ವಿವಾಹ ವಿಚ್ಛೇದನಕ್ಕೆ 6 ತಿಂಗಳು ಕಾಯಬೇಕಾಗಿಲ್ಲ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Date:

  • ವಿವಾಹ ವಿಚ್ಛೇದನಕ್ಕೆ 6 ತಿಂಗಳು ಕಾಯಬೇಕಾಗಿಲ್ಲ
  • ಪರಮಾಧಿಕಾರ ಬಳಸಿ ವಿಚ್ಚೇದನ ಊರ್ಜಿತ

ಹಿಂದೂ ವಿವಾಹ ಕಾಯ್ದೆಯಡಿಯ ವಿವಾಹ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದೆ.

ʻದಂಪತಿಗೆ ಪರಸ್ಪರ ಒಪ್ಪಿಗೆ ಇದ್ದಲ್ಲಿ 6 ತಿಂಗಳು  ಕಾಯದೇ ವಿಚ್ಛೇದನ ಪಡೆಯಬಹುದು. ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆ ಇಲ್ಲದೆಯೇ ಸುಪ್ರೀಂ ಕೋರ್ಟ್​ ತನ್ನ ಪರಮಾಧಿಕಾರ ಬಳಸಿ ವಿಚ್ಛೇದನವನ್ನು ಊರ್ಜಿತಗೊಳಿಸಬಹುದುʼ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಎಎಸ್ ಓಕಾ, ವಿಕ್ರಮ್ ನಾಥ್ ಹಾಗೂ ಜೆಕೆ ಮಹೇಶ್ವರಿ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠ ಪೀಠ ಈ ಮಹತ್ವದ ತೀರ್ಪನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಮಕ್ಕಾ ಮಸೀದಿಯಲ್ಲಿ ಜೈ ಶ್ರೀರಾಮ್‌ ಘೋಷಣೆ; ಕನ್ನಡಿಗ ಸೇರಿದಂತೆ ಮೂವರ ಬಂಧನ

ʻದಂಪತಿ ನಡುವಿನ ವೈವಾಹಿಕ ಜೀವನವನ್ನು ಮತ್ತೆ ಸರಿಪಡಿಸಲಾಗದ ಸನ್ನಿವೇಶವಿದ್ದರೆʼ ಸುಪ್ರೀಂ ಕೋರ್ಟ್​ ಆ ಜೋಡಿಗೆ ವಿಚ್ಛೇದನ ನೀಡಬಹುದು. ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ನೀಡಲಾದ ವಿಶೇಷಾಧಿಕಾರದ ಮೂಲಕ ವಿವಾಹವನ್ನು ಅನೂರ್ಜಿತಗೊಳಿಸುವ ಅವಕಾಶ ಸುಪ್ರೀಂ ಕೋರ್ಟ್‌ಗೆ ಇದೆʼ ಎಂದು ತೀರ್ಪಿನಲ್ಲಿ ಹೇಳಿದೆ.

ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನ ಕೋರಿದ ದಂಪತಿಗೆ 6 ತಿಂಗಳ ಒಳಗೇ ಕೆಲವು ಷರತ್ತುಗಳಿಗೆ ಒಳಪಟ್ಟು ವಿಚ್ಛೇದನ ನೀಡಬಹುದು ಎಂದು ಐವರು ಸದಸ್ಯರ ಸಾಂವಿಧಾನಿಕ ಪೀಠ ಹೇಳಿದೆ.

ವಿಚ್ಛೇದನದ ಬಳಿಕ ಜೀವನ ನಿರ್ವಹಣೆ, ಜೀವನಾಂಶ ಮತ್ತು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ಹೇಗೆ ಸಮತೋಲನ ಸಾಧಿಸಬೇಕು ಎಂಬುದನ್ನೂ ಪೀಠವು ಆದೇಶದಲ್ಲಿ ವಿವರಿಸಿದೆ.

2014ರಲ್ಲಿ ಶಿಲ್ಪಾ ಸೈಲೇಶ್ ಸಲ್ಲಿಸಿದ್ದ ಪ್ರಮುಖ ಅರ್ಜಿ ಸೇರಿ ಐದು ಅರ್ಜಿಗಳ ಹೆಚ್ಚಿನ ವಿಚಾರಣೆಗಾಗಿ ಪ್ರಕರಣವನ್ನು 2016 ರ ಜೂನ್ 29 ರಂದು ಐವರು ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಲಾಗಿತ್ತು. 2022ರ ಸೆಪ್ಟೆಂಬರ್ 29ರಂದು ಸುಪ್ರೀಂನ ಸಾಂವಿಧಾನಿಕ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಸೋಮವಾರ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಕಡ್ಡಾಯವಾಗಿ 6 ತಿಂಗಳು ಕಾಯುವ ಅವಶ್ಯಕತೆಯಿಲ್ಲ ಎಂದು ಹೇಳಿದೆ.

ವಿಚ್ಛೇದನ ಪ್ರಕ್ರಿಯೆ ಹೇಗಿದೆ?: ಹಿಂದೂ ವಿವಾಹ ಕಾಯಿದೆ 1955 ರ ಸೆಕ್ಷನ್ 13 ಬಿ ಪ್ರಕಾರ ದಂಪತಿ ವಿಚ್ಛೇದನ ಪಡೆಯಲು ಕೌಟುಂಬಿಕ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ. ವಿಚ್ಛೇದನದ ಪ್ರಕರಣಗಳಲ್ಲಿ ದಂಪತಿ ಪರಸ್ಪರ ಒಪ್ಪಿಗೆ ಸೂಚಿಸಿ, ಅರ್ಜಿ ಸಲ್ಲಿಸಿದ ಬಳಿಕ 6 ತಿಂಗಳು ಕಾಯುವ ಅವಧಿ ಕಾನೂನಿನಲ್ಲಿ ಕಡ್ಡಾಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...