ತೆಲಂಗಾಣ | ಉಮೇದುದಾರಿಕೆಯಲ್ಲಿ ಅಕ್ರಮ ; ಬಿಆರ್‌ಎಸ್‌ ಶಾಸಕ ವೆಂಕಟೇಶ್ವರ ರಾವ್‌ ಅನರ್ಹಗೊಳಿಸಿದ ಹೈಕೋರ್ಟ್‌

Date:

  • 2018ರ ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ವೆಂಕಟೇಶ್ವರ ರಾವ್‌ ತಪ್ಪು ಆಸ್ತಿ ವಿವರ ಸಲ್ಲಿಕೆ ಆರೋಪ
  • ಶಾಸಕ ವೆಂಕಟೇಶ್ವರ ರಾವ್‌ ವಿರುದ್ಧ ರಾಜ್ಯ ಹೈಕೋರ್ಟ್‌ಗೆ ದೂರು ನೀಡಿದ್ದ ಸೋತ ಅಭ್ಯರ್ಥಿ ಜಲಗಂ

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಉಮೇದುದಾರಿಕೆಯಲ್ಲಿ ಆಸ್ತಿ ವಿವರದ ಬಗ್ಗೆ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಕೊತಗುಡೆಂನ ಕ್ಷೇತ್ರದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ವನಮಾ ವೆಂಕಟೇಶ್ವರ ರಾವ್‌ ಅವರನ್ನು ರಾಜ್ಯ ಹೈಕೋರ್ಟ್‌ ಬುಧವಾರ (ಜುಲೈ 28) ಅನರ್ಹಗೊಳಿಸಿ ಆದೇಶ ನೀಡಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ವೆಂಕಟೇಶ್ವರ ರಾವ್‌ ನಂತರದ ಸ್ಥಾನ ಪಡೆದಿದ್ದ ಬಿಆರ್‌ಎಸ್‌ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಜಲಗಂ ವೆಂಕಟ ರಾವ್‌ ಅವರನ್ನು ಚುನಾಯಿತ ಅಭ್ಯರ್ಥಿ ಎಂದು ನ್ಯಾಯಾಲಯ ಘೋಷಿಸಿದೆ.

ತೆಲಂಗಾಣದ ಚುನಾವಣೆಯಲ್ಲಿ ವೆಂಕಟೇಶ್ವರ ರಾವ್‌ ಅವರು ಈ ಮುನ್ನ ಕಾಂಗ್ರೆಸ್‌ನಿಂದ ಚುನಾಯಿತರಾಗಿದ್ದರು. ಬಳಿಕ ಇತರ 12 ಶಾಸಕರೊಂದಿಗೆ ಬಿಆರ್‌ಎಸ್‌ ಸೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ವೆಂಕಟೇಶ್ವರ ರಾವ್‌ ವಿರುದ್ಧ ಬಿಆರ್‌ಎಸ್ (ಈ ಮುನ್ನ ಟಿಆರ್‌ಎಸ್‌ ಅಥವಾ ತೆಲಂಗಾಣ ರಾಷ್ಟ್ರ ಸಮಿತಿ ಎಂದು ಕರೆಯಲಾಗುತ್ತಿತ್ತು) ಸದಸ್ಯರಾಗಿದ್ದ ಜಲಗಂ ಅವರು ರಾಜ್ಯ ಹೈಕೋರ್ಟ್‌ಗೆ ದೂರು ನೀಡಿದ್ದರು.

ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಾಧಾ ರಾಣಿ ಅರ್ಜಿ ವಿಚಾರಣೆ ನಡೆಸಿ ವೆಂಕಟೇಶ್ವರ ರಾವ್‌ ಅವರನ್ನು ಅಮಾನತುಗೊಳಿಸಿ ₹5 ಲಕ್ಷ ದಂಡ ವಿಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಇಂಟರ್‌ನೆಟ್‌ ಸ್ಥಗಿತ ತೆರವು; ಸಾಮಾಜಿಕ ಮಾಧ್ಯಮಕ್ಕೆ ನಿರ್ಬಂಧ ಮುಂದುವರಿಕೆ

ಈ ವರ್ಷಾಂತ್ಯ ಡಿಸೆಂಬರ್‌ನಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ. 2024ರ ಜನವರಿ 16ರಂದು ಚುನಾವಣೆ ಕೊನೆಗೊಳ್ಳಲಿದೆ.

ವೆಂಕಟೇಶ್ವರ ರಾವ್‌ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಮ್ಮ ಹಾಗೂ ತಮ್ಮ ಪತ್ನಿಯ ಆಸ್ತಿಯ ವಿವರ ಪೂರ್ಣ ಮಾಹಿತಿ ನೀಡಿಲ್ಲ ಎಂದು ಹೈಕೋರ್ಟ್‌ಗೆ ಸಲ್ಲಿಸಿದ ದೂರಿನಲ್ಲಿ ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...