ತಮಿಳುನಾಡು ಚುನಾವಣೆ | ಬಿಜೆಪಿಯ ಬಾಗಿಲು ಕಾಯುತ್ತಿದೆ ಅಣ್ಣಾ ಡಿಎಂಕೆ : ತಿರುಮಾವುಳವನ್‌

Date:

ತಮಿಳುನಾಡು ಚುನಾವಣೆಗಾಗಿ ಎಐಎಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಮೈತ್ರಿಯ ಮಾತುಕತೆಗಾಗಿ ಎಐಎಡಿಎಂಕೆಯ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ದೆಹಲಿಯಲ್ಲಿ ಅಮಿತ್‌ ಶಾ, ಮೋದಿ ಅವರಿಗೋಸ್ಕರ ಕಾಯುವಂತಹ ಪರಿಸ್ಥಿತಿ ಬಂದಿರುವುದು ಎಐಎಡಿಎಂಕೆ ಪಕ್ಷದ ದುರಂತ ಸ್ಥಿತಿ ಎಂದು ವಿಸಿಕೆ ಪಕ್ಷದ ಅಧ್ಯಕ್ಷ ತೋಲ್‌ ತಿರುಮಾವುಳವನ್‌ ವ್ಯಂಗ್ಯವಾಡಿದ್ದಾರೆ.

ಜಯಲಲಿತ ಮುಖ್ಯಮಂತ್ರಿಯಾಗಿದ್ದಾಗ ಚುನಾವಣೆಗಾಗಿ ರಾಷ್ಟ್ರೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ ದ್ರಾವಿಡ ಚಳುವಳಿಯನ್ನು ಮರೆತಿರಲಿಲ್ಲ. ಪಕ್ಷದ ಮೂಲ ಸಿದ್ಧಾಂತವನ್ನು ಬಿಟ್ಟುಕೊಟ್ಟಿರಲಿಲ್ಲ. ಎಡಪ್ಪಾಡಿ ಪಳನಿಸ್ವಾಮಿ ಸಾಮಾಜಿಕ ನ್ಯಾಯ ಕೊಡಿಸುವ ತಮ್ಮ ಪಕ್ಷದ ಮೂಲ ತತ್ವ ಮರೆತು ದೆಹಲಿಯಲ್ಲಿ ಅಮಿತ್‌ ಶಾ ಮತ್ತು ಮೋದಿಗಾಗಿ ಕಾಯುತ್ತಿದ್ದಾರೆ. ಜಯಲಲಿತ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಷ್ಟ್ರೀಯ ಪಕ್ಷಗಳ ನಾಯಕರು ತಮಿಳುನಾಡಿಗೆ ಬಂದು ಜಯಲಲಿತ ಅವರಿಗಾಗಿ ಕಾದು ಸಭೆಯಲ್ಲಿ ಭಾಗಿಯಾಗುತ್ತಿದ್ದರು. ಅವರೇ ಮೈತ್ರಿಯನ್ನು ಮುನ್ನಡೆಸುತ್ತಿದ್ದರು.  ಆದರೆ ಈಗ ಮೈತ್ರಿಯ ನೇತೃತ್ವವನ್ನು ಕೂಡ ಎಐಎಡಿಎಂಕೆ ಬಿಜೆಪಿಗೆ ಬಿಟ್ಟುಕೊಟ್ಟಿದೆ. ಬಿಜೆಪಿ ಮುಂದೆ ಎಐಎಡಿಎಂಕೆ ಮಂಡಿಯೂರಿದೆ. ಬಿಜೆಪಿಯ ಬಾಗಿಲು ಕಾಯುತ್ತಿದೆ. ಮೈತ್ರಿಯ ನೇತೃತ್ವ ಎಐಎಡಿಎಂಕೆ ಪಕ್ಷವೇ ವಹಿಸಿಕೊಳ್ಳಬೇಕು. ಆ ದಕ್ಷತೆ ಇರಿಸಿಕೊಳ್ಳಿ ಎಂದು ನಾನು ಪಳನಿಸ್ವಾಮಿ ಅವರಿಗೆ ಸಲಹೆ ನೀಡಲು ಬಯಸುವುದಾಗಿ ಹೇಳಿದ್ದಾರೆ.

ಇನ್ನು, ಡಿಎಂಕೆ ಜೊತೆಗಿನ ಮೈತ್ರಿಯ ಸೀಟು ಹಂಚಿಕೆಯ ಮಾತುಕತೆ ಬಗ್ಗೆ ತಿಳಿಸಿದ ತಿರುಮಾವುಳವನ್‌, ನಮ್ಮ  ಮೈತ್ರಿಯ ನೇತೃತ್ವ ವಹಿಸಿರುವ ಡಿಎಂಕೆ ನಮಗೆ ಸೀಟು ಹಂಚಿಕೆ ಮಾಡಿದ ಮೇಲೆ ನಮ್ಮ ಅಭ್ಯರ್ಥಿಗಳ ಪಟ್ಟಿ ಮತ್ತು ಯಾವ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ ಎನ್ನುವುದನ್ನು ಪ್ರಕಟಿಸುತ್ತೇವೆ.  ಡಿಎಂಕೆ ನೇತೃತ್ವದ ಮೈತ್ರಿಗೆ ಹತ್ತಕ್ಕೂ ಹೆಚ್ಚು ಪಕ್ಷಗಳು ಸೇರ್ಪಡೆಗೊಂಡಿರುವ ಕಾರಣ ಸೀಟು ಹಂಚಿಕೆಯ ಪ್ರಕ್ರಿಯೆಯಲ್ಲಿ ಎಲ್ಲಾ ಪಕ್ಷಗಳನ್ನು ವಿಶ್ವಾಸದಿಂದ ನೋಡಿಕೊಳ್ಳಬೇಕಿದೆ. ಡಿಎಂಕೆ ಎಲ್ಲಾ ಪಕ್ಷಗಳ ಜೊತೆಗೆ ಮಾತುಕತೆ ನಡೆಸುತ್ತಿದ್ದು, ಅತಿ ಶೀಘ್ರದಲ್ಲೇ ಸೀಟು ಹಂಚಿಕೆಯನ್ನು ಪೂರ್ಣಗೊಳಿಸಲಿದೆ. ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.  

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 23ರಂದು ಚುನಾವಣೆ ನಡೆಯಲಿದ್ದು, ಮೇ 04ರಂದು ಫಲಿತಾಂಶ ಹೊರಬರಲಿದೆ.

ಇದನ್ನೂ ಓದಿ : ಬಿಜೆಪಿ ಅಸ್ತ್ರಕ್ಕೆ ಟಿಎಂಸಿ ಪ್ರತ್ಯಸ್ತ್ರ; ಸುವೇಂದು ಎದುರು ಸ್ಪರ್ಧಿಸಿರುವ ‘ಪಬಿತ್ರ ಕರ್’ ಯಾರು ಗೊತ್ತೆ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...