ದೇವಾಲಯದೊಳಗೆ ಅಪ್ತಾಪ್ತ ಬಾಲಕಿಯ ಮೇಲೆ ಕಾಮುಕ ಅರ್ಚಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ. ಆರೋಪಿ ಅರ್ಚಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕುಂಭಕೋಣಂನ ತಿರುವಲಂಚುಳಿಯಲ್ಲಿ ಹಿಂದು ಧಾರ್ಮಿಕ ಮತ್ತು ದತ್ತಿ ದತ್ತಿ (HR&CE) ಇಲಾಖೆಯ ಅಡಿಯಲ್ಲಿರುವ ದೇವಾಲಯದಲ್ಲಿ ಘಟನೆ ನಡೆದಿದೆ. ದೇವಾಲಯದ ಅರ್ಚಕ, ಆರೋಪಿ ವಿಶ್ವನಾಥ ಅಯ್ಯರ್ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 8 ರಂದು, ಬಾಲಕಿ ತನ್ನ ಕುಟುಂಬದೊಂದಿಗೆ ದೇವಾಲಯಕ್ಕೆ ತೆರಳಿದ್ದರು. ಕಾಣಿಕೆ ನೀಡಲು ಹುಂಡಿ (ಕಾಣಿಕೆ ಪೆಟ್ಟಿಗೆ) ಪ್ರದೇಶಕ್ಕೆ ಒಬ್ಬಂಟಿಯಾಗಿ ಹೋದಾಗ, ಆಕೆಯೊಂದಿಗೆ ಅರ್ಚಕ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು, ತನಿಖೆ ನಡೆಸಿದ ಪೊಲೀಸರು, ಆರೋಪಗಳು ನಿಜವೆಂದು ಕಂಡುಕೊಂಡಿದ್ದಾರೆ. ಬಳಿಕ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ.




