ನಟ ಸುಶಾಂತ್ ಸಾವು ಪ್ರಕರಣ: ರಿಯಾ ಚಕ್ರವರ್ತಿ ವಿರುದ್ಧ ಜಾರಿಯಲ್ಲಿದ್ದ ಎಲ್‌ಒಸಿ ರದ್ದು; ಬಾಂಬೆ ಹೈಕೋರ್ಟ್ ಆದೇಶ

Date:

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ತನಿಖೆಗೆ ಸಂಬಂಧಿಸಿದಂತೆ ಸಿಬಿಐನಿಂದ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಹಾಗೂ ತಂದೆ ವಿರುದ್ಧ ಹೊರಡಿಸಲಾದ ಲುಕ್ ಔಟ್ ಸುತ್ತೋಲೆಗಳನ್ನು (ಎಲ್‌ಒಸಿ) ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ತಮ್ಮ ವಿರುದ್ಧ 2020ರಲ್ಲಿ ಸಿಬಿಐ ಹೊರಡಿಸಿದ್ದ ಎಲ್‌ಒಸಿಯನ್ನು ಪ್ರಶ್ನಿಸಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಮತ್ತು ಅವರ ತಂದೆ ಇಂದ್ರಜಿತ್ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ಮಂಜುಷಾ ದೇಶಪಾಂಡೆ ಅವರ ವಿಭಾಗೀಯ ಪೀಠ ನಡೆಸಿದ್ದು, ಎಲ್‌ಒಸಿಯನ್ನು ರದ್ದುಗೊಳಿಸಿದೆ.

ಸಿಬಿಐ ಪರ ವಕೀಲ ಶ್ರೀರಾಮ್ ಶಿರ್ಸತ್ ಅವರು, “ಎಲ್‌ಒಸಿ ರದ್ದತಿ ಆದೇಶವನ್ನು ನಾಲ್ಕು ವಾರಗಳವರೆಗೆ ತಡೆಹಿಡಿಯಬೇಕು. ಇದರಿಂದ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಇರುತ್ತದೆ” ಎಂದು ಪೀಠದ ಎದುರು ಮನವಿ ಮಾಡಿದರು. ಆದರೆ, ಪೀಠವು ತನ್ನ ಆದೇಶವನ್ನು ತಡೆಹಿಡಿಯಲು ನಿರಾಕರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಶಾಂತ್ ಸಿಂಗ್ ರಜಪೂತ್ ಅವರು 2020ರ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು. ಇದೇ ವೇಳೆ, ಸುಶಾಂತ್ ಅವರ ತಂದೆ 2020ರ ಜುಲೈನಲ್ಲಿ ಬಿಹಾರ ಪೊಲೀಸರಿಗೆ ದೂರು ನೀಡಿದ್ದರು. ತಮ್ಮ ದೂರಿನಲ್ಲಿ, ಸುಶಾಂತ್ ಸ್ನೇಹಿತೆ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬಸ್ಥರು ಸುಶಾಂಗ್‌ಗೆ ‘ಆತ್ಮಹತ್ಯಗೆ ಪ್ರಚೋದನೆ ನೀಡಿದ್ದಾರೆ’ ಎಂದು ಆರೋಪಿಸಿದ್ದರು.

ಬಳಿಕ, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು. ತನಿಖೆ ಆರಂಭಿಸಿದ ಸಿಬಿಐ, 2020ರ ಆಗಸ್ಟ್‌ನಲ್ಲಿ ರಿಯಾ ಚಕ್ರವರ್ತಿ, ಅವರ ಸಹೋದರ ಮತ್ತು ಅವರ ತಂದೆಯ ವಿರುದ್ಧ ಎಲ್‌ಒಸಿ ಜಾರಿಗೊಳಿಸಿತ್ತು.

ಅಲ್ಲದೆ, 2020ರಲ್ಲಿಯೇ, ರಜಪೂತ್‌ಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ರಿಯಾ ಮತ್ತು ಶೋವಿಕ್ ಇಬ್ಬರನ್ನೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧಿಸಿತ್ತು. ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು.

2023ರ ಸೆಪ್ಟೆಂಬರ್‌ನಲ್ಲಿ, ಶೋವಿಕ್‌ ವಿದೇಶ ಪ್ರಯಾಣಕ್ಕೆ ತೆರಳಲು ಅನುವು ಮಾಡಿಕೊಟ್ಟಿದ್ದ ಹೈಕೋರ್ಟ್, ಎಲ್‌ಒಸಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು. ಇದೀಗ, ಎಲ್‌ಒಸಿಯನ್ನು ರದ್ದುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...