ಕರ್ನಾಟಕ – ತಮಿಳುನಾಡು ಕಾವೇರಿ ನದಿ ವಿವಾದ: ನೀರು ಹಂಚಿಕೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಒಪ್ಪಿಗೆ

Date:

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಇಂದು(ಆಗಸ್ಟ್‌ 21) ಒಪ್ಪಿಗೆ ನೀಡಿದೆ.

ಸುಪ್ರೀಂ ಕೋರ್ಟ್​ನಲ್ಲಿ ಸಿಜೆಐ ಪೀಠದ ಮುಂದೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರು ಕರ್ನಾಟಕಕ್ಕೆ ಕಾವೇರಿ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಪ್ರತ್ಯೇಕ ಪೀಠ ರಚನೆಗೆ ಒಪ್ಪಿಗೆ ನೀಡಿದ್ದಾರೆ. ಆಗಸ್ಟ್‌ 21ರಂದೇ ಪೀಠ ರಚನೆಯಾಗಲಿದ್ದು, ವಿಚಾರಣೆ ಕೂಡ ಇಂದೇ ಆರಂಭವಾಗಲಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ನ್ಯಾಯಮೂರ್ತಿ ಪೀಠದ ಮುಂದೆ ತಮಿಳುನಾಡು ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಹಾಗೂ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಅಮಿತ್‌ ಆನಂದ್‌ ತಿವಾರಿ ಅವರು ತುರ್ತು ಮನವಿಯ ಅರ್ಜಿಯನ್ನು ಪ್ರಸ್ತಾಪಿಸಿದ್ದಾರೆ.

“ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಪ್ರಕಾರ ಆಗಸ್ಟ್‌ ತಿಂಗಳಲ್ಲಿ ನೀರನ್ನು ಬಿಡುಗಡೆ ಮಾಡಲು ಇದು ತುರ್ತು ಮನವಿಯಾಗಿದೆ. ನಿಮ್ಮ ನೇತೃತ್ವದಲ್ಲಿ ನ್ಯಾಯ ಪೀಠವನ್ನು ರಚಿಸಬೇಕು” ಎಂದು ಮುಕುಲ್ ರೋಹಟಗಿ ಮನವಿಯಲ್ಲಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಹಗರಣ: ಸಿಬಿಐ ತನಿಖೆಗೆ ವಹಿಸಿದ ಕೇಂದ್ರ

“ಇಂದೇ ನಾನು ಪೀಠವನ್ನು ರಚಿಸುತ್ತೇನೆ” ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಪ್ರತಿಕ್ರಿಯಿಸಿದರು. ರೋಹಟಗಿ ಅವರು ಕೂಡ ಪ್ರಕರಣವನ್ನು ಶೀಘ್ರವಾಗಿ ಪಟ್ಟಿ ಮಾಡುವಂತೆ ಮುಖ್ಯ ನ್ಯಾಯಾಧೀಶರನ್ನು ಒತ್ತಾಯಿಸಿದರು.

ಆಗಸ್ಟ್ 14 ರಿಂದ ಪ್ರಾರಂಭವಾಗುವ ಉಳಿದ ತಿಂಗಳ ಅವಧಿಗೆ ಬಿಳಿಗುಂಡ್ಲು ಜಲಾಶಯದಿಂದ 24,000 ಕ್ಯೂಸೆಕ್ಸ್ ಕಾವೇರಿ ನೀರನ್ನು ತಕ್ಷಣವೇ ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

2018 ರಲ್ಲಿ ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ ಕಾವೇರಿ ನ್ಯಾಯಮಂಡಳಿ ತೀರ್ಪು ಪ್ರಕಾರ 2023 ಸೆಪ್ಟೆಂಬರ್ ತಿಂಗಳಿಗೆ (36.76 ಟಿಎಂಸಿ) ನಿಗದಿತ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ನಿರ್ದೇಶಿಸುವಂತೆ ತಮಿಳುನಾಡು ಸರ್ಕಾರ ನ್ಯಾಯಾಲಯವನ್ನು ಒತ್ತಾಯಿಸಿದೆ.

ಪ್ರಸಕ್ತ ನೀರಾವರಿ ವರ್ಷದಲ್ಲಿ ಜೂನ್ 1 ರಿಂದ ಜುಲೈ 31 ರವರೆಗಿನ ಅವಧಿಯಲ್ಲಿ ಕರ್ನಾಟಕವು 28.849 ಟಿಎಂಸಿ ನೀರಿನ ಕೊರತೆಯನ್ನು ಸರಿದೂಗಿಸಬೇಕು ಎಂದು ತಮಿಳುನಾಡು ಹೇಳಿದೆ.

ಕಾವೇರಿ ಜಲ ವಿವಾದದಲ್ಲಿ ಈ ಮನವಿಯನ್ನು ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್ ಅನ್ನು ಆಗ್ರಹಿಸಿದ ರೋಹಟಗಿ, ತಪ್ಪಲು ಜಿಲ್ಲೆಗಳಲ್ಲಿ ಬೆಳೆದು ನಿಂತ ಬೆಳೆಗಳಿಗೆ ತುರ್ತಾಗಿ ನೀರಿನ ಅಗತ್ಯತೆ ಇದೆ ಎಂದು ತಮ್ಮ ವಾದದಲ್ಲಿ ತಿಳಿಸಿದ್ದಾರೆ.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಆದೇಶ ಉಲ್ಲಂಘಿಸಲಾಗಿದ್ದು, ಕರ್ನಾಟಕವು ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ ಬಿಳಿಗುಂಡ್ಲುವಿನಲ್ಲಿ 2023 ಆಗಸ್ಟ್ 11ರಂದು ಮುಂದಿನ 15 ದಿನಗಳಲ್ಲಿ ಬಿಡುಗಡೆ ಮಾಡಬೇಕಾಗಿದ್ದ ನೀರಿನ ಪ್ರಮಾಣವನ್ನು 15 ಸಾವಿರ ಕ್ಯೂಸೆಕ್ಸ್ (ಪ್ರತಿದಿನ 0.864 ಟಿಎಂಸಿ)ನಿಂದ 10 ಸಾವಿರ ಕ್ಯೂಸೆಕ್ಸ್‌ಗೆ ಇಳಿಕೆ ಮಾಡಿದೆ ಎಂದು ಮನವಿಯಲ್ಲಿ ಪ್ರತಿಪಾದಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...