ಬಾಲಕನ ಗಾಯಗೊಂಡ ಕಾಲಿನ ಬದಲು ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ; ವೈದ್ಯರ ವಿರುದ್ಧ ತನಿಖೆ

Date:

ಸರ್ಕಾರಿ ಆಸ್ಪತ್ರೆಯ ವೈದ್ಯರು ಒಂಬತ್ತು ವರ್ಷದ ಬಾಲಕನ ಗಾಯಗೊಂಡಿದ್ದ ಕಾಲಿಗೆ ಬದಲಾಗಿ ಆತನ ಖಾಸಗಿ ಅಂಗಕ್ಕೆ ತಪ್ಪಾಗಿ ಸುನ್ನತಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂಬ ಆರೋಪ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರದಲ್ಲಿ ಕೇಳಿಬಂದಿದೆ. ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಪೋಷಕರ ದೂರಿನ ಬಳಿಕ, ಘಟನೆ ಬಗ್ಗೆ ತನಿಖೆ ನಡೆಸುವದಾಗಿ ಆರೋಗ್ಯಾಧಿಕಾರಿ ಭರವಸೆ ನೀಡಿದ್ದಾರೆ. ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ.

ಅಪ್ರಾಪ್ತ ಬಾಲಕನ ಪೋಷಕರು ದಾಖಲಿಸಿರುವ ದೂರಿನಲ್ಲಿ, “ಕಳೆದ ತಿಂಗಳು ತನ್ನ ಸ್ನೇಹಿತರೊಂದಿಗೆ ಬಾಲಕ ಆಟವಾಡುತ್ತಿದ್ಧಾಗ, ಆತನ ಕಾಲಿಗೆ ಗಾಯವಾಗಿತ್ತು. ಜು.15ರಂದು ಆತನನ್ನು ಶಹಾಪುರದ ಉಪಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದೆವು. ಆದರೆ, ಗಾಯಗೊಂಡ ಕಾಲಿಗೆ ಬದಲಾಗಿ ಆತನ ಖಾಸಗಿ ಅಂಗಕ್ಕೆ ವೈದ್ಯರು ಸುನ್ನತಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಂತರ, ವೈದ್ಯರು ತಮ್ಮ ಮೂರ್ಖತನವನ್ನು ಅರಿತುಕೊಂಡು, ಶೀಘ್ರದಲ್ಲೇ ಬಾಲಕನ ಗಾಯಗೊಂಡ ಕಾಲಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ,” ಎಂದು ಹೇಳಿದ್ದಾರೆ.

ಪೋಷಕರು ಶಹಾಪುರ ಪೊಲೀಸರಿಗೂ ದೂರು ನೀಡಿದ್ದಾರೆ. ಆರೋಪ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲವಾದರೂ, ದೂರಿನ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪದ ಬಗ್ಗೆ ಆರೋಗ್ಯ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ ಎಂದು ಜಿಲ್ಲಾ ಸಿವಿಲ್ ಸರ್ಜನ್ ಡಾ.ಕೈಲಾಸ್ ಪವಾರ್ ಹೇಳಿದ್ದಾರೆ.

ಆಸ್ಪತ್ರೆಯ ವೈದ್ಯಾಧಿಕಾರಿ ಗಜೇಂದ್ರ ಪವಾರ್ ಸುದ್ದಿಗಾರರೊಂದಿಗೆ ಮಾತನಾಡಿ, “ಬಾಲಕನಿಗೆ ಕಾಲಿನ ಗಾಯದ ಜೊತೆಗೆ ಫಿಮೊಸಿಸ್ (ಬಿಗಿಯಾದ ಮುಂದೊಗಲು) ಸಮಸ್ಯೆಯೂ ಇತ್ತು. ನಾವು ಎರಡು ಶಸ್ತ್ರಚಿಕಿತ್ಸೆಗಳನ್ನು ಮಾಡಬೇಕಿತ್ತು. ಎರಡನೇ ಆಪರೇಷನ್ ಬಗ್ಗೆ ಪೋಷಕರಿಗೆ ತಿಳಿಸುವುದನ್ನು ವೈದ್ಯರು ಮರೆತಿರಬಹುದು ಅಥವಾ ಅವರು ರೋಗಿಯ ಇತರ ಸಂಬಂಧಿಕರಿಗೆ ಹೇಳಿರಬಹುದು” ಎಂದಿದ್ದಾರೆ.

ವೈದ್ಯರು ಮಾಡಿದ್ದು ಸರಿ ಇದೆ. ಅದರಲ್ಲಿ ತಪ್ಪೇನೂ ಇಲ್ಲ ಎಂದು ಅವರು ಹೇಳಿದ್ದಾರೆ. ಆದರೆ, ಅವರ ವಿವರಣೆಯನ್ನು ಪೋಷಕರು ತಳ್ಳಿಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...