ್ ಮೂಲಕ ಪ್ರಧಾನಿಯ ‘ವಿಕ್ಷಿತ್ ಭಾರತ್ ಸಂದೇಶ’ಕ್ಕೆ ಚುನಾವಣಾ ಆಯೋಗ ತಡೆ

“ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯದ ಅಡಿಯಲ್ಲಿ ಪಿಐಬಿ ಫ್ಯಾಕ್ಟ್‌ಚೆಕ್‌ ಘಟಕವನ್ನು ತರಲಾಗಿದೆ. 2021ರ ಮಾಹಿತಿ ತಂತ್ರಜ್ಞಾನ ನಿಯಮಗಳ (IT Rules) ಅಡಿಯಲ್ಲಿ ಫ್ಯಾಕ್ಟ್‌ಚೆಕ್‌ ಘಟಕವು ಕಾರ್ಯನಿರ್ವಹಿಸಲಿದೆ” ಎಂದು ಕೇಂದ್ರ ಸರ್ಕಾರದ ಅಧಿಸೂಚನೆ ತಿಳಿಸಿತ್ತು. ಈಗಾಗಲೇ ಪಿಐಬಿ ಫ್ಯಾಕ್ಟ್‌ಚೆಕ್‌ ಘಟಕವಿದ್ದು, ಇದನ್ನು ಈಗ ಸರ್ಕಾರವು ಐಟಿ ನಿಯಮಗಳ ಅಡಿಯಲ್ಲಿ ಜಾರಿಗೆ ತಂದಿದೆ. ನಕಲಿ ಸುದ್ದಿಗಳ ಹಾವಳಿ ತಡೆಯುವ ಜತೆಗೆ, ಜನರಿಗೆ ಅಸಲಿ ಸುದ್ದಿಗಳು ಯಾವುವು ಎಂಬುದನ್ನು ತಿಳಿಸುವುದು ಫ್ಯಾಕ್ಟ್‌ಚೆಕ್‌ ಘಟಕದ ಪ್ರಮುಖ ಉದ್ದೇಶವಾಗಿದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...