ಮೋದಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ: ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

Date:

ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ (ಟಿಎನ್‌ಸಿಸಿ) ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಮೋದಿಯವರ ದ್ವೇಷ ಭಾಷಣಗಳ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಹಲವು ದೂರುಗಳನ್ನು ಸಲ್ಲಿಸಲಾಗಿದ್ದರೂ, ಆಯೋಗವು ನೇರವಾಗಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಕೇಳುವ ಬದಲು ಬಿಜೆಪಿಗೆ ಕೇವಲ ಒಂದು ಶೋಕಾಸ್‌ ನೋಟಿಸ್‌ ನೀಡಿದೆ ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ ಸೆಲ್ವಪೆರುಂತಗೈ ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 21ರಿಂದ ಅನೇಕ ಚುನಾವಣಾ ಸಭೆಗಳಲ್ಲಿ ಪ್ರಧಾನಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ. ದ್ವೇಷ ಭಾಷಣಗಳಿಗೆ ಸಂಬಂಧಿಸಿದಂತೆ ಖುದ್ದು ಮೋದಿಯೇ ಅಪರಾಧಿಯಾಗಿದ್ದಾರೆ. ಅವಹೇಳನಕಾರಿ ಮತ್ತು ವಿಭಜನಕಾರಿ ಭಾಷಣಗಳಿಗೆ ಮೋದಿ ಅವರು ಏಕಮಾತ್ರ ಜವಾಬ್ದಾರರಾಗಿದ್ದಾರೆ. ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ಮೃದು ಧೋರಣೆ ತಪ್ಪು ಸಂದೇಶ ನೀಡಲಿದ್ದು, ದೇಶದ ಸಂಪೂರ್ಣ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ಬಿಜೆಪಿ 2024ರ ಲೋಕಸಭೆ ಚುನಾವಣೆಯನ್ನು ಶತಾಯಗತಾಯ ಗೆಲ್ಲಲು ಯತ್ನಿಸುತ್ತಿದ್ದು ಕೋಮುವಾದದ ಮೂಲಕ ವಿಭಜನೆಯ ಪ್ರಚಾರದಲ್ಲಿ ತೊಡಗಿದೆ. ಸ್ವತಃ ಪ್ರಧಾನಿಯೇ ಮುಸ್ಲಿಮರನ್ನು “ನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಕರೆದಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಬಗ್ಗೆ ಪ್ರಧಾನಿ ತಪ್ಪುದಾರಿಗೆಳೆಯುವ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದು ಹೀಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ತಡೆಯಬೇಕು ಅರ್ಜಿಯಲ್ಲಿ ಕೆ ಸೆಲ್ವಪೆರುಂತಗೈ ತಿಳಿಸಿದ್ದಾರೆ.

ವಿರೋಧಿಗಳು ಗೆಲುವು ಸಾಧಿಸಿದರೆ ಹಿಂದೂಗಳ ಸಂಪತ್ತು ಮುಸ್ಲಿಮರ ಕೈ ಸೇರುತ್ತಾರೆ ಎಂಬ ಅವರ ಮಾತೂ ಪ್ರತಿರೋಧಕ್ಕೆ ಅರ್ಹವಾದುದು. ಮೇ 1 ರಂದು ಚೆನ್ನೈನಲ್ಲಿರುವ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಈ ಕುರಿತು ಪತ್ರ ಬರೆದಿದ್ದರೂ ಅವರು ಇದುವರೆಗೆ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಹೈಕೋರ್ಟ್‌ಗೆ ಪ್ರಸ್ತುತ ಅರ್ಜಿ ಸಲ್ಲಿಸಲಾಗಿದ್ದು ಮೋದಿ ಅವರಿಂದ ವಿವರಣೆ ಪಡೆಯುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎ ಡಿ ಜಗದೀಶ್ ಚಂದಿರ ಮತ್ತು ಆರ್ ಕಲೈಮತಿ ಅವರಿದ್ದ ರಜಾಕಾಲೀನ ಪೀಠದೆದುರು ಪ್ರಸ್ತಾಪಿಸಲಾಯಿತು. ಆದರೆ ಪೀಠ, ರಿಜಿಸ್ಟ್ರಿ ಮೂಲಕ ವಿಚಾರಣೆಗೆ ಸಂಖ್ಯೆ ಪಡೆಯುವಂತೆ ಸೂಚಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...