ಹವಾಮಾನ | ಹರಿಯಾಣದಲ್ಲಿ ಆವರಿಸಿದ ಮಂಜು: ಮಧ್ಯಪ್ರದೇಶದಲ್ಲಿ ಉಷ್ಣಾಂಶ ತೀವ್ರ ಕುಸಿತ, ಶಾಲೆಗಳಿಗೆ ರಜೆ

Date:

ದೇಶದಲ್ಲಿ ಚಳಿ ಹೆಚ್ಚಾಗುತ್ತಿದ್ದು, ಹರಿಯಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನದಲ್ಲಿ ಉಷ್ಣಾಂಶ ತೀವ್ರ ಪ್ರಮಾಣದಲ್ಲಿ ಕುಸಿಯುತ್ತಿದ್ದು ದಟ್ಟವಾದ ಮಂಜು ಆವರಿಸಿದೆ. ಹಲವು ಸ್ಥಳಗಳಲ್ಲಿ ದಾರಿಯೇ ಕಾಣದಂತಾಗಿದೆ. ಕೆಲವು ರಾಜ್ಯಗಳಲ್ಲಿ ಶಾಲೆಗಳಲ್ಲಿ ರಜೆಯನ್ನೂ ಘೋಷಿಸಲಾಗಿದೆ. ಮುಖ್ಯವಾಗಿ ಮಂಜು ಜನಜೀವನ ಮತ್ತು ಸಂಚಾರದ ಮೇಲೆ ತೀವ್ರ ಪರಿಣಾಮ ಬೀರಿದೆ.

ಹರಿಯಾಣದ ಹಿಸಾರ್‌ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಅಂದರೆ 2.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 3 ಡಿಗ್ರಿಯಷ್ಟು ಕಡಿಮೆಯಾಗಿದೆ. ಇನ್ನುಳಿದಂತೆ ನರ್ನಾಲ್ 4°C, ಭಿವಾನಿ 5.5°C, ರೋಹ್ಟಕ್ 7.2°C, ಚಂಡೀಗಢ 5.6°C ಮತ್ತು ಅಂಬಾಲಾ 8°C ಉಷ್ಣಾಂಶ ದಾಖಲಾಗಿದೆ. ಈ ಪ್ರದೇಶಗಳಲ್ಲಿ ಗೋಚರತೆಯ ಮಟ್ಟ (Visibility) 20 ರಿಂದ 50 ಮೀಟರ್‌ಗಿಂತಲೂ ಕಡಿಮೆಯಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಇದನ್ನು ಓದಿದ್ದೀರಾ? ವಾಯುಮಾಲಿನ್ಯ | ದೆಹಲಿಯಲ್ಲ ದೇಶದ ‘ಟಾಪ್‌ 5’ ಅತಿ ಕಲುಷಿತ ನಗರಗಳಿವು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಹವಾಮಾನ ಇಲಾಖೆ (IMD) ಹರಿಯಾಣದ ಹಲವು ಭಾಗಗಳಿಗೆ ಡಿಸೆಂಬರ್ 31ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ದಟ್ಟವಾದ ಮಂಜು ಹಾಗೆಯೇ ಇರುತ್ತದೆ ಮತ್ತು ಚಳಿ ಇನ್ನಷ್ಟೂ ಅಧಿಕವಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಗೋಚರತೆಯ ಕೊರತೆಯಿಂದಾಗಿ ರೈಲು ಮತ್ತು ವಿಮಾನ ಸಂಚಾರವೂ ವಿಳಂಬವಾಗಿದೆ.

ಇನ್ನು ಹರಿಯಾಣದ ಶಿಕ್ಷಣ ಇಲಾಖೆಯು ಈ ಹಿಂದೆ ಕೆಲವು ಕಡೆಗಳಲ್ಲಿ ಶಾಲಾ ಸಮಯವನ್ನು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 3:30ಕ್ಕೆ ಬದಲಾಯಿಸಿತ್ತು. ಸಾಮಾನ್ಯವಾಗಿ ಬೆಳಿಗ್ಗೆ 7:55 ರಿಂದ ಮಧ್ಯಾಹ್ನ 12:30 ರವರೆಗೆ ಮತ್ತು ಮಧ್ಯಾಹ್ನ 12:40 ರಿಂದ ಸಂಜೆ 5:15 ರವರೆಗೆ ಎರಡು ಪಾಳಿಯಲ್ಲಿ ಶಾಲೆ ನಡೆಯುತ್ತಿತ್ತು. ಆದರೆ ಚಳಿಗಾಲದ ಕಾರಣ ಶಾಲಾ ಅವಧಿ ಬದಲಾಯಿಸಲಾಗಿತ್ತು. ಅದಾದ ಬಳಿಕ ಇದೀಗ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ 2026ರ ಜನವರಿ 1ರಿಂದ 15ರವರೆಗೆ ಅಧಿಕೃತ ಚಳಿಗಾಲದ ರಜೆ ಘೋಷಿಸಲಾಗಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ತೀವ್ರ ಕುಸಿತ ಉಷ್ಣಾಂಶ

ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಉಷ್ಣಾಂಶ ತೀವ್ರ ಕುಸಿದಿದೆ. ಡಿಸೆಂಬರ್ 30ರವರೆಗೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಹಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ತಾಪಮಾನವು 2.5°C ಗೆ ಕುಸಿದಿದ್ದು, ಇದು ರಾಜ್ಯದ ಅತ್ಯಂತ ತಂಪಾದ ನಗರ ಎನಿಸಿಕೊಂಡಿದೆ. ಇನ್ನುಳಿದಂತೆ 30 ನಗರಗಳಲ್ಲಿ ಉಷ್ಣಾಂಶವು 10°C ಗಿಂತ ಕಡಿಮೆಯಾಗಿದೆ. ಗ್ವಾಲಿಯರ್‌ನಂತಹ ಪ್ರದೇಶಗಳಲ್ಲಿ ಕನಿಷ್ಠ ಉಷ್ಣಾಂಶ 6.7°C ದಾಖಲಾಗಿದೆ. ತೀವ್ರ ಚಳಿಯ ಕಾರಣ ಗ್ವಾಲಿಯರ್ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಡಿಸೆಂಬರ್ 30ರಂದು ರಜೆ ಘೋಷಿಸಲಾಗಿದೆ.

ಇದನ್ನು ಓದಿದ್ದೀರಾ? ಮುಂದಿನ ಒಂದು ವಾರ ಹಗಲು, ರಾತ್ರಿ ಸಾಧಾರಣ ಮಳೆ ಸಾಧ್ಯತೆ

ಛತ್ತೀಸ್‌ಗಢದಲ್ಲಿ ಕನಿಷ್ಠ ತಾಪಮಾನವು 9°C ಆಸುಪಾಸಿನಲ್ಲಿದೆ. ತೀವ್ರ ಚಳಿಯಿರುವ ಕಾರಣ ವೃದ್ಧರು ಮತ್ತು ಉಸಿರಾಟದ ಸಮಸ್ಯೆ ಇರುವವರು ಮುಂಜಾನೆ ಮತ್ತು ರಾತ್ರಿ ವೇಳೆ ಮನೆಯಲ್ಲೇ ಇರುವಂತೆ, ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯು ತಿಳಿಸಿದೆ.

ರಾಜಸ್ಥಾನದಲ್ಲಿ ಸತತ ಮೂರನೇ ದಿನವೂ ಶೀತಗಾಳಿ ಮುಂದುವರೆದಿದ್ದು, ಶಿಕಾರ್ ಜಿಲ್ಲೆಯ ಫತೇಪುರ್ 3.5°C ಕನಿಷ್ಠ ತಾಪಮಾನ ದಾಖಲಾಗಿದೆ. ಜೈಪುರದಲ್ಲಿ 8.5°C ನಿಂದ 9.3°C ರವರೆಗೆ ದಾಖಲಾಗಿದೆ. ದೌಸಾ 4.5°C, ಅಲ್ವಾರ್ 4.8°C, ಸಿಕಾರ್ 5.0°C, ಮೌಂಟ್ ಅಬು ಮತ್ತು ವನಸ್ಥಲಿಯಲ್ಲಿ ತಲಾ 5.1°C ಉಷ್ಣಾಂಶ ದಾಖಲಾಗಿದೆ.

ಇನ್ನು ಪಶ್ಚಿಮದ ಮಾರುತಗಳ (Western Disturbance) ಪ್ರಭಾವದಿಂದಾಗಿ ಡಿಸೆಂಬರ್ 31 ಮತ್ತು ಜನವರಿ 1ರಂದು ಬಿಕಾನೇರ್, ಚುರು, ಸಿಕಾರ್ ಮತ್ತು ಜುಂಜುನು ಸೇರಿದಂತೆ ರಾಜಸ್ಥಾನದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಹೊಸ ವರ್ಷದ ಆರಂಭದಲ್ಲಿ ಚಳಿ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...