ತಮಿಳುನಾಡು | 300 ಲೀಟರ್ ಎದೆಹಾಲು ದಾನ ಮಾಡಿ; ಸಾವಿರಾರು ಮಕ್ಕಳ ಜೀವ ಉಳಿಸಿದ ಮಹಿಳೆ

Date:

ಅಮೆರಿಕದ ಟೆಕ್ಸಾಸ್ ಮೂಲದ ಅಲೈಸ್ ಒಗ್ಲೆಟ್ರೀ ಅವರು 2,645.58 ಲೀಟರ್ ತಮ್ಮ ಎದೆ ಹಾಲು ದಾನ ಮಾಡಿ, 3.6 ಲಕ್ಷ ನವಜಾತ ಶಿಶುಗಳ ಆರೈಕೆಗೆ ನೆರವಾಗಿದ್ದರು. ಆ ಮೂಲಕ, ಎದೆ ಹಾಲು ದಾನದಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಿದ್ದರು. ಅಂತೆಯೇ, ಭಾರತದಲ್ಲಿಯೂ ಮಹಿಳೆಯೊಬ್ಬರು 300 ಲೀಟರ್ ತಮ್ಮ ಎದೆ ಹಾಲು ದಾನ ಮಾಡುವ ಮೂಲಕ ಸಾವಿರಾರು ಮಕ್ಕಳ ಜೀವ ಉಳಿಸಲು ನೆರವಾಗಿದ್ದಾರೆ. ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ ಮತ್ತು ‘ಏಷ್ಯಾ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ಸ್ಥಾನ ಪಡೆದಿದ್ದಾರೆ.

ತಮಿಳುನಾಡಿನ ತಿರುಚಿರಾಪಲ್ಲಿಯ ಕಟ್ಟೂರು ಗ್ರಾಮದ ಮಹಿಳೆ ಸೆಲ್ವಾ ಬೃಂದಾ ಅವರು 2023ರ ಏಪ್ರಿಲ್‌ನಿಂದದ 2025ರ ಫೆಬ್ರವರಿವರೆಗೆ 300 ಲೀಟರ್ ಎದೆ ಹಾಲು ದಾನ ಮಾಡಿದ್ದಾರೆ. ಅವರು ದಾನ ಮಾಡಿದ ಎದೆ ಹಾಲು, ಅವಧಿಪೂರ್ವ ಜನಿಸಿದ ಮಕ್ಕಳು ಮತ್ತು ಗಂಭೀರ ಖಾಯಿಲೆಗಳಿಂದ ಬಳಲುತ್ತಿರುವ ಸಾವಿರಾರು ಮಕ್ಕಳ ಜೀವ ಉಳಿಸಲು ನೆರವಾಗಿದೆ.

ಎರಡು ಮಕ್ಕಳ ತಾಯಿಯಾಗಿರುವ ಬೃಂದಾ ಅವರಿಗೆ 2023ರ ಫೆಬ್ರವರಿಯಲ್ಲಿ 2ನೇ ಮಗು ಜನಿಸಿತು. ಆ ಮಗುವಿಗೆ ಜನಿಸಿದ ಸಮಯದಲ್ಲೇ ಜಾಂಡಿಸ್‌ (ಕಾಮಾಲೆ) ತಲುಲಿತ್ತು. ಹೀಗಾಗಿ, ಮಗುವನ್ನು ಎನ್‌ಐಸಿಯುನಲ್ಲಿ ಇರಿಸಿ, ಆರೈಕೆ ಮಾಡಲಾಗುತ್ತಿತ್ತು. ಬೃಂದಾ ಅವರ ಎದೆ ಹಾಲನ್ನು ಪಂಪ್‌ ಮಾಡಿ, ಮಗುವಿಗೆ ನೀಡಲಾಗುತ್ತಿತ್ತು. ಈ ವೇಳೆ, ಬೃಂದಾ ಅವರು ತಮ್ಮ ಹೆಚ್ಚವರಿ ಹಾಲನ್ನು ಅದೇ ಎನ್‌ಐಸಿಯುನಲ್ಲಿದ್ದ ಇತರ ಶಿಶುಗಳಿಗೂ ಒದಗಿಸಲು ನಿರ್ಧರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂದು ಅವರು ಮಾಡಿದ ಆ ನಿರ್ಧಾರ, ಅವರು ಈವರೆಗೂ ಎದೆ ಹಾಲನ್ನು ದಾನ ಮಾಡುವಂತೆ ಪ್ರೇರೇಪಿಸಿದೆ. ಅವರು ಮಹಾತ್ಮ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಯ (MGMGH) ಎದೆ ಹಾಲು ಬ್ಯಾಂಕ್‌ಗೆ 300.17 ಲೀಟರ್ ಎದೆ ಹಾಲನ್ನು ದಾನ ಮಾಡಿದ್ದಾರೆ.

ಈ ವರದಿ ಓದಿದ್ದೀರಾ?: 2,645 ಲೀಟರ್ ಎದೆ ಹಾಲು ದಾನ ಮಾಡಿ 3.5 ಲಕ್ಷ ಶಿಶುಗಳನ್ನು ಉಳಿಸಿದ್ದಾರೆ ಈ ಮಹಿಳೆ

20 ತಿಂಗಳ ಕಾಲ ನಿರಂತರವಾಗಿ ಎದೆ ಹಾಲು ದಾನ ಮಾಡಿರುವ ಬೃಂದಾ ಅವರ ಮಾನವೀಯತೆಯನ್ನು ಎದೆ ಹಾಲು ಬ್ಯಾಂಕ್‌ನ ಅಧಿಕಾರಿಗಳು ಶ್ಲಾಘಿಸಿದ್ದಾರೆ.ಆಗಸ್ಟ್‌ ತಿಂಗಳಿನಲ್ಲಿ ನಡೆಯಲಿರುವ ‘ವಿಶ್ವ ಸ್ತನ್ಯಪಾನ ವಾರ’ದ ಸಮಾರೋಪ ಕಾರ್ಯಕ್ರಮದಲ್ಲಿ ಬೃಂದಾ ಅವರಿಗೆ ಸನ್ಮಾನ ಮಾಡಲು ನಿರ್ಧರಿಸಿದ್ದಾರೆ.

“ಅವಧಿಪೂರ್ವ ಶಿಶುಗಳಿಗೆ ಎದೆ ಹಾಲು ಔಷಧದಂತೆ ಕೆಲಸ ಮಾಡುತ್ತದೆ. ಇದು ಶಿಶುಗಳ ಆರೋಗ್ಯವನ್ನು ಸುಧಾರಿಸಿ, ಬದುಕಿಗೆ ಆಧಾರವಾಗುತ್ತದೆ,” ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...