ಉತ್ತರಾಖಂಡದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಕಾಡ್ಗಿಚ್ಚಿನ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.
ಕಳೆದ ವರ್ಷದ ನವೆಂಬರ್ನಿಂದ ಉತ್ತರಾಖಂಡ ರಾಜ್ಯದಲ್ಲಿ 1 ಸಾವಿರಕ್ಕೂ ಹೆಚ್ಚು ಅಗ್ನಿ ಅನಾಹುತ ಸಂಭವಿಸಿ 1100 ಹೆಕ್ಟೇರ್ ಅರಣ್ಯ ನಾಶದಿಂದ ಕೋಟ್ಯಂತರ ರೂ. ನಷ್ಟವಾಗಿರುವ ಬಗ್ಗೆ ದಿಗ್ಬ್ರಮೆ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಅನುದಾನ ಕೊರತೆ, ಕಾವಲುಗಾರರನ್ನು ಚುನಾವಣಾ ಕರ್ತವ್ಯಕ್ಕೆ ಬಳಕೆ ಮಾಡಿಕೊಂಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿತು.
ಅಗ್ನಿ ಅನಾಹುತಗಳನ್ನು ತಡೆಯಲು ರಾಜ್ಯ ಸರ್ಕಾರಕ್ಕೆ ಅರಣ್ಯ ಇಲಾಖೆ 10 ಕೋಟಿ ರೂ.ಗೆ ಬೇಡಿಕೆಯಿಟ್ಟರೂ 3.15 ಕೋಟಿ ರೂ. ಮಾತ್ರ ಮಂಜೂರು ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿತು. ಹಾಗೆಯೇ ಚುನಾವಣಾ ಜವಾಬ್ದಾರಿಗಳನ್ನು ಅರಣ್ಯ ಸಿಬ್ಬಂದಿಗಳಿಗೆ ನೀಡಿದ್ದಕ್ಕೂ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?
ಅಗ್ನಿ ಅನಾಹುತ ತಡೆಗೆ ಏಕೆ ಸಾಕಷ್ಟು ಅನುದಾನ ನೀಡಿಲ್ಲ? ಅರಣ್ಯ ಸಿಬ್ಬಂದಿಗಳನ್ನು ಏಕೆ ಚುನಾವಣಾ ಕೆಲಸಗಳಿಗೆ ಬಳಸಿಕೊಂಡಿದ್ದೀರಿ? ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಎಸ್ವಿಎನ್ ಭಟ್ಟಿ ಹಾಗೂ ಸಂದೀಪ್ ಮೆಹ್ತಾ ಅವರ ಪೀಠವು ಸರ್ಕಾರಗಳನ್ನು ಪ್ರಶ್ನಿಸಿತು.
ಉತ್ತರಾಖಂಡ ರಾಜ್ಯದ ಐದು ಲೋಕಸಭಾ ಕ್ಷೇತ್ರಗಳಿಗೆ ಏ.19ರಂದು ಚುನಾವಣೆ ನಡೆದಿದೆ.
ಕಳೆದು ಕೆಲವು ತಿಂಗಳ ಹಿಂದೆ ಉತ್ತರಾಖಂಡ ಅರಣ್ಯದಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಐವರು ಮೃತಪಟ್ಟು, ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಕಾಡು ಬೆಂಕಿಗೆ ಆಹುತಿಯಾಗಿತ್ತು.





