ತೆಲಂಗಾಣ | ಬಿಆರ್‌ಎಸ್‌ ಪಕ್ಷದಿಂದ ಪುತ್ರಿಯನ್ನೇ ಉಚ್ಚಾಟಿಸಿದ ತಂದೆ ಕೆ.ಚಂದ್ರಶೇಖರ್ ರಾವ್

Date:

ಭಾರತ ರಾಷ್ಟ್ರ ಸಮಿತಿ (BRS) ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು, ಈ ನಡುವೆ ಪಕ್ಷದ ಹಿರಿಯ ನಾಯಕಿ ಮತ್ತು ಎಂಎಲ್‌ಸಿ ಕೆ.ಕವಿತಾ ಅವರನ್ನು ಪಕ್ಷದಿಂದ ಮಂಗಳವಾರ (ಸೆ.2) ಅಮಾನತು ಮಾಡಲಾಗಿದೆ.

ಸ್ವ-ಪಕ್ಷದ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡಿದ್ದಕ್ಕಾಗಿಯೇ ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರು ತಮ್ಮ ಪುತ್ರಿ ಕೆ. ಕವಿತಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಿದ್ದಾರೆ.

ತೆಲಂಗಾಣದ ಪ್ರಮುಖ ವಿರೋಧ ಪಕ್ಷವಾದ ಭಾರತ ರಾಷ್ಟ್ರ ಸಮಿತಿಯ ಸಂಸ್ಥಾಪಕ ಕೆ. ಚಂದ್ರಶೇಖರ್ ರಾವ್ ಅವರ ಕುಟುಂಬದಲ್ಲಿ ಸಾಕಷ್ಟು ಗೊಂದಲಗಳು ನಡೆಯುತ್ತಿವೆ ಎಂಬುವುದು ಇಲ್ಲಿ ಉಲ್ಲೇಖನೀಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2014 ರಲ್ಲಿ ಬಿಆರ್‌ಎಸ್ ಅಧಿಕಾರದಲ್ಲಿದ್ದ ವೇಳೆ ನೀರಾವರಿ ಸಚಿವರಾಗಿದ್ದ ಹರೀಶ್ ರಾವ್ ಅವರು ಭ್ರಷ್ಟಾಚಾರ ಎಸಗಿರುವುದಾಗಿ ಹೇಳಿಕೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಪಕ್ಷದಿಂದ ಕೆ ಕವಿತಾ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯವೂ ಕೇಳಿಬಂದಿತ್ತು. ಇದೆಲ್ಲವನ್ನು ಪರಿಗಣಿಸಿ ಪಕ್ಷ ಕವಿತಾ ಅವರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ವಿರುದ್ಧ ಕೆ. ಕವಿತಾ ಗಂಭೀರ ಆರೋಪ ಮಾಡಿದ್ದಾರೆ. ಕೆಟಿಆರ್ ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...