ತೆಲಂಗಾಣ: ನ್ಯಾ. ಶಮೀಮ್‌ ಅಕ್ತರ್‌ ಆಯೋಗದ ಜಾತಿಗಣತಿ ವರದಿ ವಿಧಾನಸಭೆಯಲ್ಲಿ ಮಂಡನೆ

Date:

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್‌ ಅಕ್ತರ್‌ ಒಳ ಮೀಸಲಾತಿ ಆಯೋಗ ಸಿದ್ಧಪಡಿಸಿರುವ ತೆಲಂಗಾಣ ಜಾತಿಗಣತಿ ವರದಿಯನ್ನು ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ.

ವರದಿ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ರೇವಂತ್ ರೆಡ್ಡಿ, “ಜನಗಣತಿಗಿಂತಲೂ ಕರಾರುವಾಕ್ಕಾಗಿ ಈ ಐತಿಹಾಸಿಕ ಸಮೀಕ್ಷೆ ನಡೆಸಲಾಗಿದೆ. ವರದಿ ದತ್ತಾಂಶಗಳನ್ನು ರಾಜ್ಯದಲ್ಲಿ ಕೈಗೊಳ್ಳುವ ವಿವಿಧ ಕಲ್ಯಾಣ ಯೋಜನೆಗಳಲ್ಲಿ ಬಳಸಿಕೊಳ್ಳಲಾಗುವುದು. ಈ ಮೂಲಕ ರಾಜ್ಯದಲ್ಲಿ ಸಾಮಾಜಿಕ-ರಾಜಕೀಯ ಬದಲಾವಣೆ ತರಲಾಗುವುದು’ ಎಂದಿದ್ದಾರೆ.

ರಾಜ್ಯದ ಶೇ.56.33ರಷ್ಟು ಮಂದಿ ಹಿಂದುಳಿದ ವರ್ಗಗಳಿಗೆ ಸೇರಿದವರೆಂದು ತಿಳಿದುಬಂದಿದ್ದು, ರಾಜಕೀಯ, ಶೈಕ್ಷಣಿಕ, ಉದ್ಯೋಗ ಕ್ಷೇತ್ರಗಳಲ್ಲಿ ಈ ವರದಿಯನ್ನು ಬಳಸಿ ಅವರಿಗೆ ಪ್ರಯೋಜನ ಕಲ್ಪಿಸಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ, ದೇಶಾದ್ಯಂತ ಜಾತಿಗಣತಿ ನಡೆಸುವಂತೆ ಕೇಂದ್ರಕ್ಕೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷದ (2024) ನವೆಂಬರ್ ಮತ್ತು ಡಿಸೆಂಬರ್‌ ತಿಂಗಳಲ್ಲಿ ನಡೆಸಿದ ಜಾತಿ ಜನಗಣತಿಯ ಪ್ರಕಾರ, ರಾಜ್ಯದ ಒಟ್ಟು ಜನಸಂಖ್ಯೆಯ ಶೇಖಡ 56.33ರಷ್ಟು ಹಿಂದುಳಿದ ಜಾತಿಗಳಿಗೆ ಸೇರಿದ ಜನರು ಇದ್ದಾರೆ.

ಹಿಂದುಳಿದ ಜಾತಿಗಳಲ್ಲಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ ಜನರು ಒಳಗೊಂಡಿದ್ದಾರೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆಯ ಪ್ರಕಾರ, ತೆಲಂಗಾಣದ ಜನಸಂಖ್ಯೆಯಲ್ಲಿ ಮುಸ್ಲಿಮರನ್ನು ಹೊರತುಪಡಿಸಿ ಶೇಕಡ 46.25ರಷ್ಟು ಹಿಂದುಳಿದ ಜಾತಿಯವರು ಇದ್ದಾರೆ. ಹಿಂದುಳಿದ ಮುಸ್ಲಿಮರ ಜನಸಂಖ್ಯೆ ಶೇಕಡ 10.08ರಷ್ಟಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

ಜನಗಣತಿಯ ವರದಿಯ ಪ್ರಕಾರ ತೆಲಂಗಾಣದ ಜಾತಿವಾರು ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿಗಳು – 61,84,319 (17.43%),ಪರಿಶಿಷ್ಟ ಪಂಗಡಗಳು- 37,05,929 (10.45%), ಹಿಂದುಳಿದ ಜಾತಿಗಳು (ಮುಸ್ಲಿಮರನ್ನು ಹೊರತುಪಡಿಸಿ) – 1,64,09,179 (46.25%), ಹಿಂದುಳಿದ ಜಾತಿಯ ಮುಸ್ಲಿಮರು – 35,76,588 (10.08%), ಇತರೆ ಜಾತಿಯ ಮುಸ್ಲಿಮರು – 8,80,424 (2.48%), ಇತರೆ ಜಾತಿಗಳು (ಮುಸ್ಲಿಮರನ್ನು ಹೊರತುಪಡಿಸಿ) – 13.31%, ಮುಸ್ಲಿಮರು (ಒಟ್ಟು) – 12.56%, ಇತರೆ ಜಾತಿಗಳು (ಒಟ್ಟು) – 15.79% ಇದ್ದಾರೆ ಎಂದು ರೇವಂತ್‌ ರೆಡ್ಡಿ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಕನಿಷ್ಠ 162 ಸಮುದಾಯಗಳನ್ನು ಹಿಂದುಳಿದ ಜಾತಿಗಳೆಂದು ವರ್ಗೀಕರಿಸಲಾಗಿದೆ. ಅವುಗಳನ್ನು ಎ, ಬಿ, ಸಿ, ಡಿ, ಇ ಎಂದು ಐದು ಗುಂಪುಗಳಾಗಿ ಉಪ ವರ್ಗೀಕರಣ ಮಾಡಲಾಗಿದೆ. ಇದರಲ್ಲಿ ಗುಂಪು ಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರನ್ನು ಒಳಗೊಂಡಿದೆ ಮತ್ತು ಗುಂಪು ಇ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಯ ಮುಸ್ಲಿಮರನ್ನು ಒಳಗೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಜಾತಿ ಸಮೀಕ್ಷೆ ಕೂಡ ಒಂದಾಗಿತ್ತು. ಶಿಕ್ಷಣ, ಉದ್ಯೋಗ ಮತ್ತು ಕಲ್ಯಾಣ ಯೋಜನೆಗಳಲ್ಲಿ ಹಿಂದುಳಿದಿರುವ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ವಿಸ್ತರಿಸುವುದಾಗಿಯೂ ಕಾಂಗ್ರೆಸ್ ಹೇಳಿತ್ತು.

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಶೇಖಡ 23 ರಿಂದ ಶೇಕಡ 42ಕ್ಕೆ ಹೆಚ್ಚಿಸುವುದಾಗಿ ಮತ್ತು ಸರ್ಕಾರಿ ನಾಗರಿಕ ನಿರ್ಮಾಣ ಮತ್ತು ನಿರ್ವಹಣಾ ಒಪ್ಪಂದಗಳಲ್ಲಿ ಶೇಖಡ 42 ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಜಾರಿಗೆ ತರುವುದಾಗಿಯೂ ಪಕ್ಷ ಭರವಸೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...