ವಿವಾಹೇತರ ಸಂಬಂಧ ಶಂಕೆ: ಪತ್ನಿ, ಇಬ್ಬರು ಹೆಣ್ಣುಮಕ್ಕಳ ಮೇಲೆ ಆ್ಯಸಿಡ್ ಎರಚಿದ ದುರುಳ

Date:

ವಿವಾಹೇತರ ಸಂಬಂಧವಿದೆ ಎಂದು ಶಂಕಿ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣುಮಕ್ಕಳ ಮೇಲೆ ಆ್ಯಸಿಡ್ ಎರಚಿದ ಘಟನೆ ಉತ್ತರ ಪ್ರದೇಶದ ಟಿಕ್ರಿ ಗ್ರಾಮದಲ್ಲಿ ನಡೆದಿದೆ.

ಆ್ಯಸಿಡ್ ದಾಳಿಯಿಂದ 39 ವರ್ಷದ ರಾಮಗುಣಿ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳಾದ 16 ವರ್ಷದ ನೇಹಾ ಮತ್ತು 23 ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ವಿವಾಹೇತರ ಸಂಬಂಧಕ್ಕೆ 35 ವರ್ಷದ ಮಹಿಳೆ ಬಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ನಗರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ದೇವೇಂದ್ರ ಕುಮಾರ್, “ಸಂತ್ರಸ್ತ ಮಹಿಳೆ ತನ್ನ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನೊಂದಿಗೆ ಟಿಕ್ರಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆಕೆಯ ಪತಿ ರಾಮ್ ಗೋಪಾಲ್ ಶಹಾಬಾದ್ ಹರ್ದೋಯ್‌ನಲ್ಲಿ ವಾಸಿಸುತ್ತಿದ್ದನು. ಶುಕ್ರವಾರ ರಾತ್ರಿ, ರಾಮಗುಣಿ ಮತ್ತು ಆಕೆಯ ಹೆಣ್ಣುಮಕ್ಕಳು ನಿದ್ರಿಸುತ್ತಿದ್ದಾಗ ಆಕೆಯ ಪತಿ ಗೋಡೆ ಹಾರಿ ಮನೆಗೆ ನುಗ್ಗಿ ಅವರ ಮೇಲೆ ಆ್ಯಸಿಡ್ ಎರಚಿದ್ದಾನೆ” ಎಂದು ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ, ರಾಮಗುಣಿ ಅವರ ಮಗ ಆಶು ತನ್ನ ಸ್ನೇಹಿತರೊಂದಿಗೆ ಇದ್ದ. ಬಳಿಕ ತನ್ನ ತಂದೆಯ ವಿರುದ್ಧ ದೂರು ದಾಖಲಿಸಿದ್ದಾನೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಒಡಿಶಾ | ಅಲೆಮಾರಿ ಕುಟುಂಬದ ಐವರ ಬರ್ಬರ ಹತ್ಯೆ; ಐವರ ಅಪಹರಣ

ಗಾಯಾಳುಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ತನ್ನ ತಂದೆ ಮದ್ಯವ್ಯಸನಿಯಾಗಿದ್ದು, ವ್ಯಸನದಿಂದಾಗಿ ಶಹಾಬಾದ್ ಪ್ರದೇಶದಲ್ಲಿರುವ ತನ್ನ ಕೃಷಿ ಭೂಮಿಯನ್ನು ಮಾರಿದ್ದಾಗಿ ಆಶು ಪೊಲೀಸರಿಗೆ ತಿಳಿಸಿದ್ದಾನೆ.

ಇದರ ನಂತರ, ರಾಮಗುಣಿ ತನ್ನ ಮಕ್ಕಳೊಂದಿಗೆ ಟಿಕ್ರಿ ಗ್ರಾಮಕ್ಕೆ ತೆರಳಿದರು. ಆದರೂ ಆಕೆಗೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನಿಸಿದ ಪತಿ ಆಗಾಗ್ಗೆ ಬಂದು ನೋಡುತ್ತಿದ್ದ ಎನ್ನಲಾಗಿದೆ. ಸದ್ಯ ಗೋಪಾಲ್ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆಹಚ್ಚಲು ಹುಡುಕಾಟ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...