ತಮಿಳುನಾಡಿಗೂ ಹಬ್ಬಿದ ಕರ್ನಾಟಕ ಮಾದರಿ: ಮನೆಯೊಡತಿಗೆ 1 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ ಸ್ಟಾಲಿನ್

Date:

ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಿಂದ ಪ್ರೇರಣೆ ಪಡೆದಿರುವ ತಮಿಳುನಾಡು ಸರ್ಕಾರ ಪ್ರತಿ ಕುಟುಂಬದ ಅರ್ಹ ಯಜಮಾನಿಗೆ ಪ್ರತಿ ತಿಂಗಳು ತಲಾ 1 ಸಾವಿರ ರೂ.ನಂತೆ ಆ ರಾಜ್ಯದ 1.06 ಕೋಟಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಬೃಹತ್ ಯೋಜನೆಗೆ ಸೆ.15ರಿಂದ ಚಾಲನೆ ನೀಡಲಿದೆ.

ಯೋಜನೆ ಆರಂಭಿಸುವ ಬಗ್ಗೆ ಚೆನ್ನೈನ ಸೆಕ್ರೆಟೇರಿಯಟ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ‘ಮಹಿಳೆಯರ ಜೀವನದ ಗುಣಮಟ್ಟ ಹೆಚ್ಚಿಸಲು ಆರಂಭಿಸಿರುವ ಈ ಯೋಜನೆಯ ಉಪಕ್ರಮ “ಮಗಲಿರ್‌ ಉರಿಮೈ ತೊಗೈ” ಯೋಜನೆಯಡಿ ಹಣವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು, ಇದನ್ನು ನಗದೀಕರಿಸಿಕೊಳ್ಳಲು ಅವರಿಗೂ ಎಟಿಎಂ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ಅರ್ಹ ಮಹಿಳೆಯರಿಗೆ ಸೆಪ್ಟೆಂಬರ್ 15 ರಿಂದ ಅವರ ಬ್ಯಾಂಕ್ ಖಾತೆಗಳಿಗೆ ಮೊತ್ತವನ್ನು ಜಮಾ ಮಾಡುವಂತೆ ನಾವು ವ್ಯವಸ್ಥೆ ಮಾಡಿದ್ದೇವೆ. ಒಟ್ಟು 1.63 ಕೋಟಿ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ 1,06,50,000 ಮಂದಿ ಪ್ರಯೋಜನಕ್ಕಾಗಿ ಅಂತಿಮ ಪಟ್ಟಿ ಮಾಡಲಾಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜಿ 20 ಶೃಂಗಸಭೆ ಮುಗಿದಿದೆ, ಮೋದಿ ಸರ್ಕಾರ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಮಾಜಿ ಮುಖ್ಯಮಂತ್ರಿ, ದಿವಂಗತ ಸಿ.ಎನ್. ಅಣ್ಣಾದೊರೈ ಅವರ ಜನ್ಮದಿನದಂದು ಪ್ರಾರಂಭಿಸಲಿರುವ ಯೋಜನೆಯನ್ನು ವರ್ಚುವಲ್‌ ಮೂಲಕ ಪರಿಶೀಲಿಸಿದ ಮುಖ್ಯಮಂತ್ರಿ, ಅದರ ಅನುಷ್ಠಾನದ ಮೇಲ್ವಿಚಾರಣೆಯನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ವಹಿಸಲು ಮುಖ್ಯ ಕಾರ್ಯದರ್ಶಿ ಶಿವದಾಸ್ ಮೀನಾ ಅವರಿಗೆ ಸೂಚಿಸಿದರು.

“ಎಟಿಎಂ ಕಾರ್ಡ್‌ಗಳನ್ನು ಆರಂಭದಲ್ಲಿ ನಿರ್ದಿಷ್ಟ ಸಂಖ್ಯೆಗಳಿಗೆ ನೀಡಲಾಗುವುದು. ನಂತರದಲ್ಲಿ ಎಲ್ಲರಿಗೂ ನೀಡಬೇಕಾಗುತ್ತದೆ. ಆದರೆ ಯೋಜನೆಗೆ ಆಯ್ಕೆಯಾದ ಎಲ್ಲರಿಗೂ ಎಟಿಎಂ ಕಾರ್ಡ್‌ಗಳಿಗಾಗಿ ಕಾಯುವ ಬದಲು ತಕ್ಷಣ ನಗದು ಒದಗಿಸುವ ಯೋಜನೆಯನ್ನು ಕೂಡ ಆರಂಭಿಸಲಾಗುತ್ತದೆ” ಎಂದು ಸ್ಟಾಲಿನ್ ಹೇಳಿದರು.

ತಮಿಳುನಾಡು ಸರ್ಕಾರ 2023-24ರ ಬಜೆಟ್‌ನಲ್ಲಿ ಈ ಯೋಜನೆಗೆ  7 ಸಾವಿರ ಕೋಟಿ ರೂ. ನಿಗದಿಪಡಿಸಿದೆ ಎಂದು ಹೇಳಿದ್ದರೂ, ಯೋಜನೆಗೆ ಹೆಚ್ಚು ವೆಚ್ಚವಾಗಲಿದೆ ಎಂದು ನಂಬಲಾಗಿದೆ. ಈ ಯೋಜನೆಗೆ ವಾರ್ಷಿಕ 12,000 ಕೋಟಿ ರೂ. ವಿನಿಯೋಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಪರವಾಗಿ ಫಲಾನುಭವಿಗಳಿಗೆ ಸೆಪ್ಟೆಂಬರ್ 15 ರಂದು ಎಸ್‌ಎಂಎಸ್ ಕಳುಹಿಸಲಾಗುವುದು. ಯೋಜನೆಯಲ್ಲಿ ಸಂಭವಿಸಬಹುದಾದ ಯಾವುದೇ ಸಮಸ್ಯೆಗಳನ್ನು ಹೇಗೆ ನಿರ್ವಹಿಸಬೇಕು ಎಂಬ ವಿವರಗಳನ್ನು ಎಸ್‌ಎಂಎಸ್‌ ಹೊಂದಿರುತ್ತದೆ. ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನ ಪಡೆಯಲು ಶಾರ್ಟ್‌ಲಿಸ್ಟ್ ಆಗದವರಿಗೆ ಏಕೆ ಆಗಿಲ್ಲ ಎಂಬ ಕಾರಣವನ್ನು ನೀಡಲಾಗುವುದು ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...