ಬಂಗಾಳ ಮತದಾರರ ಪಟ್ಟಿ ಪರಿಷ್ಕರಣೆ: ಅಡೆತಡೆ ಒಡ್ಡದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ; ಗಡುವು ಒಂದು ವಾರ ವಿಸ್ತರಣೆ

Date:

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಯಾವುದೇ ರೀತಿಯ ಅಡೆತಡೆಗಳನ್ನು ಉಂಟುಮಾಡದಂತೆ ಸುಪ್ರೀಂ ಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇದೇ ವೇಳೆ, ಪರಿಷ್ಕರಣಾ ಪ್ರಕ್ರಿಯೆಯಲ್ಲಿನ ದತ್ತಾಂಶಗಳ ಪರಿಶೀಲನೆ ಮತ್ತು ಅಂತಿಮಗೊಳಿಸುವಿಕೆಗೆ ನಿಗದಿಪಡಿಸಲಾಗಿದ್ದ ಗಡುವನ್ನು ಒಂದು ವಾರಗಳ ಕಾಲ ವಿಸ್ತರಿಸಿದೆ.

​ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಯ್ಮಾಲ್ಯ ಬಾಗ್ಚಿ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು , “ನಾವು ಅಡೆತಡೆಗಳನ್ನು ನಿವಾರಿಸುತ್ತೇವೆ, ಆದರೆ ಪ್ರಕ್ರಿಯೆ ಪೂರ್ಣಗೊಳ್ಳಲು ಅಡ್ಡಿಪಡಿಸುವುದಿಲ್ಲ. ಈ ವಿಷಯದಲ್ಲಿ ನಾವು ಸ್ಪಷ್ಟವಾಗಿದ್ದೇವೆ. ಪರಿಷ್ಕರಣೆ ಕಾರ್ಯವು ನಿಗದಿತ ರೀತಿಯಲ್ಲೇ ಮುಂದುವರಿಯಬೇಕು ಎಂದು ತಾಕೀತು ಮಾಡಿತು.

ವಾಟ್ಸಾಪ್ ಮೂಲಕ ಚುನಾವಣಾ ಆಯೋಗ ನೀಡುತ್ತಿರುವ ಸೂಚನೆಗಳನ್ನು ತಡೆಯಬೇಕು ಮತ್ತು ಎಲ್ಲ ನಿರ್ದೇಶನಗಳನ್ನು ಅಧಿಕೃತವಾಗಿ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್ ಅನ್ನು ಕೋರಿತ್ತು. ಅಲ್ಲದೆ, ಹೊರಗಿನಿಂದ ಕರೆತರಲಾದ ‘ಮೈಕ್ರೋ ಅಬ್ಸರ್ವರ್‌’ಗಳನ್ನು (ಸೂಕ್ಷ್ಮ ವೀಕ್ಷಕರು) ತೆಗೆದುಹಾಕಿ, ಅವರ ಬದಲಿಗೆ ರಾಜ್ಯದ 8,505 ‘ಗ್ರೂಪ್ ಬಿ’ ಅಧಿಕಾರಿಗಳನ್ನು ನೇಮಿಸಿಕೊಳ್ಳುವಂತೆ ಪ್ರಸ್ತಾಪಿಸಿತ್ತು. ಹೊರಗಿನ ಅಧಿಕಾರಿಗಳಿಗೆ ಸ್ಥಳೀಯ ಸಂಸ್ಕೃತಿ ಮತ್ತು ಪರಿಸ್ಥಿತಿಯ ಅರಿವಿರುವುದಿಲ್ಲ ಎಂದು ರಾಜ್ಯದ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಡಿ.ಎಸ್. ನಾಯ್ಡು, ಮತದಾರರ ನೋಂದಣಿ ಅಧಿಕಾರಿಗಳ ನೇಮಕಾತಿ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದರು. ಇವರು ಅರೆ-ನ್ಯಾಯಾಂಗ (Quasi-judicial)ಕಾರ್ಯಗಳನ್ನು ನಿರ್ವಹಿಸಬೇಕಿರುವುದರಿಂದ ಅವರಿಗೆ ತೀರ್ಪು ನೀಡುವ ಅನುಭವದ ಅಗತ್ಯವಿದೆ. ಆದರೆ, ರಾಜ್ಯ ಸರ್ಕಾರವು ವೇತನ ಶ್ರೇಣಿಯ ಆಧಾರದ ಮೇಲೆ ಎಂಜಿನಿಯರ್‌ಗಳಂತಹ ತಾಂತ್ರಿಕ ಸಿಬ್ಬಂದಿಯನ್ನು ನೇಮಿಸಿದೆ. ಆಯೋಗ ಕೋರಿದ 300 ಅಧಿಕಾರಿಗಳ ಪೈಕಿ ಕೇವಲ 64 ಮಂದಿಗೆ ಮಾತ್ರ ಸೂಕ್ತ ಅನುಭವವಿತ್ತು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ|ಮೋದಿ ರಾಜಿ ರಾಜಕಾರಣದಿಂದ ಭಾರತದ ಸ್ವಾಭಿಮಾನ- ಸಾರ್ವಭೌಮತೆಗೆ ಧಕ್ಕೆ

ಹಿರಿಯ ವಕೀಲ ಶ್ಯಾಮ್ ದಿವಾನ್ ವಾದಿಸಿ, ಕರಡು ಪಟ್ಟಿಯಲ್ಲಿರುವ 7.08 ಕೋಟಿ ಮತದಾರರ ಪೈಕಿ 1.36 ಕೋಟಿ ಮತದಾರರನ್ನು “ತಾರ್ಕಿಕ ವ್ಯತ್ಯಾಸ” (Logical Discrepancy) ಅಡಿಯಲ್ಲಿ ಇರಿಸಲಾಗಿದೆ ಎಂದು ತಿಳಿಸಿದರು. ಇದರಲ್ಲಿ ಅರ್ಧದಷ್ಟು ಪ್ರಕರಣಗಳು ‘ದತ್ತ’ (Dutta/Datta) ಮತ್ತು ‘ರಾಯ್’ (Roy/Ray) ನಂತಹ ಹೆಸರಿನ ಕಾಗುಣಿತದಲ್ಲಿನ ಸಣ್ಣಪುಟ್ಟ ವ್ಯತ್ಯಾಸಗಳಾಗಿವೆ. ಫೆಬ್ರವರಿ 14 ರಂದು ಅಂತಿಮ ಪಟ್ಟಿ ಪ್ರಕಟವಾಗಲಿದ್ದು, ಈ ಹಂತದಲ್ಲಿ ಮೈಕ್ರೋ ಅಬ್ಸರ್ವರ್‌ಗಳ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರುಗಳನ್ನು ಅಳಿಸಿಹಾಕುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ವಾದಗಳನ್ನು ಆಲಿಸಿದ ಸಿಜೆಐ, ಮೈಕ್ರೋ ಅಬ್ಸರ್ವರ್‌ಗಳು ಕೇವಲ ಸಹಾಯಕ್ಕೆ ಮಾತ್ರ ಇರುತ್ತಾರೆ, ಅಂತಿಮ ನಿರ್ಧಾರ ಅಧಿಕಾರಿಗಳದ್ದೇ ಆಗಿರುತ್ತದೆ ಎಂದು ಸ್ಪಷ್ಟಪಡಿಸಿದರು. “ಪರಿಶೀಲನೆಯ ನಂತರ ಎಷ್ಟು ನೋಟಿಸ್‌ಗಳನ್ನು ಕೈಬಿಡಲಾಗುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಪರಿಶೀಲನೆಯಲ್ಲಿ ಶೇ 80 ರಷ್ಟು ಪ್ರಕರಣಗಳು ಬಗೆಹರಿದರೆ, ನಿಮ್ಮ ವಾದವು ತಪ್ಪಾಗುತ್ತದೆ,” ಎಂದು ನ್ಯಾಯಮೂರ್ತಿಗಳು ಅರ್ಜಿದಾರರಿಗೆ ತಿಳಿಸಿದರು.

​ಅಧಿಕಾರಿಗಳ ನಿಯೋಜನೆಯಲ್ಲಿ ಸರಿಯಾದ ವಿವರ ಮತ್ತು ನಾಮಕರಣ (Nomenclature) ಅಗತ್ಯವಿದೆ ಎಂದು ಸೂಚಿಸಿದ ಕೋರ್ಟ್, ಬಿಹಾರ ಪ್ರಕರಣದಲ್ಲೂ ಇದೇ ರೀತಿಯ ನಿರ್ದೇಶನ ನೀಡಲಾಗಿತ್ತು ಎಂದು ಸ್ಮರಿಸಿತು. ಅಂತಿಮವಾಗಿ ಪರಿಶೀಲನಾ ಕಾರ್ಯವನ್ನು ಪೂರ್ಣಗೊಳಿಸಲು ಒಂದು ವಾರದ ಹೆಚ್ಚುವರಿ ಸಮಯ ನೀಡಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...