ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ, ಜೀವ ಹಿಡಿದು ಕುಳಿತಿರುವ 140 ಪ್ರಯಾಣಿಕರು

Date:

ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದೊಳಗೆ ಹಾರಾಟದ ಮಧ್ಯದಲ್ಲೇ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು, ಲ್ಯಾಂಡಿಂಗ್ ಗೇರ್ ಅಸಮರ್ಪಕವಾಗಿದೆ.

140 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಿರುಚಿ ವಿಮಾನ ನಿಲ್ದಾಣಕ್ಕೆ ಹಿಂತಿರುಗುತ್ತಿದ್ದು ಪ್ರಸ್ತುತ ತುರ್ತು ಭೂಸ್ಪರ್ಶ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಂಧನವನ್ನು ಖಾಲಿ ಮಾಡುವ ಸಲುವಾಗಿ ಪೈಲಟ್ ಗಳು ಆಗಸದಲ್ಲೇ ಹಾರಾಟ ನಡೆಸುತ್ತಿದ್ದಾರೆ.

ಲ್ಯಾಂಡಿಂಗ್ ಸಮಯದಲ್ಲಿ ಬೆಂಕಿಯ ಅಪಾಯವನ್ನು ತಪ್ಪಿಸಲು, ವಿಮಾನದಲ್ಲಿನ ಇಂಧನ ಲೋಡ್ ಅನ್ನು ಕಡಿಮೆ ಮಾಡಿದ ನಂತರ ತುರ್ತು ಭೂಸ್ಪರ್ಶಕ್ಕೆ ಪ್ರಯತ್ನಿಸಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಮತ್ತು ಅಗ್ನಿಶಾಮಕ ವಾಹನಗಳನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಲಾಗಿದ್ದು, ಸಂಭವನೀಯ ಬೆಲ್ಲಿ ಲ್ಯಾಂಡಿಂಗ್‌ಗೆ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜೆ 5.43ರ ಸುಮಾರಿಗೆ ವಿಮಾನ ಟೇಕ್ ಆಫ್ ಆಗಿತ್ತು. ನಂತರ ವಿಮಾನದಲ್ಲಿ ಹೈಡ್ರಾಲಿಕ್ ಸಮಸ್ಯೆ ಪತ್ತೆಯಾದ ಕೂಡಲೇ ಪೈಲಟ್ ಗಳು ವಿಮಾನವನ್ನು ಮತ್ತು ತಿರುಚಿಗೆ ಡೈವರ್ಟ್ ಮಾಡಿದ್ದು ಸುರಕ್ಷಿತ ಲ್ಯಾಂಡಿಂಗ್ ಗಾಗಿ ಪ್ರಯತ್ನಿಸುತ್ತಿದ್ದಾರೆ. ಸತತ 3 ಗಂಟೆಯಿಂದ ವಿಮಾನವನ್ನು ಆಗಸದಲ್ಲೇ ಗಿರಕಿ ಹೊಡೆಸಲಾಗುತ್ತಿದ್ದು ಇಂಧನದ ಲೋಡ್ ಕಡಿಮೆಯಾದ ನಂತರ ತುರ್ತು ಭೂಸ್ಪರ್ಶಕ್ಕೆ ಯತ್ನಿಸಲಾಗುತ್ತದೆ.

ವಿಮಾನ ನಿಲ್ದಾಣದ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...