ಐಟಿಯಿಂದ 3,500 ಕೋಟಿ ರೂ. ತೆರಿಗೆ ನೋಟಿಸ್; ಕಾಂಗ್ರೆಸ್‌ ವಿರುದ್ಧ ಸದ್ಯಕ್ಕಿಲ್ಲ ಕ್ರಮ

Date:

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಬಿಗ್ ರಿಲೀಫ್ ದೊರೆತಿದೆ. 3,500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 24 ರಂದು ನಡೆಸಲಾಗುವುದು ಎಂದು ನ್ಯಾಯಾಲಯಕ್ಕೆ ಆದಾಯ ತೆರಿಗೆ ಇಲಾಖೆ ಹೇಳಿದೆ.

ಕಾಂಗ್ರೆಸ್‌ ಪಕ್ಷಕ್ಕೆ ವಿವಿಧ ಹಣಕಾಸು ವರ್ಷಗಳ ತೆರಿಗೆ ಬಾಕಿ ಪಾವತಿಗಳ ನೋಟಿಸ್‌ಅನ್ನು ಆದಾಯ ತೆರಿಗೆ ಇಲಾಖೆ ಕಳುಹಿಸಿದ್ದು, ಸುಮಾರು 3,567 ಕೋಟಿ ಮೊತ್ತದ ತೆರಿಗೆ ಬಾಕಿ ಪಾವತಿಸುವಂತೆ ತಿಳಿಸಿದೆ. ಇದಾದ ಬಳಿಕ ಕಾಂಗ್ರೆಸ್‌ ಹೈಕೋರ್ಟ್‌ ಮೆಟ್ಟಿಲೇರಿತ್ತು. ಆಡಳಿತಾರೂಢ ಬಿಜೆಪಿಯು ವಿರೋಧ ಪಕ್ಷಗಳ ಮೇಲೆ “ತೆರಿಗೆ ಭಯೋತ್ಪಾದನೆ” ಮಾಡುತ್ತಿದೆ ಎಂದು ಆರೋಪಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಯ ತೆರಿಗೆ ಇಲಾಖೆಯು ಈ ಸಂದರ್ಭದಲ್ಲಿ ನೋಟಿಸ್ ನೀಡಿರುವುದು ಚುನಾವಣೆಗೂ ಮುನ್ನ ವಿಪಕ್ಷಗಳನ್ನು ಆರ್ಥಿಕವಾಗಿ ಕುಗ್ಗಿಸುವ ಪ್ರಯತ್ನವಾಗಿದೆ ಎಂದು ಹೇಳಿರುವ ಕಾಂಗ್ರೆಸ್, ಇದು ಚುನಾವಣೆಯಲ್ಲಿ ಸರಿಸಮಾನವಾದ ಸ್ಪರ್ಧೆಗೆ ಅವಕಾಶ ನೀಡುವುದಿಲ್ಲ ಎಂದಿತ್ತು. ಜೊತೆಗೆ ಈ ವಿಚಾರದಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿತ್ತು.

ಇದನ್ನು ಓದಿದ್ದೀರಾ?  ಕಾಂಗ್ರೆಸ್‌ಗೆ ಮತ್ತೆ ಐಟಿ ನೋಟಿಸ್; ಒಟ್ಟು 3,567 ಕೋಟಿ ರೂ. ತೆರಿಗೆ ಪಾವತಿ ಬೇಡಿಕೆ!

ಇನ್ನು ಈ ಹಿಂದೆ ಆದಾಯ ತೆರಿಗೆ ಇಲಾಖೆಯು ಬಾಕಿ ಇರುವ 135 ಕೋಟಿ ರೂಪಾಯಿ ಮೊತ್ತವನ್ನು ಪಕ್ಷದ ಖಾತೆಯಿಂದ ಹಿಂಪಡೆದಿದೆ. ಈಗ ಮತ್ತೆ ಒಟ್ಟಾಗಿ 3,500 ಕೋಟಿ ರೂಪಾಯಿ ತೆರಿಗೆ ಪಾವತಿಸಲು ನೋಟಿಸ್ ನೀಡಲಾಗಿದೆ. ಈ ನೋಟಿಸ್ ವಿರುದ್ಧ ಕಾಂಗ್ರೆಸ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ನೇತೃತ್ವದ ಪೀಠ ಇಂದು ವಿಚಾರಣೆ ನಡೆಸಿದೆ.

ಈ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು “ಚುನಾವಣಾ ಸಮಯದಲ್ಲಿ ವಿರೋಧ ಪಕ್ಷದ ವಿರುದ್ಧ ಕೇಂದ್ರೀಯ ಸಂಸ್ಥೆ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದರು.

“2024 ರಲ್ಲಿ ವಿಪಕ್ಷಕ್ಕೆ ಶೇಕಡ 20 ರಷ್ಟು ಬಾಕಿ ಮೊತ್ತ ಪಾವತಿಸಲು ಆಯ್ಕೆಯನ್ನು ನೀಡಲಾಯಿತು. ಅದರಂತೆ 135 ಕೋಟಿ ರೂಪಾಯಿ ಖಾತೆಯಿಂದ ಹಿಂಪಡೆಯಲಾಯಿತು. ಅದಾದ ಬಳಿಕ 1,700 ಕೋಟಿ ರೂಪಾಯಿ ತೆರಿಗೆ ಬೇಡಿಕೆ ಮುಂದಿಡಲಾಗಿದೆ. ಈ ವಿಚಾರದಲ್ಲಿ ಚುನಾವಣೆಯ ನಂತರ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?  ಲೆಕ್ಕಪತ್ರವಿಲ್ಲದ 524 ಕೋಟಿ ರೂ. ವಹಿವಾಟು ಆರೋಪ; ಕಾಂಗ್ರೆಸ್‌ಗೆ ಮತ್ತೆ ಆದಾಯ ತೆರಿಗೆ ನೋಟಿಸ್!

“ಕೇಂದ್ರವು ತೆರಿಗೆ ಬೇಡಿಕೆಯನ್ನು ಹಿಂಪಡೆಯುತ್ತದೆಯೇ” ಎಂದು ಈ ಸಂದರ್ಭದಲ್ಲಿ ನ್ಯಾಯಾಲಯವು ಪ್ರಶ್ನಿಸಿದ್ದು, “ಇಲ್ಲ, ನಾವು ಚುನಾವಣೆಯವರೆಗೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ” ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಕೇಂದ್ರವು 135 ಕೋಟಿ ರೂಪಾಯಿ ಸಂಗ್ರಹಿಸಿದೆ. ನಮ್ಮದು ಲಾಭ ಗಳಿಸುವ ಸಂಘಟನೆಯಲ್ಲ, ಕೇವಲ ರಾಜಕೀಯ ಪಕ್ಷ” ಎಂದು ಹೇಳಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...