‘ಹೈಕೋರ್ಟಿನ ಕದ ಬಡಿಯಿರಿ’- ಸಂಭಲ್ ಮಸೀದಿ ಮಂಡಳಿಗೆ ಸುಪ್ರೀಮ್ ನಿರ್ದೇಶನ

Date:

ಅಲಹಾಬಾದ್ ಹೈಕೋರ್ಟ್ ಮೊರೆ ಹೋಗುವಂತೆ ಉತ್ತರಪ್ರದೇಶದ ಸಂಭಲ್ ಶಾಹಿ ಜಾಮಾ ಮಸೀದಿ ನಿರ್ವಹಣೆ ಮಂಡಳಿಗೆ ಶುಕ್ರವಾರ ಸೂಚನೆ ನೀಡಿದೆ ಸುಪ್ರೀಮ್ ಕೋರ್ಟು.

ಹೈಕೋರ್ಟು ಈ ಸಂಬಂಧ ವಿಚಾರಣೆ ನಡೆಸಿ ಸೂಕ್ತ ಆದೇಶ ನೀಡುವ ತನಕ ತನ್ನ ವಿಚಾರಣೆಯನ್ನು ತಡೆಹಿಡಿಯುವಂತೆ ಸುಪ್ರೀಮ್ ಕೋರ್ಟು ಸಿವಿಲ್ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಈ ನಡುವೆ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುವಂತೆ ಜಿಲ್ಲಾ ಆಡಳಿತಕ್ಕೆ ತಾಕೀತು ಮಾಡಿದೆ.

ಈ ನಡುವೆ ಮಸೀದಿಯ ಸರ್ವೆ ವರದಿ ಸಲ್ಲಿಕೆಯಾದರೆ ಅದನ್ನು ತೆರೆಯದೆ ಮೊಹರು ಮಾಡಿದ ಲಕೋಟೆಯಲ್ಲಿ ಮುಚ್ಚಿ ಇರಿಸುವಂತೆಯೂ ಆದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಕೆಳ ಹಂತದ ನ್ಯಾಯಾಲಯದ ಆದೇಶದ ಮೇರೆಗೆ ಪುರಾತತ್ವ ಇಲಾಖೆಯು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹಠಾತ್ತನೆ ಶಾಹಿ ಮಸೀದಿಯ ಸರ್ವೆಗೆ ಮುಂದಾಗಿತ್ತು. ಪರಿಣಾಮವಾಗಿ ಜರುಗಿದ ಕಲ್ಲುತೂರಾಟ ಹಿಂಸಾಚಾರದಲ್ಲಿ ಪೊಲೀಸರ ಗುಂಡಿಗೆ ನಾಲ್ವರು ಬಲಿಯಾಗಿದ್ದರು.

ಹಿಂದೂ ದೇವಾಲಯವನ್ನು ಕೆಡವಿ ಆ ಜಾಗದಲ್ಲಿ ಶಾಹಿ ಮಸೀದಿಯನ್ನು ಕಟ್ಟಲಾಗಿದ್ದು ಸರ್ವೆಗೆ ಆದೇಶ ನೀಡಬೇಕೆಂಬ ಅರ್ಜಿಯನ್ನು ಅಲಹಾಬಾದ್ ಸಿವಿಲ್ ನ್ಯಾಯಾಧೀಶರು ಪುರಸ್ಕರಿಸಿದ್ದರು. ಸರ್ವೆ ಆದೇಶವನ್ನು ಪ್ರಶ್ನಿಸಿ ಶಾಹಿ ಮಸೀದಿ ನಿರ್ವಹಣೆ ಮಂಡಳಿ ಸುಪ್ರೀಮ್ ಕೋರ್ಟ್ ಕದ ಬಡಿದಿತ್ತು.

ಮಂಡಳಿಯ ಅಹವಾಲು ಶುಕ್ರವಾರ ಮುಖ್ಯನ್ಯಾಯಮೂರ್ತಿ ಸಂಜೀವ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯಕುಮಾರ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಜನತಾ ಪಕ್ಷಕ್ಕೆ ನೀತಿಯೂ ಇಲ್ಲ, ರೀತಿಯೂ ಇಲ್ಲ

‘ಶ್ರೀ ಹರಿಹರ ಮಂದಿರ’ವನ್ನು ಕೆಡವಿ ಅದೇ ಜಾಗದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದ್ದು ಸರ್ವೆ ಮಾಡಿಸುವಂತೆ ಎಂಟು ಮಂದಿ ಅರ್ಜಿದಾರರು ಇದೇ ತಿಂಗಳ 19ರಂದು ಅಲಹಾಬಾದ್ ಸಿವಿಲ್ ನ್ಯಾಯಾಲಯವನ್ನು ಕೋರಿದ್ದರು. ನ್ಯಾಯಾಲಯ ತಕ್ಷಣ ಸರ್ವೆ ಆದೇಶವನ್ನು ನೀಡಿತ್ತು. ಶಾಹಿ ಮಸೀದಿ ನಿರ್ವಹಣೆ ಮಂಡಳಿಗೆ ನೋಟಿಸನ್ನೂ ನೀಡಿ ಪ್ರತಿಕ್ರಿಯೆಯನ್ನೂ ಅಹ್ವಾನಿಸಿರಲಿಲ್ಲ.

ಏಕಪಕ್ಷೀಯವಾಗಿ ನೀಡಲಾದ ಈ ಆದೇಶವನ್ನು ಅದೇ ದಿನ ಮಧ್ಯಾಹ್ನ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿತ್ತು. ಸಂಜೆ ಆರರಿಂದ ಸರ್ವೆ ಆರಂಭಿಸಿ ರಾತ್ರಿ 8.30ರ ತನಕ ನಡೆಸಿತು. ಇದೇ ತಿಂಗಳ 24ರ ನಸುಕಿನಲ್ಲಿ ಎರಡನೆಯ ಸರ್ವೆಗೆಂದು ಬಂದು ಪ್ರಾರ್ಥನೆಗೆಂದು ಬಂದಿದ್ದವರನ್ನು ಹೊರಕ್ಕೆ ಕಳಿಸಲಾಯಿತು ಎಂದು ಶಾಹಿ ಮಸೀದಿ ಮಂಡಳಿ ಸುಪ್ರೀಮ್ ಕೋರ್ಟಿಗೆ ಸಲ್ಲಿಸಿದ್ದ ಅಹವಾಲಿನಲ್ಲಿ ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...