ಅಟಲ್ ಸೇತುವೆಯಿಂದ ಸಮುದ್ರಕ್ಕೆ ಬೀಳುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಟ್ಯಾಕ್ಸಿ ಚಾಲಕ, ಟ್ರಾಫಿಕ್ ಪೊಲೀಸರು; ವಿಡಿಯೋ ವೈರಲ್

Date:

ಮುಂಬೈನ ಅಟಲ್ ಸೇತುವಿನಿಂದ ಅರಬ್ಬಿ ಸಮುದ್ರಕ್ಕೆ ಬೀಳುತ್ತಿದ್ದ 56 ವರ್ಷದ ಮಹಿಳೆಯನ್ನು ಟ್ಯಾಕ್ಸಿ ಚಾಲಕ ಮತ್ತು ನಾಲ್ವರು ಟ್ರಾಫಿಕ್ ಪೊಲೀಸರು ಚಾಣಾಕ್ಷತೆಯಿಂದ ರಕ್ಷಿಸಿದ್ದಾರೆ. ಮಹಿಳೆಯನ್ನು ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅರಬ್ಬಿ ಸಮುದ್ರದ ಮೇಲೆ ನಿರ್ಮಿಸಿರುವ ಅಟಲ್ ಸೇತುವೆ ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಒದಗಿಸುತ್ತದೆ. ಶುಕ್ರವಾರ ಸಂಜೆ, ಟ್ಯಾಕ್ಸಿಯಲ್ಲಿ ಸೇತುವೆ ಬಳಿಗೆ ಬಂದ ಮುಲುಂಡ್ ನಿವಾಸಿ ರೀಮಾ ಮುಖೇಶ್ ಪಟೇಲ್ ಅವರು ಸೇತುವೆ ಕ್ರ್ಯಾಶ್ ಬ್ಯಾರಿಯರ್‌ಗೆ ನಡೆದುಕೊಂಡು ಹೋಗಿದ್ದು, ರೇಲಿಂಗ್ ಮೇಲೆ ಹತ್ತಿದ್ದು, ಸಮುದ್ರಕ್ಕೆ ಹಾರಲು ಯತ್ನಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೈರಲ್ ವೀಡಿಯೊದಲ್ಲಿ, ಟ್ಯಾಕ್ಸಿ ಡ್ರೈವರ್ ಅವಳ ಹತ್ತಿರ ನಿಂತಿರುವುದನ್ನು ಕಾಣಬಹುದು. ಅಷ್ಟರಲ್ಲಿ ಗಸ್ತು ತಿರುಗುತ್ತಿದ್ದ ಪೋಲೀಸ್ ವಾಹನವೂ ಅಲ್ಲಿಗೆ ಬಂದಿದೆ. ಪೊಲೀಸರನ್ನು ನೋಡಿದ ಮಹಿಳೆ ಕುಳಿತ ಜಾಗದಿಂದ ಸಮುದ್ರಕ್ಕೆ ಜಿಗಿಯುತ್ತಾರೆ. ಒಂದೇ ಒಂದು ಸೆಕೆಂಡ್‌ನಲ್ಲಿ ಮಹಿಳೆಯ ಕೂದಲನ್ನು ಟ್ಯಾಕ್ಸಿ ಡ್ರೈವರ್ ಹಿಡಿದುಕೊಂಡಿದ್ದು, ನಾಲ್ವರು ಪೊಲೀಸರು ಸ್ಪ್ರಿಂಟ್ ಮತ್ತು ರೇಲಿಂಗ್ ಮೇಲೆ ಹತ್ತಿ ಆಕೆಯನ್ನು ಮೇಲೆ ಎಳೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೊಲೀಸರಲ್ಲಿ ಒಬ್ಬರು ಕೆಳಗೆ ಬಾಗಿ ಆಕೆಯನ್ನು ಹಿಡಿದುಕೊಂಡಿದ್ದಾರೆ. ಬಳಿಕ, ನಾಲ್ವರು ಪೊಲೀಸರು ನಿಧಾನವಾಗಿ ಮಹಿಳೆಯನ್ನು ಮೇಲೆ ಎಳೆದುಕೊಂಡಿದ್ದು, ಆಕೆಯನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಸ್ಥಳೀಯ ಅಧಿಕಾರಿ ತಿಳಿಸಿದ್ದಾರೆ.

“ಪೊಲೀಸರು ತನ್ನ ಬಳಿಗೆ ಬರುವುದನ್ನು ನೋಡಿದ ನಂತರ ಭಯದಿಂದ ನಿಯಂತ್ರಣ ಕಳೆದುಕೊಂಡು, ಸೇತುವೆಯಿಂದ ಬಿದ್ದಿದ್ದಾಗಿ ಮಹಿಳೆ ಕೇಳಿಕೊಂಡಿದ್ದಾರೆ. ನ್ಹವಾ ಶೇವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಅಧಿಕಾರಿ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...