ಗೈರು ಹಾಜರಾಗಿದ್ದರೂ ಅಮಾನತು: ಡಿಎಂಕೆ ಸಂಸದ ಪಾರ್ಥಿಬನ್ ವಿರುದ್ಧದ ಕ್ರಮ ಹಿಂಪಡೆದ ಸರ್ಕಾರ

Date:

ಡಿಎಂಕೆ ಸಂಸದ ಎಸ್ ಆರ್ ಪಾರ್ಥಿಬನ್ ಅವರು ಸದನದಲ್ಲಿ ಗೈರುಹಾಜರಾಗಿದ್ದರೂ ಅಶಿಸ್ತಿನ ಆಧಾರದ ಮೇಲೆ ಅಮಾನತುಗೊಳಿಸಿರುವ ಘಟನೆ ಲೋಕಸಭೆಯಲ್ಲಿ ಇಂದು ನಡೆದಿದೆ.

ಇದರಿಂದ ಎಚ್ಚೆತ್ತ ಸರ್ಕಾರ ಅಮಾನತು ಆದೇಶವನ್ನು ಹಿಂಪಡೆದಿದೆ. ‘ತಪ್ಪಾಗಿ’  ಅಮಾನತು ಮಾಡಬೇಕಾದವರ ಜೊತೆಗೆ ಡಿಎಂಕೆ ಸಂಸದ ಪಾರ್ಥಿಬನ್ ಅವರ ಹೆಸರನ್ನು ಸೇರಿಸಿದ ಕಾರಣ ಲೋಕಸಭೆಯಿಂದ ಅಮಾನತುಗೊಳಿಸಿರುವುದನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ, ಸದಸ್ಯರನ್ನು ಗುರುತಿಸುವಲ್ಲಿ ಸಿಬ್ಬಂದಿಯ ಕಡೆಯಿಂದ ತಪ್ಪಾಗಿರುವ ಕಾರಣ ಪಾರ್ಥಿಬನ್ ಹೆಸರನ್ನು ಅಮಾನತುಗೊಳಿಸಿದ ಲೋಕಸಭಾ ಸದಸ್ಯರ ಪಟ್ಟಿಯಿಂದ ಹಿಂಪಡೆಯಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಪ್ಪಾದ ಗುರುತಿನ ಪ್ರಕರಣವಾಗಿರುವುದರಿಂದ ಸದಸ್ಯರ ಹೆಸರನ್ನು ಕೈಬಿಡುವಂತೆ ಸ್ಪೀಕರ್‌ ಅವರಿಗೆ ಮನವಿ ಮಾಡಿದ್ದೇನೆ ಎಂದು ಜೋಶಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ: 4 ಆರೋಪಿಗಳು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಈ ಸಲಹೆಗೆ ಸ್ಪೀಕರ್ ಒಪ್ಪಿಗೆ ಸೂಚಿಸಿದ್ದಾರೆ. ಸದನದ ಕಲಾಪ ಹೊಸ ಸಂಸತ್ ಭವನಕ್ಕೆ ಸ್ಥಳಾಂತರಗೊಂಡಾಗ, ಸದನದಲ್ಲಿ ಭಿತ್ತಿಪತ್ರಗಳನ್ನು ತೋರಿಸದಿರುವ ಹೊಸ ಸಂಕಲ್ಪದೊಂದಿಗೆ ಸದಸ್ಯರು ಕೆಲಸ ಮಾಡಬೇಕು ಎಂದು ಸ್ಪೀಕರ್ ಅವರು ವ್ಯವಹಾರ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಪ್ರಸ್ತಾಪಿಸಿದ್ದರು ಎಂದು ಜೋಶಿ ಹೇಳಿದರು.

“ಈ ಪ್ರಸ್ತಾವನೆಗೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ. ಯಾರೂ ಅದನ್ನು ವಿರೋಧಿಸಲಿಲ್ಲ” ಎಂದು ಪ್ರಹ್ಲಾದ್‌ ಜೋಷಿ ಹೇಳಿದರು.

13 ಸಂಸದರು ಬಿಎಸಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯವನ್ನು ಉಲ್ಲಂಘಿಸಿ ಸದನಕ್ಕೆ ಫಲಕಗಳನ್ನು ತಂದರು ಮತ್ತು ಆದ್ದರಿಂದ ಅವರನ್ನು ಅಮಾನತುಗೊಳಿಸಲಾಯಿತು ಎಂದು ಸಚಿವರು ಹೇಳಿದರು.

ಸದ್ಯ ಚಳಿಗಾಲದ ಅಧಿವೇಶನ ಅಥವಾ ಸಂಸತ್ತಿನ ಉಳಿದ ಅವಧಿಗೆ ಅಮಾನತುಗೊಂಡಿರುವ ಒಟ್ಟು ಸಂಸದರ ಸಂಖ್ಯೆ ಲೋಕಸಭೆಯಿಂದ 13 ಮತ್ತು ರಾಜ್ಯಸಭೆಯಿಂದ ಒಬ್ಬರು ಸೇರಿ 14ಕ್ಕೆ ಏರಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...