ರಹಸ್ಯವಾಗಿ ಚಿತ್ರೀಕರಿಸಿದ ವಿಡಿಯೊ ಮುಂದಿಟ್ಟು ಮದುವೆ ರದ್ದು: ಮನನೊಂದು ಟೆಕ್ಕಿ, ಆಕೆಯ ತಾಯಿ ಆತ್ಮಹತ್ಯೆ

Date:

ನಿಗದಿಯಾಗಿದ್ದ ಮದುವೆಯನ್ನು ವರನ ಕಡೆಯವರು ಏಕಾಏಕಿ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ತೀವ್ರವಾಗಿ ಮನನೊಂದ ಸಾಫ್ಟ್‌ವೇರ್ ಎಂಜಿನಿಯರ್ ಹಾಗೂ ಆಕೆಯ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಅಮಾನವೀಯ ಘಟನೆ ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯ ಮಾರ್ಚೂರು ಎಂಬಲ್ಲಿ ನಡೆದಿದೆ.

​ಮೃತರನ್ನು ಬಿ.ಸಿ ಕಾಲೊನಿ ನಿವಾಸಿ ಸಿರಿಕೊಂಡ ಶ್ರೀನಿವಾಸರಾವ್ ಅವರ ಪತ್ನಿ ಸುಜಾತಾ (46) ಹಾಗೂ ಪುತ್ರಿ ದಿವ್ಯಾ (25) ಎಂದು ಗುರುತಿಸಲಾಗಿದೆ.

ಶ್ರೀನಿವಾಸರಾವ್ ದಂಪತಿಯ ಪುತ್ರ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದರೆ, ಪುತ್ರಿ ದಿವ್ಯಾ ಕಳೆದ ಮೂರು ವರ್ಷಗಳಿಂದ ಹೈದರಾಬಾದ್‌ನ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ದಿವ್ಯಾ ಅವರಿಗೆ ಮಾರ್ಚೂರು ಮೂಲದವರೇ ಆದ ಮತ್ತೊಬ್ಬ ಸಾಫ್ಟ್‌ವೇರ್ ಎಂಜಿನಿಯರ್ ಶೇಷು ಬಾಬು ಎಂಬಾತನ ಜೊತೆ ವಿವಾಹ ನಿಶ್ಚಯವಾಗಿತ್ತು. ಕಳೆದ ವರ್ಷ ಡಿಸೆಂಬರ್ 14 ರಂದು ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದ್ದು, ಈ ಬೇಸಿಗೆಯಲ್ಲಿ ಮದುವೆ ಮಾಡಲು ಸಕಲ ಸಿದ್ಧತೆಗಳು ನಡೆಯುತ್ತಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟ್ರಂಪ್‌ಗೆ ಚಿತ್ತಭ್ರಮೆಯೇ?; ಅಮೆರಿಕ ಅಧ್ಯಕ್ಷರ ಮಾನಸಿಕ ಆರೋಗ್ಯದ ಸುತ್ತ ಅನುಮಾನದ ಹುತ್ತ

ರಹಸ್ಯ ವಿಡಿಯೊ ತೋರಿಸಿ ಮದುವೆ ರದ್ದು
ಮಾರ್ಚ್ 4 ರಂದು ಈ ಮದುವೆ ಪ್ರಕರಣ ದಿಢೀರ್ ತಿರುವು ಪಡೆದುಕೊಂಡಿತು. ವರ ಶೇಷು ಬಾಬು, ದಿವ್ಯಾ ಹಾಗೂ ಆಕೆಯ ಪೋಷಕರನ್ನು ಮಾರ್ಚೂರಿನಲ್ಲಿರುವ ತನ್ನ ಮನೆಗೆ ಮಾತುಕತೆಗೆಂದು ಕರೆಸಿದ್ದನು. ಹೈದರಾಬಾದ್‌ನಲ್ಲಿ ದಿವ್ಯಾ ಅವರ ಹಿಂದೆಯೇ ರಹಸ್ಯವಾಗಿ ಹಿಂಬಾಲಿಸಿ ಚಿತ್ರೀಕರಿಸಿದ್ದಾಗಿ ಹೇಳಲಾದ ಕೆಲವು ಫೋಟೊ ಮತ್ತು ವಿಡಿಯೊಗಳನ್ನು ಆತ ಈ ಸಂದರ್ಭದಲ್ಲಿ ಅವರಿಗೆ ತೋರಿಸಿದ್ದಾನೆ. ಇವುಗಳನ್ನೇ ಮುಂದಿಟ್ಟುಕೊಂಡು, ತನಗೆ ಈ ಮದುವೆಗೆ ಇಷ್ಟವಿಲ್ಲ ಎಂದು ಹೇಳಿ ಏಕಾಏಕಿ ವಿವಾಹವನ್ನು ರದ್ದುಗೊಳಿಸಿದ್ದಾನೆ.

ಅನಿರೀಕ್ಷಿತವಾಗಿ ಮದುವೆ ಮುರಿದುಬಿದ್ದಿದ್ದರಿಂದ ದಿವ್ಯಾ ಹಾಗೂ ಅವರ ತಾಯಿ ಸುಜಾತಾ ತೀವ್ರ ಆಘಾತಕ್ಕೆ ಒಳಗಾಗಿದ್ದರು. ಸಂಬಂಧಿಕರು ನೀಡಿರುವ ಮಾಹಿತಿ ಪ್ರಕಾರ, ಇವರಿಬ್ಬರೂ ಮಾರ್ಚೂರಿನಲ್ಲಿ ಇಲಿ ಪಾಷಾಣ ಹಾಗೂ ಕಳೆನಾಶಕ ಖರೀದಿಸಿ, ನಂತರ ದ್ರೋಣಾದುಲ ಗ್ರಾಮಕ್ಕೆ ತೆರಳಿ ಅಲ್ಲಿ ವಿಷ ಸೇವಿಸಿದ್ದಾರೆ.

​ಮಾರ್ಚ್ 5ರ ಸಂಜೆ ಇವರಿಬ್ಬರೂ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ತಂದೆ ಶ್ರೀನಿವಾಸರಾವ್ ಅವರ ಗಮನಕ್ಕೆ ಬಂದಿದೆ. ತಕ್ಷಣವೇ ಇಬ್ಬರನ್ನೂ ಚಿಲಕಲೂರಿಪೇಟೆಯ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿನ ಪ್ರತ್ಯೇಕ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿತ್ತು. ಆದರೆ, ವೈದ್ಯರ ಸತತ ಪ್ರಯತ್ನದ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಗುರುವಾರ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸರಾವ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತ ಮಾಹಿತಿಯನ್ನು ಮಾರ್ಚೂರು ಠಾಣಾ ಪೊಲೀಸರಿಗೆ ರವಾನಿಸಲಾಗಿದ್ದು, ಅವರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...