ಸ್ವಾತಿ ಮಲಿವಾಲ್ ಪ್ರಕರಣ | ಎಫ್‌ಐಆರ್ ಬಳಿಕ ಹೊರಗಡೆ ಬಂದ ಘಟನೆಯ ಹೊಸ ವೀಡಿಯೋ!

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಕನಿಷ್ಠ ಏಳರಿಂದ ಎಂಟು ಬಾರಿ ನನ್ನ ಕೆನ್ನೆಗೆ ಹೊಡೆದಿದ್ದಾನೆ ಎಂದು ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

ಹಲ್ಲೆ ಸಂಬಂಧ ಸ್ವಾತಿ ಮಲಿವಾಲ್ ದೂರು ನೀಡಿದ್ದು ಎಫ್‍ಐಆರ್ ದಾಖಲಾಗಿದೆ. ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ದೌರ್ಜನ್ಯದ ಬಗ್ಗೆ ಸ್ವಾತಿ ದೂರಿನಲ್ಲಿ ವಿವರಿಸಿದ್ದಾರೆ.

“ಕೇಜ್ರಿವಾಲ್ ಅವರ ವೈಯಕ್ತಿಕ ಸಹಾಯಕ ಬಿಭವ್ ಕುಮಾರ್ ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ನಾನು ಎಷ್ಟೇ ಮನವಿ ಮಾಡಿಕೊಂಡರೂ ಪದೇ ಪದೇ ನನ್ನ ಹೊಟ್ಟೆ ಮತ್ತು ಸೊಂಟಕ್ಕೆ ಒದ್ದಿದ್ದಾನೆ” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿರುವ ನಡುವೆಯೇ ಸಿಎಂ ನಿವಾಸದಲ್ಲಿ ಭದ್ರತಾ ಸಿಬ್ಬಂದಿ, ಬಿಭವ್ ಕುಮಾರ್ ಹಾಗೂ ಸ್ವಾತಿ ಮಲಿವಾಲ್ ನಡುವೆ ನಡೆದಿದ್ದ ತೀವ್ರ ವಾಗ್ವಾದವನ್ನು ತೋರಿಸುವ ಹೊಸ ವೀಡಿಯೋವೊಂದು ಟ್ವಿಟ್ಟರ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ಇದನ್ನು ಐಎಎನ್‌ಎಸ್ ಸುದ್ದಿಸಂಸ್ಥೆ ಕೂಡ ಪ್ರಕಟಿಸಿದ್ದು, ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದೆ.

WhatsApp Image 2024 05 17 at 4.31.34 PM
ಹಲ್ಲೆ ಆರೋಪ ಎದುರಿಸುತ್ತಿರುವ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್

ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿರುವ 52 ಸೆಕೆಂಡ್‌ನ ವಿಡಿಯೋ ಕ್ಲಿಪ್‌ನಲ್ಲಿ ಭದ್ರತಾ ಸಿಬ್ಬಂದಿಗಳು ಮಲಿವಾಲ್ ಅವರನ್ನು ಆವರಣದಿಂದ ತೊರೆಯುವಂತೆ ಮನವಿ ಮಾಡುತ್ತಿರುವುದು ಕಾಣಬಹುದು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಲಿವಾಲ್, “ತೇರಿ ಭಿ ನೌಕ್ರಿ ಖಾವೂಂಗಿ… ಯೇ ಗಾಂಜಾ ಸಾಲಾ(ನಿನ್ನ ಕೆಲಸ ಸಹ ಹೋಗಬಹುದು, ಎ ಗಾಂಜಾ ಸಾಲಾ)” ಎಂದು ಹೇಳುವುದನ್ನು ಕೇಳಬಹುದು.

ಈ ವಿಡಿಯೋ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಬಂದ ಸಂಸದೆಯನ್ನು ಭದ್ರತಾ ಸಿಬ್ಬಂದಿ ತಡೆಯುತ್ತಾರೆ. ಹೀಗಾಗಿ ಅಲ್ಲಿಗೆ ಬಂದ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್, “ನೀವು ಈಗ ಭೇಟಿ ಮಾಡಲು ಸಾಧ್ಯವಿಲ್ಲ. ನೀವು ಇಲ್ಲಿಂದ ಹೊರಡಿ” ಎಂದು ಸ್ವಾತಿ ಮಲಿವಾಲ್ ಗೆ ಸೂಚಿಸುತ್ತಾರೆ.

“ಈ ವೇಳೆ, ಇಲ್ಲ ನಾನು ಇಲ್ಲಿಯೇ ಇರುತ್ತೇನೆ. ನೀವು ನನ್ನ ಮೇಲೆ ದಬ್ಬಾಳಿಕೆ ನಡೆಸಿದರೆ, ನನ್ನನ್ನು ಮುಟ್ಟಿದರೆ ನಾನು ಪೊಲೀಸರಿಗೆ ಕರೆ ಮಾಡಬೇಕಾಗುತ್ತದೆ” ಎಂದು ಸ್ವಾತಿ ಹೇಳುತ್ತಾರೆ. “ಮುಂದೆ ನಿಮ್ಮ ಕೆಲಸ ಸಹ ಹೋಗಬಹುದು ಎಂದು ಎಚ್ಚರಿಸುತ್ತಾರೆ.

ಈ ವೇಳೆ ಮಾತಿಗೆ ಮಾತು ಬೆಳೆದು ಸ್ವಾತಿ ಅವರು, ಬಿಭವ್‌ಗೆ ‘ಗಾಂಜಾ ಸಾಲಾ’ ಎಂದು ಸ್ವಾತಿ ಮಲಿವಾಲ್ ಕರೆದಿರುವಲ್ಲಿಗೆ ವಿಡಿಯೋ ಕಟ್ ಆಗುತ್ತದೆ. ಇದಾದ ನಂತರ ಹಲ್ಲೆ ನಡೆದಿರಬಹುದು ಎಂದು ವರದಿಯಾಗಿದೆ.

“ಬಿಭವ್ ಎಂಟು ಬಾರಿ ಕಪಾಳಕ್ಕೆ ಹೊಡೆದಿದ್ದಾರೆ. ನನ್ನ ಎದೆಗೆ ಕಾಲಿನಿಂದ ಒದ್ದಿದ್ದಾರೆ” ಎಂದು ಆರೋಪಿಸಿದ್ದು ಈ ಸಂಬಂಧ ಬಿಭವ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ಲದೇ, ವಿಚಾರಣೆ ಹಾಜರಾಗುವಂತೆ ಮಹಿಳಾ ಆಯೋಗ ಕೂಡ ನೋಟಿಸ್ ನೀಡಿತ್ತು. ಆದರೆ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ವಿಚಾರಣೆಗೆ ಹಾಜರಾಗಿಲ್ಲ ಎಂದು ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...