ತೆಲಂಗಾಣ | ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಶಾಲೆ ಮೇಲೆ ದಾಳಿ

Date:

ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಾಂಶುಪಾಲರು ಪ್ರಶ್ನಿಸಿದ ನಂತರ ಗುಪೊಂದು ಶಾಲೆಯ ಮೇಲೆ ದಾಳಿ ಮಾಡಿ ಇಬ್ಬರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ತೆಲಂಗಾಣ ದ ಮಂಚರಿಯಲ್‌ ಜಿಲ್ಲೆಯ ಮಿಷನರಿ ಶಾಲೆಯಲ್ಲಿ ಎರಡು ದಿನಗಳ ಹಿಂದೆ(ಏ.15) ನಡೆಸಿದೆ

ಈ ನಡುವೆ ವಿದ್ಯಾರ್ಥಿಗಳ ಪೋಷಕರು ಕೂಡ ಪ್ರಾಂಶುಪಾಲರು ಒಳಗೊಂಡು ಶಾಲೆಯ ಇಬ್ಬರು ಸಿಬ್ಬಂದಿ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಹಾಗೂ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ಹೈದರಾಬಾದ್‌ನಿಂದ 250 ಕಿಮೀ ದೂರದಲ್ಲಿರುವ ಕನ್ನೆಪಲ್ಲಿ ಗ್ರಾಮದಲ್ಲಿ ಇರುವ ಮದರ್‌ ತೆರೇಸಾ ಪ್ರೌಢಶಾಲೆಯಲ್ಲಿ ಪ್ರಾಂಶುಪಾಲರಾದ ಜೈಮೊನ್‌ ಜೋಸೆಫ್ ಅವರು ಕೆಲವು ವಿದ್ಯಾರ್ಥಿಗಳು ಕೇಸರಿ ಉಡುಪು ಧರಿಸಿದ್ದನ್ನು ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಂಶುಪಾಲರ ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳು ಹನುಮಾನ್‌ ಧೀಕ್ಷ ಕಾರ್ಯಕ್ರಮದ ಅಂಗವಾಗಿ ಉಡುಪು ಧರಿಸಿರುವುದಾಗಿ ತಿಳಿಸಿದ್ದರು. ಈ ವಿಷಯದ ಬಗ್ಗೆ ಚರ್ಚಿಸಲು ತಮ್ಮ ಪೋಷಕರನ್ನು ಕರೆದುಕೊಂಡು ಬರುವಂತೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೂಚಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ನಂತರ ಗುಂಪೊಂದು ಶಾಲೆಯ ಮೇಲೆದಾಳಿ ನಡೆಸಿ ಶಾಲೆಯ ಕೆಲವು ಆಸ್ತಿಪಾಸ್ತಿಗಳನ್ನು ನಾಶಪಡಿಸಿದೆ. ಇಬ್ಬರು ಸಿಬ್ಬಂದಿ ಮೇಲೆಯೂ ದಾಳಿ ನಡೆಸಲಾಗಿದೆ.

ಗಲಭೆ ನಡೆದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ಆಚೆ ಕಳಿಸಿದ್ದಾರೆ. ವೈರಲ್ ಆಗುತ್ತಿರುವ ಒಂದು ವಿಡಿಯೋದಲ್ಲಿ ಗುಂಪು ಮದರ್‌ ತೆರೇಸಾ ಶಾಲೆಯ ಆವರಣದಲ್ಲಿ ಕಲ್ಲುಗಳನ್ನು ಎಸೆಯುತ್ತಿರುವುದು ಕಂಡುಬಂದಿದೆ.

ಗುಂಪಿನಲ್ಲಿದ್ದ ಕೆಲವರು ಪ್ರಾಂಶುಪಾಲರನ್ನು ಸುತ್ತುವರಿದು ಹಣೆಗೆ ಕುಂಕುಮ ಇಡುವಂತೆ ಒತ್ತಾಯಿಸಿದ್ದು, ಕ್ಷಮೆ ಕೇಳುವಂತೆ ಆಗ್ರಹಿಸಿದ ಫೋಟೋ ಹಾಗೂ ಭಾವಚಿತ್ರಗಳು ವೈರಲ್ ಆಗಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...