ಗುರುದ್ವಾರ ಪ್ರವೇಶಿಸಲು ಸೇನಾ ಅಧಿಕಾರಿ ನಕಾರ; ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

Date:

ಗುರುದ್ವಾರಕ್ಕೆ ಪ್ರವೇಶಿಸಲು ನಿರಾಕರಿಸಿದ್ದಕ್ಕಾಗಿ ವಜಾಗೊಂಡಿದ್ದ ಕ್ರಿಶ್ಚಿಯನ್ ಸೇನಾ ಅಧಿಕಾರಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಟೀಕಿಸಿದೆ. ಸೇನೆಯು ಜಾತ್ಯತೀತ ಸಂಸ್ಥೆಯಾಗಿದೆ ಮತ್ತು ಅದರ ಶಿಸ್ತಿನಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ನ್ಯಾಯಾಲಯವು, ‘ತನ್ನ ಸಹ (ಸಿಖ್) ಸೈನಿಕರ ನಂಬಿಕೆಯನ್ನು ಗೌರವಿಸಲು ವಿಫಲವಾದ ಕಾರಣ ಅವರನ್ನು ವಜಾಗೊಳಿಸಿರುವ ಸಶಸ್ತ್ರ ಪಡೆಗಳ ನಿರ್ಧಾರವು ಸರಿಯಾಗಿದೆ’ ಎಂದಿದೆ. ಅಧಿಕಾರಿಯ ವಜಾಗೊಳಿಸುವಿಕೆಯನ್ನು ಎತ್ತಿಹಿಡಿದಿದೆ.

ಈ ಹಿಂದೆ, 3ನೇ ​​ಕ್ಯಾವಲ್ರಿ ರೆಜಿಮೆಂಟ್‌ನಲ್ಲಿ ಲೆಫ್ಟಿನೆಂಟ್ ಆಗಿದ್ದ ಕಮಲೇಶನ್ ಅವರು ಗುರುದ್ವಾರ ಪ್ರವೇಶಿಸಲು ನಿರಾಕರಿಸಿದ್ದರು. ಅದಕ್ಕಾಗಿ, ಅವರನ್ನು ಸೇನೆಯಿಂದ ವಜಾಗೊಳಿಸಲಾಗಿತ್ತು. ‘ಗುರುದ್ವಾರ ಪ್ರವೇಶಿಸಲು ಒತ್ತಾಯಿಸುವುದು ತಮ್ಮ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ’ ಎಂದು ವಾದಿಸಿದ್ದ ಸೇನಾ ಅಧಿಕಾರಿ, ತಮ್ಮ ವಜಾವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೊಸ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ನೇತೃತ್ವದ ಪೀಠವು, ವಜಾ ಆದೇಶವನ್ನು ಎತ್ತಿ ಹಿಡಿದಿದೆ. “ಅವರು (ಸೇನಾ ಅಧಿಕಾರಿ) ಯಾವ ರೀತಿಯ ಸಂದೇಶ ನೀಡುತ್ತಿದ್ದಾರೆ? ಇದು ಸೇನಾ ಅಧಿಕಾರಿಯೊಬ್ಬರ ಅಸಭ್ಯತೆ ಮತ್ತು ಅಶಿಸ್ತಿನಿಂದ ಕೂಡಿದೆ. ಅವರನ್ನು ವಜಾಗೊಳಿಸಿರುವುದು ಸರಿಯಾಗಿದೆ. ಈ ರೀತಿಯ ಜಾತಿವಾದಿ ಮನಸ್ಥಿತಿ ಇರುವ ವ್ಯಕ್ತಿಗಳು ಮಿಲಿಟರಿಯಲ್ಲಿರಲು ಅರ್ಹರೇ? ಅವರ ನಡವಳಿಕೆಯು ಕಾನೂನುಬದ್ಧ ಆದೇಶದ ಉಲ್ಲಂಘನೆಗೆ ಸಮನಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಕಬ್ಬಿನ ನಂತರ ಮೆಕ್ಕೆಜೋಳ, ಬೀದಿಗೆ ಬಂದ ರೈತರ ಬದುಕು

“ಅವರು ಅತ್ಯುತ್ತಮ ಅಧಿಕಾರಿಯೇ ಆಗಿರಬಹುದು. ಆದರೆ, ಅವರು ಭಾರತೀಯ ಸೈನ್ಯದಲ್ಲಿರಲು ಸೂಕ್ತವಲ್ಲ. ಈ ಸಮಯದಲ್ಲಿ ನಮ್ಮ ಪಡೆಗಳು ಹೊಂದಿರುವ ಜವಾಬ್ದಾರಿಗಳ ಪ್ರಮಾಣ… ಇದು ನಾವು ನಿರ್ವಹಿಸಲು ಬಯಸುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.

ಕಮಲೇಶನ್ ಅವರು ಪೂಜೆ ನಡೆಸುವಾಗ ದೇವಾಲಯದ ಗರ್ಭಗುಡಿ ಪ್ರವೇಶಿಸುವಂತೆ ಅವರ ಉನ್ನತ ಅಧಿಕಾರಿ ನೀಡಿದ್ದ ಆದೇಶವನ್ನು ನಿರಾಕರಿಸಿದ್ದರು. ಇದು ಅವರ ಏಕದೇವತಾವಾದಿ ಕ್ರಿಶ್ಚಿಯನ್ ನಂಬಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...