ಕನ್ಯಾಕುಮಾರಿಯಲ್ಲಿ ಧ್ಯಾನ ಆರಂಭಿಸಿದ ಪ್ರಧಾನಿ: ಸಾಮಾಜಿಕ ಮಾಧ್ಯಮಗಳಲ್ಲಿ ಗೋ ಬ್ಯಾಕ್ ಮೋದಿ

Date:

ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ(ಮೇ.30) ಸಂಜೆ ತಮಿಳುನಾಡಿನ ಕನ್ಯಾಕುಮಾರಿಗೆ ಆಗಮಿಸಿದ್ದು, ಅಲ್ಲಿನ ಪ್ರಸಿದ್ಧ ವಿವೇಕಾನಂದ ಶಿಲಾ ಸ್ಮಾರಕದಲ್ಲಿ 45 ತಾಸುಗಳ ಧ್ಯಾನವನ್ನು ಆರಂಭಿಸಿದರು.

ತಿರುವನಂತಪುರದಿಂದ ಹೆಲಿಕಾಪ್ಟರ್‌ನಲ್ಲಿ ಕನ್ಯಾಕುಮಾರಿಗೆ ಆಗಮಿಸಿದ ಮೋದಿ ಭಗವತಿ ಅಮ್ಮನ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಆನಂತರ ಫೆಗ್ರಿ ದೋಣಿಯ ಮೂಲಕ ವಿವೇಕಾನಂದ ಸ್ಮಾರಕವನ್ನು ತಲುಪಿ, ಧ್ಯಾನವನ್ನು ಆರಂಭಿಸಿದರು. ಜೂನ್ 1ರವರೆಗೆ ಧ್ಯಾನವು ಮುಂದುವರಿಯಲಿದೆ.

ಧೋತಿ ಹಾಗೂ ಬಿಳಿ ಶಾಲು ಧರಿಸಿದ ಮೋದಿ ಅವರು ಧ್ಯಾನವನ್ನು ಆರಂಭಿಸುವ ಮುನ್ನ ಧ್ಯಾನ ಮಂಟಪದ ಮೆಟ್ಟಲುಗಳಲ್ಲಿ ಕುಳಿತು ಕೆಲ ಸಮಯ ಕಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ 1ರಂದು ಮೋದಿ ಅವರು ವಿವೇಕಾನಂದ ಸ್ಮಾರಕದಿಂದ ನಿರ್ಗಮಿಸುವ ಮುನ್ನ ಸಮೀಪದಲ್ಲೇ ಇರುವ ತಿರುವಳ್ಳುವ‌ರ್ ಪ್ರತಿಮೆ ಇರುವ ಸ್ಥಳಕ್ಕೂ ಭೇಟಿ ನೀಡಲಿದ್ದಾರೆ. ವಿವೇಕಾನಂದ ಸ್ಮಾರಕ ಹಾಗೂ 133 ಅಡಿ ಎತ್ತರದ ತಿರುವಳ್ಳುವ‌ರ್ ವಿಗ್ರಹವನ್ನು ಎರಡು ಪ್ರತ್ಯೇಕವಾದ ಪುಟ್ಟ ದ್ವೀಪಗಳಲ್ಲಿ ನಿರ್ಮಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ಕನ್ಯಾಕುಮಾರಿಯಲ್ಲಿ ಮೋದಿಯವರು ಚುನಾವಣಾ ಉದ್ದೇಶದಿಂದ ಧ್ಯಾನವನ್ನು ನಡೆಸುತ್ತಿದ್ದಾರೆಂದು ಆರೋಪಿಸಿ ತಂದೈ ಪೆರಿಯಾರ್ ದ್ರಾವಿಡ ಕಳಗಂನ ಕಾರ್ಯಕರ್ತರು ಮದುರೈನಲ್ಲಿ ಕಪ್ಪು ಬಾವುಟ ಪ್ರದರ್ಶನ ನಡೆಸಿದರು.

ಜೂನ್ 1ರ ಲೋಕಸಭಾ ಚುನಾವಣೆಯ ಅಂತಿಮ ಹಾಗೂ 7ನೇ ಹಂತದ ಚುನಾವಣೆಯ ಸಂದರ್ಭ ಮೋದಿ ಅವರ ಧ್ಯಾನ ಕಾರ್ಯಕ್ರಮವನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ತಮಿಳುನಾಡು ಕಾಂಗ್ರೆಸ್‌ ಕೂಡ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಇದಲ್ಲದೆ ಸಾಮಾಜಿಕ ಜಾಲತಾಣ ಎಕ್ಸಲ್ಲಿ ನೆಟ್ಟಿಗರಿಂದ ಗೋ ಬ್ಯಾಕ್ ಮೋದಿ ಹ್ಯಾಶ್‌ಟ್ಯಾಗ್‌ ಪೋಸ್ಟ್‌ಗಳ ಮಹಾಪೂರವೇ ಹರಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...