ತೆಲಂಗಾಣ | ಬಿಆರ್‌ಎಸ್‌ಗೆ ಮತ್ತೆ ಆಘಾತ; ಕಾಂಗ್ರೆಸ್ ಸೇರ್ಪಡೆಗೊಂಡ 6 ಶಾಸಕರು

Date:

ಕೆ ಚಂದ್ರಶೇಖರ್‌ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಮತ್ತೊಮ್ಮೆ ಭಾರಿ ಹಿನ್ನಡೆಯಾಗಿದ್ದು, ಆರು ವಿಧಾನ ಪರಿಷತ್‌ ಸದಸ್ಯರು ಇಂದು ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.

ದಂಡೆ ವಿಠಲ್, ಭಾನು ಪ್ರಸಾದ್, ಬಿ ದಯಾನಂದ್, ಪ್ರಭಾಕರ್ ರಾವ್, ಬಸವರಾಜ್ ಸರಯ್ಯ ಹಾಗೂ ಇ ಮಲ್ಲೇಶಯ್ಯ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಶಾಸಕರು. ದೆಹಲಿಗೆ ಎರಡು ದಿನದ ಪ್ರವಾಸಕ್ಕೆ ತೆರಳಲಿರುವ ರೇವಂತ್‌ ರೆಡ್ಡಿ ವಾಪಸಾದ ನಂತರ 6 ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ.

ಈ ಹೊಸ ಬೆಳವಣಿಗೆಯೊಂದಿಗೆ ಆಡಳಿತರೂಢ ಕಾಂಗ್ರೆಸ್‌ನ ಮೇಲ್ಮನೆ ಸದಸ್ಯರ ಸಂಖ್ಯೆ 12ಕ್ಕೆ ಏರಿಕೆಯಾಗಲಿದೆ. ತೆಲಂಗಾಣದ 40 ಸದಸ್ಯರ ವಿಧಾನ ಪರಿಷತ್‌ನಲ್ಲಿ 21 ಬಿಆರ್‌ಎಸ್, ಎಐಎಂಐಎಂ 2, ಬಿಜೆಪಿ 2 ಹಾಗೂ ಇಬ್ಬರು ಪಕ್ಷೇತರ ಶಾಸಕರಿದ್ದಾರೆ. ಎರಡು ಸ್ಥಾನ ಖಾಲಿಯುಳಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸೇರ್ಪಡೆ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ ಕೇಶವ್ ರಾವ್

ತೆಲಂಗಾಣ ವಿಧಾನಸಭೆ ಚುನಾವಣೆಯಾದ ನಂತರ ರಾಜಕೀಯವಾಗಿ ಬಿಆರ್‌ಎಸ್‌ ಭಾರಿ ಹಿನ್ನಡೆ ಅನುಭವಿಸುತ್ತಿದೆ. ಪಕ್ಷದ ಸೋಲಿನ ಜೊತೆ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಹಲವು ಶಾಸಕರು ಕಾಂಗ್ರೆಸ್‌ಗೆ ಪಕ್ಷಾಂತರಗೊಳ್ಳುತ್ತಿದ್ದಾರೆ. ಇತ್ತೀಚಿಗೆ ಒಂದು ದಿನದ ಹಿಂದಷ್ಟೆ ಬಿಆರ್‌ಎಸ್‌ ರಾಜ್ಯಸಭಾ ಸದಸ್ಯರಾದ ಕೆ ಕೇಶವ ರಾವ್‌ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.

ಕಳೆದ ವರ್ಷ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 119 ಸ್ಥಾನಗಳ ಪೈಕಿ ಕಾಂಗ್ರೆಸ್‌ 64 ಸ್ಥಾನಗಳಿಸಿ ಸರ್ಕಾರ ರಚಿಸಿದರೆ ಬಿಆರ್‌ಎಸ್‌ 39 ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿತ್ತು. ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಸಿಕಂದರಾಬಾದ್‌ ಕ್ಷೇತ್ರದ ಬಿಆರ್‌ಎಸ್‌ ಶಾಸಕಿ ಜಿ ಲಾಸ್ಯ ನಂದಿತಾ ಮೃತಪಟ್ಟಿದ್ದರು. ಈ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಇದರ ನಡುವೆ ಬಿಆರ್‌ಎಸ್ 6 ಶಾಸಕರು ಕಾಂಗ್ರೆಸ್‌ ಸೇರ್ಪಡೆಗೊಂಡ ಪರಿಣಾಮ ಕೈ ಶಾಸಕರ ಸಂಖ್ಯೆ 71ಕ್ಕೆ ಏರಿಕೆಯಾಗಿ ಭಾರತ್‌ ರಾಷ್ಟ್ರ ಸಮಿತಿ ಶಾಸಕರ ಸಂಖ್ಯೆ 32ಕ್ಕೆ ಕುಸಿದಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...