ತಮಿಳುನಾಡು | ದಲಿತ ಮಹಿಳೆ ತಯಾರಿಸಿದ ಅಡುಗೆ ಸೇವಿಸಲು ನಿರಾಕರಿಸಿದ ವಿದ್ಯಾರ್ಥಿಗಳು

Date:

ದಲಿತ ಮಹಿಳೆ ಅಡುಗೆ ತಯಾರಿಸಿದರೆಂದು ಶಾಲಾ ಮಕ್ಕಳು ಆಹಾರವನ್ನು ಸೇವಿಸಲು ನಿರಾಕರಿಸಿರುವ ಘಟನೆ ತಮಿಳುನಾಡಿನ ಕರೂರ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.

ತಮಿಳುನಾಡಿನ ಕರೂರ್ ಜಿಲ್ಲೆಯ ವೇಲನ್ ಚೆಟ್ಟಿಯಾರ್ ಪಂಚಾಯತ್ ಯೂನಿಯನ್ ಶಾಲೆಯಲ್ಲಿ ಓದುತ್ತಿರುವ 30 ವಿದ್ಯಾರ್ಥಿಗಳ ಪೈಕಿ 15 ವಿದ್ಯಾರ್ಥಿಗಳು ಉಪಾಹಾರ ಸೇವಿಸಲು ನಿರಾಕರಿಸಿದ್ದು, ಈ ಕುರಿತು ಜಿಲ್ಲಾಡಳಿತಕ್ಕೆ ದೂರು ನೀಡಲಾಗಿದೆ.

ರಾಜ್ಯ ಸರ್ಕಾರದ ಉಚಿತ ಉಪಾಹಾರ ಯೋಜನೆಯಡಿಯಲ್ಲಿ ತಯಾರಾದ ಬೆಳಗಿನ ಉಪಾಹಾರವನ್ನು 15 ವಿದ್ಯಾರ್ಥಿಗಳು ಸೇವಿಸಲು ನಿರಾಕರಿಸಿದ್ದಾರೆ. ದಲಿತ ಮಹಿಳೆಯೊಬ್ಬರು ಅಡುಗೆ ಮಾಡಿದ್ದರಿಂದ ವಿದ್ಯಾರ್ಥಿಗಳು ಆಹಾರವನ್ನು ಸೇವಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಹಿತಿ ತಿಳಿದು ಶಾಲೆಗೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ಟಿ ಪ್ರಭು ಶಂಕರ್ ಪೋಷಕರಿಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುವಂತೆ ಮನವರಿಕೆ ಮಾಡಿದರು. ಈ ರೀತಿ ಘಟನೆ ನಡೆದರೆ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸಂಭಾವ್ಯ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಸಂಸತ್ತಿನ ವಿಶೇಷ ಅಧಿವೇಶನ : 9 ವಿಷಯಗಳ ಚರ್ಚೆಗೆ ಪ್ರಧಾನಿಗೆ ಸೋನಿಯಾ ಪತ್ರ

ನಮ್ಮ ಮಕ್ಕಳು ಆಹಾರವನ್ನು ಸೇವಿಸುವುದಿಲ್ಲ. ಶಾಲೆಯವರು ಒತ್ತಾಯಿಸಿದರೆ, ತಮ್ಮ ಮಕ್ಕಳನ್ನು ಶಾಲೆಯಿಂದ ಹೊರಗೆ ಕರೆದೊಯ್ಯಲು ಸಿದ್ಧ ಎಂದು ಪೋಷಕರು ಜಿಲ್ಲಾಧಿಕಾರಿ ಬಳಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಯೋಜನಾ ನಿರ್ದೇಶಕ ಶ್ರೀನಿವಾಸನ್ ಅವರು ಕೂಡ ಪೋಷಕರ ಬಳಿ ಮಕ್ಕಳಿಗೆ ಆಹಾರವನ್ನು ಸೇವಿಸಲು ತಿಳಿಸಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ಆದರೆ ಪೋಷಕರು ಅಧಿಕಾರಿಯ ಮನವಿಗೆ ಸ್ಪಂದಿಸಿಲ್ಲ. 15 ವಿದ್ಯಾರ್ಥಿಗಳಲ್ಲಿ ಇಬ್ಬರು ಮಾತ್ರ ಆಹಾರವನ್ನು ಸೇವಿಸುತ್ತಿದ್ದಾರೆ. ಇದರಿಂದ ಈ ಸಮಸ್ಯೆ ಮತ್ತಷ್ಟು ಉಲ್ಬಣವಾಗಿದೆ.

ಜಿಲ್ಲಾಡಳಿತವು ಎಲ್ಲ ಪೋಷಕರಿಗೆ ಮನವರಿಕೆ ಮಾಡಿ, ತಮ್ಮ ಮಕ್ಕಳಿಗೆ ಆಹಾರ ಸೇವಿಸುವಂತೆ ಹೇಳಲು ತಿಳಿಸಲಾಗಿದೆ. ಇದನ್ನು ಪಾಲಿಸದವರಿಗೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.

ರಾಜ್ಯದ ಪ್ರಾಥಮಿಕ ಸರ್ಕಾರಿ ಶಾಲೆಗಳಲ್ಲಿನ 15.75 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಉಪಾಹಾರ ನೀಡುವ ಯೋಜನೆಯನ್ನು ಆಗಸ್ಟ್ 25 ರಂದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಉದ್ಘಾಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...